ಯಲಹಂಕ : ಪ್ರಧಾನಿ ನರೇಂದ್ರ ಮೋದಿಯವರ ಹುಟ್ಟು ಹಬ್ಬದ ಪ್ರಯುಕ್ತ ಯಲಹಂಕ ಕ್ಷೇತ್ರದ ಮಾದನಾಯಕನಹಳ್ಳಿ ಬಿ.ಜೆ.ಪಿ ಕಚೇರಿಯಲ್ಲಿ ಟಿ.ಟಿ.ಡಿ ಆಡಳಿತ ಮಂಡಳಿಯ ಸದಸ್ಯರು, ಯಲಹಂಕ ಶಾಸಕ ಎಸ್.ಆರ್ ವಿಶ್ವನಾಥ್ ರವರ ಮಾರ್ಗದರ್ಶನದಲ್ಲಿ,”ವಿಶ್ವವಾಣಿ ಫೌಂಡೇಷನ್” ವತಿಯಿಂದ ಆಯೋಜಿಸಿದ್ದ ಉಚಿತ ಆರೋಗ್ಯ ತಪಾಸಣೆ, ಉಚಿತ ಔಷಧಿ ವಿತರಣೆ ಹಾಗೂ ಸ್ವಯಂ ಪ್ರೇರಿತ ರಕ್ತದಾನ ಶಿಬಿರ ಕಾರ್ಯಕ್ರಮದಲ್ಲಿ ಬಿ.ಜೆ.ಪಿ ಯುವ ಮುಖಂಡರು , ವಿಶ್ವವಾಣಿ ಫೌಂಡೇಷನ್ ನಿರ್ದೇಶಕರಾದ ಅಲೋಕ್ ವಿಶ್ವನಾಥ್ ಪಾಲ್ಗೊಂಡು ಶಿಬಿರವನ್ನು ಯಶಸ್ವಿಗೊಳಿಸಿದರು.
ಇದೇ ಸಂದರ್ಭದಲ್ಲಿ ಮಾತನಾಡಿದ ಅವರು ಪ್ರಧಾನಿ ನರೇಂದ್ರ ಮೋದಿಯವರ ಹುಟ್ಟುಹಬ್ಬವನ್ನು ಸೇವಾ ಸಪ್ತಾಹವಾಗಿ ಆಚರಿಸಲಾಗುತ್ತಿದ್ದು, ಅಕ್ಟೋಬರ್ 2 ರವರೆಗೂ ಸೇವಾ ಸಪ್ತಾಹ ನಡೆಯಲಿದೆ, ಇದರ ಅಂಗವಾಗಿ ಇಂದು ದಾಸನಪುರ ಹೋಬಳಿಯ ಬಿಜೆಪಿ ಮುಖಂಡರ ಸಹಕಾರ ದೊಂದಿಗೆ ರಕ್ತದಾನ ಶಿಬಿರ, ಉಚಿತ ಆರೋಗ್ಯ ತಪಾಸಣೆ, ಉಚಿತ ಔಷಧ ವಿತರಣೆ ಸೇರಿದಂತೆ ವಿವಿಧ ಸೇವಾ ಕಾರ್ಯಕ್ರಮಗಳನ್ನು ಆಯೋಜಿಸಿದ್ದು, ಸಹಸ್ರಾರು ಸಂಖ್ಯೆಯ ಜನ ಮಹತ್ವದ ಈ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವ ಮೂಲಕ ಯಶಸ್ವಿಗೊಳಿಸುವುದರ ಜತೆಗೆ ಶಿಬಿರದ ಸದುಪಯೋಗ ಪಡೆದುಕೊಂಡಿರುವುದು ಸಂತೋಷದ ಸಂಗತಿ ಎಂದರು.
ಯಲಹಂಕ ಗ್ರಾಮಾಂತರ ಮಂಡಲ ಬಿಜೆಪಿ ಅಧ್ಯಕ್ಷ ಎಚ್ ಬಿ ಹನುಮಯ್ಯ .ಮಾತನಾಡಿ ‘ಪ್ರಧಾನಿ ನರೇಂದ್ರ ಮೋದಿಯವರ ಹುಟ್ಟುಹಬ್ಬದ ಪ್ರಯುಕ್ತ ಮುಂದಿನ ಒಂದು ವಾರದ ಕಾಲ ಸೇವಾ ಸಪ್ತಾಹ ಕಾರ್ಯಕ್ರಮ ಜರುಗ ಲಿದ್ದು, ಉಚಿತ ಆರೋಗ್ಯ ತಪಾಸಣ ಶಿಬಿರ, ಅನಾಥಾಶ್ರಮ ಗಳಲ್ಲಿ ಇರುವ ವೃದ್ಧರು ಮತ್ತು ನಿರಾಶ್ರಿತರಿಗೆ ಕಂಬಳಿ, ಬೆಡ್ ಶೀಟ್ ವಿತರಣೆ, ಹಣ್ಣುಗಳ ವಿತರಣೆ ಸೇರಿದಂತೆ ವಿವಿಧ ಸೇವಾ ಕಾರ್ಯಗಳನ್ನು ಆಯೋಜಿಸಿದ್ದು, ಸೇವಾ ಸಪ್ತಾಹವನ್ನು ಉಚಿತ ಆರೋಗ್ಯ ತಪಾಸಣಾ ಶಿಬಿರದ ಮೂಲಕ ಇಂದು ಉದ್ಘಾಟಿಸಿದ್ದೇವೆ ಎಂದರು.
ಇದೇ ಸಂದರ್ಭದಲ್ಲಿ ಮಾಜಿ ಜಿ.ಪಂ.ಸದಸ್ಯ ಡಾ.ಉದ್ದಂಡಯ್ಯ, ಹುಸ್ಕೂರು ಗ್ರಾ.ಪಂ.ಅಧ್ಯಕ್ಷ ರಮೇಶ್, ಗೋಪಾಲಪುರ ಗ್ರಾ.ಪಂ.ಅಧ್ಯಕ್ಷ ಚಂದ್ರಶೇಖರ್, ಕಾಚೋಹಳ್ಳಿ ಗ್ರಾ.ಪಂ.ಅಧ್ಯಕ್ಷ ಕುಮಾರ್, ಉಪಾಧ್ಯಕ್ಷ ಉಮೇಶ್, ಕ್ಷೇತ್ರ ಬಿಜೆಪಿ ಉಸ್ತುವಾರಿ ಜಿ.ಎಸ್.ಕುಮಾರ್, ಮಾಧ್ಯಮ ಸಂಚಾಲಕ ಅವಿನಾಶ್ ಗಣೇಶ್ ಸೇರಿದಂತೆ ಇನ್ನಿತರರಿದ್ದರು.
