ಬಳ್ಳಾರಿ, ಸೆ. 24:
ಬಳ್ಳಾರಿ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ಥೆಯ ವಾರ್ಷಿಕ ಸರ್ವ ಸದಸ್ಯರ ಸಭೆ ಬಲಿಜ ಭವನದಲ್ಲಿ ಭಾನುವಾರ ಯಶಸ್ವಿಯಾಗಿ ನೆರವೇರಿತು.

2021-22 ಮತ್ತು 2022-23 ರ ಶೈಕ್ಷಣಿಕ ಸಾಲಿನಲ್ಲಿ ನಡೆದ ಎಸ್‌ಎಸ್‌ಎಲ್‌ಸಿ ಮತ್ತು ಪಿಯುಸಿ ವಾರ್ಷಿಕ ಪರೀಕ್ಷೆಯಲ್ಲಿ ಹೆಚ್ಚು ಅಂಕಗಳನ್ನು ಪಡೆದ ಪ್ರತಿಭಾವಂತ ವಿದ್ಯಾರ್ಥಿಗಳನ್ನು ಈ ಸಂದರ್ಭದಲ್ಲಿ ಗೌರವಿಸಿ-ಅಭಿನಂದಿಸಲಾಯಿತು.

ಬಳ್ಳಾರಿ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ಥೆಯ ಗೌರವ ಕಾರ್ಯದರ್ಶಿ ಯಶವಂತರಾಜ್ ನಾಗಿರೆಡ್ಡಿ ಅವರು ಸಂಸ್ಥೆಯ 2021-22 ಮತ್ತು 2022-23ರ ಸಾಲಿನ ವಾರ್ಷಿಕ ವರದಿ ಹಾಗೂ ಲೆಕ್ಕಪರಿಶೋಧನಾ ವರದಿಯನ್ನು ವಾಚನ ಮಾಡಿ, ಸಭೆಯಲ್ಲಿ ಅನುಮೋದನೆ ಪಡೆದರು.

ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ಥೆಯ ಮುಂದಿನ ರಸ್ತೆಯನ್ನು ಚೇಂಬರ್ ಆಫ್ ಕಾಮರ್ಸ್ ರಸ್ತೆ' ಮತ್ತು ವೃತ್ತವನ್ನುಚೇಂಬರ್ ಆಫ್ ಕಾಮರ್ಸ್’ ವೃತ್ತ ಎಂದು ಮಹಾನಗರ ಪಾಲಿಕೆ ನಾಮಕರಣ ಮಾಡುವಲ್ಲಿ ಸಂಸ್ಥೆ ಯಶಸ್ವಿಯಾಗಿರುವ ಕುರಿತು ಸಭೆಗೆ ತಿಳಿಸಿದರು.

ಬಳ್ಳಾರಿ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ಥೆಯ ಅಧ್ಯಕ್ಷ ಸಿ. ಶ್ರೀನಿವಾಸರಾವ್ ಅವರು ಸಂಸ್ಥೆಯ ಆಜೀವ ಸದಸ್ಯರನ್ನುದ್ದೇಶಿಸಿ
ಸಂಸ್ಥೆಯ ಅಭಿವೃದ್ಧಿಯ ವಿಚಾರಗಳ ಕುರಿತು ಮಾತನಾಡಿದರು.

ಅಲ್ಲದೇ, ಬಳ್ಳಾರಿ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ಥೆಯ ನೂತನ ಮೂವತ್ತು ಸದಸ್ಯರ ಮೇನೇಜಿಂಗ್ ಕಮಿಟಿ ಸದಸ್ಯರುಗಳ ಹೆಸರುಗಳನ್ನು ಅಧ್ಯಕ್ಷ ಸಿ. ಶ್ರೀನಿವಾಸರಾವ್ ಅವರು ಈ ಸಂದರ್ಭಧಲ್ಲಿ ಘೊಷಣೆ ಮಾಡಿ, ಸರ್ವ ಸದಸ್ಯರ ಸಭೆಯಲ್ಲಿ ಅನುಮೋದನೆ ಪಡೆದರು.

ಶ್ರೀಮತಿ ಲಕ್ಷ್ಮಿ ಚೆಲ್ಲೂರು ಅವರು ಪ್ರಾರ್ಥನೆ ಸಲ್ಲಿಸಿದರು. ಸಂಸ್ಥೆಯ ಹಿರಿಯ ಉಪಾಧ್ಯಕ್ಷ ಬಿ. ಮಹಾರುದ್ರಗೌಡ ಅವರು ಸ್ವಾಗತ ಕೋರಿದರು. ಸಂಸ್ಥೆಯ ಗೌರವ ಕಾರ್ಯದರ್ಶಿ ಯಶವಂತರಾಜ್ ನಾಗಿರೆಡ್ಡಿ ಅವರು ವಂದನಾರ್ಪಣೆ ಸಲ್ಲಿಸಿದರು.

ಸಂಸ್ಥೆಯ ಸರ್ವ ಸದಸ್ಯರು ಸಂಸ್ಥೆಯ ಸಂಸ್ಥಾಪಕರಾದ ಶ್ರೀ ಕೊನಗೋಲು ತಿಮ್ಮಪ್ಪ ಮತ್ತು ಶ್ರೀ ಗುಡದೂರು ತಿಮ್ಮಪ್ಪ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ, ನಮನ ಸಲ್ಲಿಸಿದರು.

1ನೇ ಸುದ್ದಿ ಸಾರ್,

Leave a Reply

Your email address will not be published. Required fields are marked *