ಬಳ್ಳಾರಿ ಸೆ.26,
ಸ್ಥಳೀಯ ಜಿಲ್ಲಾ ಮತ್ತು ಕೈಗಾರಿಕಾ ಸಂಸ್ಥೆ”ಯ ವಿರುದ್ಧದ ಅವ್ಯವಹಾರ ಕುರಿತು ಚರ್ಚಿಸಲು ಧಾರವಾಡದ ಕರ್ನಾಟಕ ಹೈಕೋರ್ಟ್ ಪೀಠವು ಒಪ್ಪಿಗೆ ಸೂಚಿಸಿದೆ ಎಂದು ವಾಣಿಜ್ಯೋದ್ಯಮಿ ಹಾಗೂ ಜಿಲ್ಲಾ ಮತ್ತು ವಾಣಿಜ್ಯ ಕೈಗಾರಿಕಾ ಸಂಸ್ಥೆಯ ಆಜೀವ ಸದಸ್ಯರಾದ ಪಿ.ಎನ್.ಸುರೇಶ್ ಅವರು ತಿಳಿಸಿದ್ದಾರೆ.
ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿರುವ ಅವರು ಕಳೆದ ಸುಮಾರು ಐದು ತಿಂಗಳಿನಿAದ ಸಂಬAಧಪಟ್ಟ ರಾಜ್ಯ/ಜಿಲ್ಲಾ ಮಟ್ಟದ ಇಲಾಖಾ ಅಧಿಕಾರಿಗಳಿಗೆ ಬಳ್ಳಾರಿ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ಥೆಯಲ್ಲಿ ನಡೆಯುತ್ತಿರುವ ಅವ್ಯವಹಾರದ ಬಗ್ಗೆ ಲಿಖಿತವಾಗಿ ದೂರು ಮತ್ತು ಮನವಿಗಳನ್ನು ಸಲ್ಲಿಸಿದರೂ ಮನವಿಗೆ ಸ್ಪಂದಿಸದೇ ಹೋದಾಗ ನಾನು ಅನಿವಾರ್ಯವಾಗಿ ನ್ಯಾಯಾಲಯದ ಮೊರೆ ಹೋಗಬೇಕಾಯಿತುಎಂದು ತಿಳಿಸಿದ್ದಾರೆ.
ಧಾರವಾಡದ ಗೌರವಾನ್ವಿತ ಹೈಕೋರ್ಟ್ ನ್ಯಾಯ ಪೀಠವು ನನ್ನ ದೂರುಗಳಲ್ಲಿನ ಗಾಂಭೀರ್ಯತೆಯನ್ನು ಪರಿಶೀಲಿಸಿ ವಿಚಾರಣೆಗೆ ಯೋಗ್ಯವೆಂದು ಪರಿಗಣಿಸಿ ಸಹಕಾರ ಇಲಾಖೆಯ ಮುಖ್ಯ ಕಾರ್ಯದರ್ಶಿಗಳು, ಸಹಕಾರ ಸಂಘಗಳ ನಿಬಂಧಕರು, ಸಹಕಾರ ಸಂಘಗಳ ಜಂಟಿ ನಿಬಂಧಕರು, ಸಹಕಾರ ಸಂಘಗಳ, ಉಪ-ನಿಬಂಧಕರು ಹಾಗೂ ಜಿಲ್ಲಾ ನೊಂದಣಾಧಿಕಾರಿಗಳು, ಬಳ್ಳಾರಿ ಮತ್ತು ಬಳ್ಳಾರಿ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ಥೆಗೆ ಮಧ್ಯಂತರ ಆದೇಶವನ್ನು ಕಳುಹಿಸುತ್ತಾ ಐದು ದಿನಗಳೊಳಗಾಗಿ ವಿಚಾರಣೆಗೆ ಹಾಜರಾಗುವಂತೆ ಸೂಚಿಸಿದ್ದಾರೆ ಎಂದು ತಿಳಿಸಿದ್ದಾರೆ. ಗೌರವಾನ್ವಿತ ನ್ಯಾಯಾಲಯದಲ್ಲಿ ವಿಚಾರಣೆ ನಡೆದು ನನಗೆ ನ್ಯಾಯ ದೊರಕುವುದರೊಂದಿಗೆ ಸಂಸ್ಥೆಗೂ ನ್ಯಾಯ ದೊರಕುತ್ತದೆ ಎಂಬ ವಿಶ್ವಾಸ ಉಂಟಾಗಿದೆ ಎಂದು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
