ಚಿಕ್ಕಬಳ್ಳಾಪುರ ಜಿಲ್ಲೆಯ ಎಲ್ಲಾ ತಾಲ್ಲೂಕು ಪಂಚಾಯಿತಿಯ ಗ್ರಾಮ ಪಂಚಾಯಿತಿ ವ್ಯಾಪ್ತಿಗಳಲ್ಲಿ ಸಾರ್ವಜನಿಕ ಕುಂದುಕೊರತೆ ಸಭೆಗಳನ್ನು ಆಯೋಜಿಸಿ ಸಾರ್ವಜನಿಕರ ಕುಂದುಕೊರತೆಗಳನ್ನು ಸ್ಥಳದಲ್ಲಿಯೇ ಅಲಿಸಲು ಹಾಗೂ ಸೇವೆಗಳನ್ನು ನೀಡಲು ಉಲ್ಲೇಖಿತ (1)ರೈ ಸೂಚನೆಯಂತೆ ಇಂದು ಶಿಡ್ಲಘಟ್ಟ ತಾಲ್ಲೂಕಿನ ಭಕ್ತರಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಅಂಬೇಡ್ಕರ್ ಭವನದಲ್ಲಿ ಸಾರ್ವಜನಿಕ ಕುಂದುಕೊರತೆ ಸಭೆಯನ್ನು ಮಾನ್ಯ ನರೇಗಾ ಸಹಾಯಕ ನಿರ್ದೇಶಕರವರು ಜ್ಯೋತಿ ಬೆಳಗಿಸಿ, ಗಿಡಕ್ಕೆ ನೀರು ಹಾಕುವ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿದರು.

ನಂತರ ಮಾತನಾಡಿದ ಅವರು, ಜಿಲ್ಲೆಯ ಪ್ರತಿಯೊಂದು ಗ್ರಾಮ ಪಂಚಾಯಿತಿಗಳಲ್ಲಿ ಸಮಯಕ್ಕೆ ಸರಿಯಾಗಿ ಸಾರ್ವಜನಿಕರಿಗೆ ಸೇವೆ ಒದಗಿಸುತ್ತಿಲ್ಲವೆಂಬ ದೂರುಗಳು
ಕಛೇರಿಯಲ್ಲಿ ಸ್ವೀಕೃತಿಯಾಗಿರುವ ಹಿನ್ನೆಲೆಯಲ್ಲಿ, ಸಾರ್ವಜನಿಕ ಕುಂದುಕೊರತೆಗಳ ಸಭೆಗಳನ್ನು ಕಡ್ಡಾಯವಾಗಿ ಆಯೋಜಿಸಿ
ಸಾರ್ವಜನಿಕರಿಗೆ ಪರಿಹಾರ ನೀಡಲು ಕ್ರಮವಹಿಸಬೇಕು ಎಂದರು.
ಈ ಹಿನ್ನಲೆಯಲ್ಲಿ ಗ್ರಾಮ ಪಂಚಾಯತಿ ಮಟ್ಟದಲ್ಲಿ
ಸಾರ್ವಜನಿಕ ಕುಂದು ಕೊರತೆ ಸಭೆಗಳನ್ನು ಆಯೋಜಿಸಲು ಉಲ್ಲೇಖ (2)ರ ಪ್ರಗತಿ ಪರಿಶೀಲನಾ ಸಭೆಯನ್ನು ಹಮ್ಮಿಕೊಂಡು ಸಾರ್ವಜನಿಕರ ಅಹವಾಲು ಸ್ವೀಕರಿಸಿ, ಸ್ಥಳದಲ್ಲಿಯೇ ಸಮಸ್ಯೆಗೆ ಪರಿಹಾರ ಒದಗಿಸುವಂತಾಗಬೇಕು ಎಂದರು.

ಗ್ರಾಮೀಣ ಜನರು ಹೆಚ್ಚಾಗಿ ದಿನಕೂಲಿಯನ್ನು ಅವಲಂಬಿಸಿದ್ದು, ಸರ್ಕಾರಿ ಕೆಲಸವಾಗಲೆಂದು ತನ್ನ ದಿನಕೂಲಿಯನ್ನು ಬಿಟ್ಟು ಸರ್ಕಾರಿ ಕಚೇರಿಗಳ ಸುತ್ತಲೂ ಅಲೆದಾಡುವುದನ್ನು ಹೊಗಲಾಡಿಸುವ ಉದ್ದೇಶದಿಂದ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಸಾರ್ವಜನಿಕ ಕುಂದು ಕೊರತೆ ಸಭೆಯನ್ನು ಭಕ್ತರಹಳ್ಳಿ ಗ್ರಾಮ ಪಂಚಾಯಿತಿಯಲ್ಲಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದರು. ಸಾರ್ವಜನಿಕರ ಕುಂದುಕೊರತೆಗಳನ್ನು ಆಲಿಸಲು ಸರ್ಕಾರ ಜನರ ಸಹಭಾಗಿತ್ವದಲ್ಲಿ ಭಾಗಿಯಾಗುವಂತಾಗಬೇಕು. ಅದೇ ರೀತಿಯಾಗಿ ಇಲಾಖಾವಾರು ಮತ್ತು ಪಂಚಾಯಿತಿ ವ್ಯಾಪ್ತಿಯಲ್ಲಿ ಇರುವ ಸಮಸ್ಯೆಗಳು ಹಾಗೂ ಕುಂದುಕೊರತೆಗಳ ಪಟ್ಟಿ ಮಾಡಿಕೊಂಡು ಸ್ಥಳದಲ್ಲಿಯೇ ಸಮಸ್ಯೆಗಳನ್ನು ಬಗೆಹರಿಸುವಂತಾಗಬೇಕು ಎಂದರು.

ಭಕ್ತರಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಸಾರ್ವಜನಿಕರು ಅಹವಾಲು ಸ್ವೀಕರಿಸಲಾಯಿತು. ನಿವೇಶನ, ಮೂಲಭೂತ ಸೌಕರ್ಯಗಳು, ಬಸ್ ವ್ಯವಸ್ಥೆ ಸೇರಿದಂತೆ ವಿವಿಧ ಇಲಾಖೆಗಳಿಂದ ಆಗುವಂತಹ ಸೌಲಭ್ಯಗಳ ಬಗ್ಗೆ ಮಾಹಿತಿ ಕಳೆಹಾಕಲಾಯಿತು.

ಈ ಸಂದರ್ಭದಲ್ಲಿ ಮಾನ್ಯ ನರೇಗಾ ಸಹಾಯಕ ನಿರ್ದೇಶಕರವರಾದ ಚಂದ್ರಪ್ಪ ರವರು, ಭಕ್ತರಹಳ್ಳಿ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಯವರಾದ ಅಂಜನ್ ಕುಮಾರ್, ಭಕ್ತರಹಳ್ಳಿ ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ಶ್ರೀಮತಿ ಲಲಿತಮ್ಮ ನಾರಾಯಣಸ್ವಾಮಿ, ಉಪಾಧ್ಯಕ್ಷರಾದ ಹೆಚ್.ಜೆ.ಕಲ್ಪನಾ, ಗ್ರಾಮ ಪಂಚಾಯಿತಿ ಸದಸ್ಯರು ಹಾಗೂ ವಿವಿಧ ಇಲಾಖೆಗಳ ಅಧಿಕಾರಿಯವರು ಮತ್ತು ಸಿಬ್ಬಂದಿ, ಆಶಾ ಕಾರ್ಯಕರ್ತೆಯರು ಮತ್ತು ಅಂಗನವಾಡಿ ಕಾರ್ಯಕರ್ತೆಯರು, ತಾಲ್ಲೂಕು ನರೇಗಾ ಸಂಯೋಜಕರಾದ ಲೋಕೇಶ, ಗ್ರಾಮ ಪಂಚಾಯಿತಿ ಸಿಬ್ಬಂದಿ, ಸಾರ್ವಜನಿಕರು ಸೇರಿದಂತೆ ಇತರರು ಹಾಜರಿದ್ದರು.

ಭಕ್ತರಹಳ್ಳಿ ಗ್ರಾಮ ಪಂಚಾಯಿತಿಯಲ್ಲಿ ಸಾರ್ವಜನಿಕ ಕುಂದು ಕೊರತೆ ಸಭೆ

ಚಿಕ್ಕಬಳ್ಳಾಪುರ ಜಿಲ್ಲೆಯ ಎಲ್ಲಾ ತಾಲ್ಲೂಕು ಪಂಚಾಯಿತಿಯ ಗ್ರಾಮ ಪಂಚಾಯಿತಿ ವ್ಯಾಪ್ತಿಗಳಲ್ಲಿ ಸಾರ್ವಜನಿಕ ಕುಂದುಕೊರತೆ ಸಭೆಗಳನ್ನು ಆಯೋಜಿಸಿ ಸಾರ್ವಜನಿಕರ ಕುಂದುಕೊರತೆಗಳನ್ನು ಸ್ಥಳದಲ್ಲಿಯೇ ಅಲಿಸಲು ಹಾಗೂ ಸೇವೆಗಳನ್ನು ನೀಡಲು ಉಲ್ಲೇಖಿತ (1)ರೈ ಸೂಚನೆಯಂತೆ ಇಂದು ಶಿಡ್ಲಘಟ್ಟ ತಾಲ್ಲೂಕಿನ ಭಕ್ತರಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಅಂಬೇಡ್ಕರ್ ಭವನದಲ್ಲಿ ಸಾರ್ವಜನಿಕ ಕುಂದುಕೊರತೆ ಸಭೆಯನ್ನು ಮಾನ್ಯ ನರೇಗಾ ಸಹಾಯಕ ನಿರ್ದೇಶಕರವರು ಜ್ಯೋತಿ ಬೆಳಗಿಸಿ, ಗಿಡಕ್ಕೆ ನೀರು ಹಾಕುವ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿದರು.

ನಂತರ ಮಾತನಾಡಿದ ಅವರು, ಜಿಲ್ಲೆಯ ಪ್ರತಿಯೊಂದು ಗ್ರಾಮ ಪಂಚಾಯಿತಿಗಳಲ್ಲಿ ಸಮಯಕ್ಕೆ ಸರಿಯಾಗಿ ಸಾರ್ವಜನಿಕರಿಗೆ ಸೇವೆ ಒದಗಿಸುತ್ತಿಲ್ಲವೆಂಬ ದೂರುಗಳು
ಕಛೇರಿಯಲ್ಲಿ ಸ್ವೀಕೃತಿಯಾಗಿರುವ ಹಿನ್ನೆಲೆಯಲ್ಲಿ, ಸಾರ್ವಜನಿಕ ಕುಂದುಕೊರತೆಗಳ ಸಭೆಗಳನ್ನು ಕಡ್ಡಾಯವಾಗಿ ಆಯೋಜಿಸಿ
ಸಾರ್ವಜನಿಕರಿಗೆ ಪರಿಹಾರ ನೀಡಲು ಕ್ರಮವಹಿಸಬೇಕು ಎಂದರು.
ಈ ಹಿನ್ನಲೆಯಲ್ಲಿ ಗ್ರಾಮ ಪಂಚಾಯತಿ ಮಟ್ಟದಲ್ಲಿ
ಸಾರ್ವಜನಿಕ ಕುಂದು ಕೊರತೆ ಸಭೆಗಳನ್ನು ಆಯೋಜಿಸಲು ಉಲ್ಲೇಖ (2)ರ ಪ್ರಗತಿ ಪರಿಶೀಲನಾ ಸಭೆಯನ್ನು ಹಮ್ಮಿಕೊಂಡು ಸಾರ್ವಜನಿಕರ ಅಹವಾಲು ಸ್ವೀಕರಿಸಿ, ಸ್ಥಳದಲ್ಲಿಯೇ ಸಮಸ್ಯೆಗೆ ಪರಿಹಾರ ಒದಗಿಸುವಂತಾಗಬೇಕು ಎಂದರು.

ಗ್ರಾಮೀಣ ಜನರು ಹೆಚ್ಚಾಗಿ ದಿನಕೂಲಿಯನ್ನು ಅವಲಂಬಿಸಿದ್ದು, ಸರ್ಕಾರಿ ಕೆಲಸವಾಗಲೆಂದು ತನ್ನ ದಿನಕೂಲಿಯನ್ನು ಬಿಟ್ಟು ಸರ್ಕಾರಿ ಕಚೇರಿಗಳ ಸುತ್ತಲೂ ಅಲೆದಾಡುವುದನ್ನು ಹೊಗಲಾಡಿಸುವ ಉದ್ದೇಶದಿಂದ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಸಾರ್ವಜನಿಕ ಕುಂದು ಕೊರತೆ ಸಭೆಯನ್ನು ಭಕ್ತರಹಳ್ಳಿ ಗ್ರಾಮ ಪಂಚಾಯಿತಿಯಲ್ಲಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದರು. ಸಾರ್ವಜನಿಕರ ಕುಂದುಕೊರತೆಗಳನ್ನು ಆಲಿಸಲು ಸರ್ಕಾರ ಜನರ ಸಹಭಾಗಿತ್ವದಲ್ಲಿ ಭಾಗಿಯಾಗುವಂತಾಗಬೇಕು. ಅದೇ ರೀತಿಯಾಗಿ ಇಲಾಖಾವಾರು ಮತ್ತು ಪಂಚಾಯಿತಿ ವ್ಯಾಪ್ತಿಯಲ್ಲಿ ಇರುವ ಸಮಸ್ಯೆಗಳು ಹಾಗೂ ಕುಂದುಕೊರತೆಗಳ ಪಟ್ಟಿ ಮಾಡಿಕೊಂಡು ಸ್ಥಳದಲ್ಲಿಯೇ ಸಮಸ್ಯೆಗಳನ್ನು ಬಗೆಹರಿಸುವಂತಾಗಬೇಕು ಎಂದರು.

ಭಕ್ತರಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಸಾರ್ವಜನಿಕರು ಅಹವಾಲು ಸ್ವೀಕರಿಸಲಾಯಿತು. ನಿವೇಶನ, ಮೂಲಭೂತ ಸೌಕರ್ಯಗಳು, ಬಸ್ ವ್ಯವಸ್ಥೆ ಸೇರಿದಂತೆ ವಿವಿಧ ಇಲಾಖೆಗಳಿಂದ ಆಗುವಂತಹ ಸೌಲಭ್ಯಗಳ ಬಗ್ಗೆ ಮಾಹಿತಿ ಕಳೆಹಾಕಲಾಯಿತು.

ಈ ಸಂದರ್ಭದಲ್ಲಿ ಮಾನ್ಯ ನರೇಗಾ ಸಹಾಯಕ ನಿರ್ದೇಶಕರವರಾದ ಚಂದ್ರಪ್ಪ ರವರು, ಭಕ್ತರಹಳ್ಳಿ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಯವರಾದ ಅಂಜನ್ ಕುಮಾರ್, ಭಕ್ತರಹಳ್ಳಿ ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ಶ್ರೀಮತಿ ಲಲಿತಮ್ಮ ನಾರಾಯಣಸ್ವಾಮಿ, ಉಪಾಧ್ಯಕ್ಷರಾದ ಹೆಚ್.ಜೆ.ಕಲ್ಪನಾ, ಗ್ರಾಮ ಪಂಚಾಯಿತಿ ಸದಸ್ಯರು ಹಾಗೂ ವಿವಿಧ ಇಲಾಖೆಗಳ ಅಧಿಕಾರಿಯವರು ಮತ್ತು ಸಿಬ್ಬಂದಿ, ಆಶಾ ಕಾರ್ಯಕರ್ತೆಯರು ಮತ್ತು ಅಂಗನವಾಡಿ ಕಾರ್ಯಕರ್ತೆಯರು, ತಾಲ್ಲೂಕು ನರೇಗಾ ಸಂಯೋಜಕರಾದ ಲೋಕೇಶ, ಗ್ರಾಮ ಪಂಚಾಯಿತಿ ಸಿಬ್ಬಂದಿ, ಸಾರ್ವಜನಿಕರು ಸೇರಿದಂತೆ ಇತರರು ಹಾಜರಿದ್ದರು.

Leave a Reply

Your email address will not be published. Required fields are marked *