ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಆಚರಣೆ : ಕೆಜಿಎಫ್ :ಕೆಜಿಎಫ್ ನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಅಂತರ ರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆಯನ್ನು ಹಾಗೂ ಭಾರತದ ಸಂವಿಧಾನ ಪೀಠಿಕೆಯನ್ನು ಓದುವ ಕಾರ್ಯಕ್ರಮವನ್ನು ಏರ್ಪಡಿಸಲಾಗಿತ್ತು. ಸಂವಿಧಾನ ಶಿಲ್ಪಿ ಡಾ. ಬಿ ಆರ್ ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಹಾಗೂ ಸಂವಿಧಾನ ಪೀಠಿಕೆಗೆ ಪುಷ್ಪಾರ್ಚನೆ ಸಲ್ಲಿಸುವುದರ ಮೂಲಕ ಕಾರ್ಯಕ್ರಮವನ್ನು ಪ್ರಾರಂಭಿಸಿದರು. ನಂತರ ಸಹಾಯಕ ಪ್ರಾಧ್ಯಾಪಕರಾದ ಡಾ.ವೆಂಕಟೇಶ ವಿ ರವರು ಸಂವಿಧಾನ ಪೀಠಿಕೆಯನ್ನು ಎಲ್ಲರಿಗೂ ಬೋಧಿಸಿ, ಸಂವಿಧಾನ ಪೀಠಿಕೆಯ ಮಹತ್ವವನ್ನು ತಿಳಿಸಿದರು. ಈ ಸಂದರ್ಭದಲ್ಲಿ ಕಾಲೇಜಿನ ಪ್ರಾಂಶುಪಾಲರಾದ ಡಾ. ಕೆ ನಾರಾಯಣ ರವರು ಪ್ರಜಾಪ್ರಭುತ್ವದ ಪ್ರಾಮುಖ್ಯತೆ ಹಾಗೂ ಸಂವಿಧಾನವನ್ನು ಕುರಿತು ಮಾತನಾಡಿದರು. ಕಾರ್ಯಕ್ರಮದಲ್ಲಿ ಪ್ರೊ. ವಿಶ್ವೇಶ್ವರ ಬಿ ವೈ, ಡಾ. ಕೌಸರ್ ಉನ್ನೀಸ, ಪ್ರೊ ಶ್ರೀನಿವಾಸ ಮೂರ್ತಿ ಹಾಗೂ ಕಾಲೇಜಿನ ಎಲ್ಲಾ ಅಧ್ಯಾಪಕರು, ಬೋಧಕೇತರ ಸಿಬ್ಬಂದಿ ಮತ್ತು ಎಲ್ಲಾ ವಿದ್ಯಾರ್ಥಿಗಳು ಭಾಗವಹಿಸಿದ್ದರು.

Sep 17, 2023

Leave a Reply

Your email address will not be published. Required fields are marked *