ಚಿಕ್ಕಬಳ್ಳಾಪುರ: ಶಿಕ್ಷಣದಿಂದ ಮಾತ್ರ ಉತ್ತಮ ಭವಿಷ್ಯ ರೂಪಿಸಿಕೊಳ್ಳಲು ಸಾಧ್ಯ. ವಿದ್ಯಾರ್ಥಿಗಳು ಇದನ್ನು ಅರಿತು ಓದಿನ ಕಡೆಗೆ ಹೆಚ್ಚು ಗಮನ ಹರಿಸಬೇಕು ಎಂದು ಶ್ರೀ ರೇವಣಸಿದ್ದೇಶ್ವರ ಶಿಕ್ಷಣ ಸಂಸ್ಥೆಗಳ ಸಂಸ್ಥಾಪಕ ಆರ್.ಕೃಷ್ಣಪ್ಪ ಅವರು ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು.

ನಗರದ ಹೊರವಲಯದಲ್ಲಿರುವ ಶ್ರೀ ಕೃಷ್ಣರುಕ್ಮಿಣಿ ಪದವಿ ಮತ್ತು ಪದವಿ ಪೂರ್ವ ಕಾಲೇಜಿನಲ್ಲಿ ಶುಕ್ರವಾರ ಆಯೋಜಿಸಿದ್ದ ಕಾಲೇಜು ವಾರ್ಷಿಕೋತ್ಸವ ಸಮಾರಂಭವನ್ನು ಉದ್ಘಾಟಿಸಿ ನಂತರ ಅವರು ಮಾತನಾಡಿದರು.

ಪೋಷಕರು ತಮ್ಮ ಮಕ್ಕಳು ಎಲ್ಲದರಲ್ಲೂ ಅತ್ಯುತ್ತಮರಾಗಬೇಕೆಂಬ ಕನಸನ್ನು ಕಂಡಿರುತ್ತಾರೆ. ಅವರ ಕನಸು ನನಸು ಮಾಡಲು ವಿದ್ಯಾರ್ಥಿಗಳು ಗುರಿ ಇಟ್ಟುಕೊಂಡು ಕಠಿಣ ಪರಿಶ್ರಮ ವಹಿಸಿ ನಿರಂತರ ಅಧ್ಯಯನ ಮಾಡುವ ಮೂಲಕ ಜೀವನದಲ್ಲಿ ಉತ್ತಮ ಸಾಧನೆ ಮಾಡಬೇಕು. ನೀವು ಸಾಧಕರಾದರೆ ಪೋಷಕರು ಸಂತೋಷ ಪಡಲಿದ್ದಾರೆ ಎಂದು ಹೇಳಿದರು.

ಪ.ಪೂ.ಶಿ ಇಲಾಖೆಯ ಉಪನಿರ್ದೇಶಕ ಎಂ.ಮರಿಸ್ವಾಮಿ ಮಾತನಾಡಿ, ವಿದ್ಯಾರ್ಥಿ ಜೀವನದಲ್ಲಿ ಗುರಿ ಸ್ಪಷ್ಟವಿದ್ದು, ಜ್ಞಾನ ಸಂಪಾದನೆಯ ಕಡೆಗೆ ಹೆಚ್ಚು ಗಮನ ಹರಿಸಿದರೆ ಉತ್ತಮ ಸಾಧನೆ ಮಾಡಬಹುದು. ನಾವು ಯಾವ ಕೆಲಸವನ್ನು ಮಾಡಿದರೂ ಅದಕ್ಕೆ ಪ್ರಯತ್ನ ಮುಖ್ಯ. ಆಗ ಮಾತ್ರ ಯಶಸ್ಸು ಲಭಿಸುತ್ತದೆ ಎಂದು ತಿಳಿಸಿದರು.

ಕಾಲೇಜು ವಾರ್ಷಿಕೋತ್ಸವ ಅಂಗವಾಗಿ ವಿದ್ಯಾರ್ಥಿಗಳು ಸಾಂಸ್ಕøತಿಕ ಕಾರ್ಯಕ್ರಮಗಳನ್ನು ನಡೆಸಿಕೊಟ್ಟರು. ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಲಾಯಿತು.
ಈ ಸಂದರ್ಭದಲ್ಲಿ ಶ್ರೀ ರೇವಣಸಿದ್ದೇಶ್ವರ ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿ ರುಕ್ಮಿಣಿಯಮ್ಮ, ಶ್ರೀ ರೇವಣಸಿದ್ದೇಶ್ವರ ಶಿಕ್ಷಣ ಸಂಸ್ಥೆಗಳ ನಿರ್ದೇಶಕ ಕೆ.ಕೇಶವ್, ಕೆ.ಯೋಗೆಶ್, ಕಾಲೇಜಿನ ಪ್ರಾಂಶುಪಾಲ ಎನ್.ಪ್ರವೀಣ್, ಇತಿಹಾಸ ಉಪನ್ಯಾಸಕ ಸಿ.ಶಶಿಕುಮಾರ್, ಚಿತ್ರದುರ್ಗದ ಪರಶುರಾಮಪುರ ಸ.ಪ್ರ.ದ.ಕಾಲೇಜಿನ ಆಂಗ್ಲಬಾಷಾ ಸಹಪ್ರಾಧ್ಯಾಪಕ ಪ್ರೇಮ್ ಕುಮಾರ್, ವಿದ್ಯಾರ್ಥಿಗಳು ಹಾಜರಿದ್ದರು.

Leave a Reply

Your email address will not be published. Required fields are marked *