ಯಲಹಂಕ : ಟಿಟಿಡಿ ಆಡಳಿತ ಮಂಡಳಿಯ ನಿರ್ದೇಶಕ, ಯಲಹಂಕ ಶಾಸಕ ಎಸ್ ಆರ್ ವಿಶ್ವನಾಥ್ ರವರ ಸ್ವಗ್ರಾಮ ಸಿಂಗನಾಯಕನಹಳ್ಳಿ ಗ್ರಾಮದಲ್ಲಿ ಶನಿವಾರ ಸಂಜೆ ವಿಶೇಷ ಮೆರವಣಿಗೆ, ವಿವಿಧ ರಾಜ್ಯಗಳಿಂದ ಕರೆ ತಂದಿದ್ದ ಜಾನಪದ ಕಲಾ ತಂಡಗಳ ವಾದ್ಯಗಳೊಂದಿಗೆ ಗಣೇಶ ವಿಸರ್ಜನೆ ಕಾರ್ಯಕ್ರಮ ಅದ್ಧೂರಿಯಾಗಿ ನೆರವೇರಿತು.
ಗಣೇಶ ವಿಸರ್ಜನೆ ಕಾರ್ಯಕ್ರಮದ ಪ್ರಯುಕ್ತ ವಿಶೇಷ ರೀತಿಯಲ್ಲಿ ಅಲಂಕೃತಗೊಳಿಸಲಾಗಿದ್ದ ಗಣೇಶ ಪ್ರತಿಮೆಯನ್ನು ತೆರೆದ ವಾಹನದಲ್ಲಿ ಪ್ರತಿಷ್ಠಾಪಿಸಿ, ಗ್ರಾಮದ ಬೀದಿ ಬೀದಿಗಳಲ್ಲಿ ವಿವಿಧ ಜಾನಪದ ಕಲಾ ತಂಡಗಳ ವಾದ್ಯ ಹಾಗೂ ನೃತ್ಯದೊಂದಿಗೆ, ಪಟಾಕಿ ಸಿಡಿಸಿ ಸಂಭ್ರಮದಿಂದ ಮೆರವಣಿಗೆ ನಡೆಸಲಾಯಿತು.
ಸಿಂಗನಾಯಕನಹಳ್ಳಿ ರೈತ ಸೇವಾ ಸಹಕಾರ ಸಂಘದ ಅಧ್ಯಕ್ಷರಾದ ವಾಣಿಶ್ರೀ ವಿಶ್ವನಾಥ್, ವಿಶ್ವವಾಣಿ ಫೌಂಡೇಶನ್ ನ ನಿರ್ದೇಶಕ, ಯುವ ಮುಖಂಡ ಅಲೋಕ್ ವಿಶ್ವನಾಥ್ ರವರು ಗಣಪನಿಗೆ ಹಾರ, ತುರಾಯಿ, ಹಣ್ಣ, ಕಾಯಿ ನೈವೇದ್ಯದೊಂದಿಗೆ ಪೂಜೆ ಸಲ್ಲಿಸಿ, ನಮಿಸಿದರು.
ಸಿಂಗನಾಯಕನಹಳ್ಳಿ ಗ್ರಾ.ಪಂ.ಉಪಾಧ್ಯಕ್ಷ ಎಸ್ ಜಿ ಪ್ರಶಾಂತ್ ರೆಡ್ಡಿ, ಹಿರಿಯ
ಬಿಜೆಪಿ ಮುಖಂಡ ಎಸ್ ಎನ್ ರಾಜಣ್ಣ, ಕ್ಷೇತ್ರ ಬಿಜೆಪಿ ಪ್ರಧಾನ ಕಾರ್ಯದರ್ಶಿ ಎಸ್ ಆರ್ ಜನಾರ್ಧನ್, ಮಾಜಿ ಗ್ರಾ.ಪಂ.ಅಧ್ಯಕ್ಷ ಚಂದ್ರಶೇಖರ್, ಗ್ರಾ.ಪಂ.ಸದಸ್ಯ ಕೆ.ಬಾಬು ವಿಸರ್ಜನಾ ಕಾರ್ಯಕ್ರಮದ ನೇತೃತ್ವ ವಹಿಸಿದ್ದು, ಶಾಸಕ ಎಸ್ ಆರ್ ವಿಶ್ವನಾಥ್ ರವರ ಮಾರ್ಗದರ್ಶನದಲ್ಲಿ ಗಣೇಶ ವಿಸರ್ಜನಾ ಕಾರ್ಯಕ್ರಮ ಅದ್ಧೂರಿಯಾಗಿ ನೆರವೇರಿತು.

