ನಗರದ ಭಗತ್ ಸಿಂಗ್ ವೃತ್ತದಲ್ಲಿ ಕ್ರಾಂತಿಕಾರಿ ಭಗತ್ ಸಿಂಗ್ ರವರ 116ನೇ ಜಯಂತೋತ್ಸವದ ಅಂಗವಾಗಿ ಭಗತ್ ಸಿಂಗ್ ರವರ ಪುತ್ಥಳಿಗೆ ಮಾಲಾರ್ಪಣೆ ಮಾಡಿ ಜಯಂತೋತ್ಸವ ಆಚರಣೆ ಮಾಡಲಾಯಿತು.
ಈ ಸಂದರ್ಭದಲ್ಲಿ ಶಾಂತಕುಮಾರ ಸಂಗೊಳಗಿ ರವರು ಭಗತ್ ಸಿಂಗ್ ರವರನ್ನುದ್ದೇಶಿಸಿ ಮಾತನಾಡುತ್ತಾ, ಜನನ ಜರನವಾಲಾ ತಾಲೂಕಿನ ಬಂಗಾ ಎಂಬ ಹಳ್ಳಿಯಲ್ಲಿ.ಅವರ ತಾಯಿ ಶ್ರೀಮತಿ ವಿದ್ಯಾವತಿ ಮತ್ತು ಜೀವ ವಿಮಾ ಕಂಪನಿಯಲ್ಲಿ ಏಜೆಂಟರಾಗಿ ವೃತ್ತಿ ಮಾಡುತ್ತಿದ್ದ ತಂದೆ ಕಿಶನ್ ಸಿಂಗ್ ಮಗನಾಗಿ, ಚಿಕ್ಕ ವಯಸ್ಸಿನಲ್ಲಿ ಮನೆ ಬಿಟ್ಟು ದೇಶದ ಸ್ವತಂತ್ರಕ್ಕಾಗಿ ಭಗತ್ ಸಿಂಗ್‌ರು ಜೈಲಿನಲ್ಲಿ ಕಳೆದ ಕೊನೆಯ ದಿನಗಳಂದು ಅವರ ತಾಯಿಯ ದಿಟ್ಟತನದ ನುಡಿಗಳು ನಿಜಕ್ಕೂ ಆಪ್ಯಾಯಮಾನ: “ನಿನ್ನ ನಿಲುಮೆಯನ್ನು ಎಂದಿಗೂ ಬದಲಿಸಬೇಡ. ಪ್ರಪಂಚವೇ ಮರೆಯಲಾಗದ ಸಾವು ಎಂದಿಗೂ ಅತ್ಯುತ್ತಮವಾದದ್ದು. ‘ಇಂಕ್ವಿಲಾಬ್ ಜಿಂದಾಬಾದ್’ ಘೋಷಣೆಯನ್ನು ಕೊನೆಯವರೆಗೂ ಕೂಗುತ್ತಿರು,ನಾವು ವಿದ್ಯಾರ್ಥಿಗಳ ಜೀವನದಲ್ಲಿ ಅವರ ವಿಚಾರವನ್ನು ಆದರ್ಶವಾಗಿಟ್ಟುಕೊಂಡು, ಸಮಾಜ, ದೇಶದ ಭವಿಷ್ಯಕ್ಕಾಗಿ ದುಡಿಯುವಂತಹ ಮಾರ್ಗದಲ್ಲಿ ನಾವೆಲ್ಲರೂ ನಡೆಯಬೇಕು ಎಂದು ಹೇಳಿದರು.
ಈ ಸಂದರ್ಭದಲ್ಲಿ ಜಿಲ್ಲಾ ಸಂಚಾಲಕರಾದ ಶಶಿಕಾಂತ ರಾಕಲೆ, ನಗರ ಸಂಘಟನಾ ಕಾರ್ಯದರ್ಶಿ ಹೇಮಂತ, ಸಿದ್ಧಾರ್ಥ ಭಾವಿದೊಡ್ಡಿ, ಸತೀಶ, ಶಿವಕುಮಾರ, ಓಂಸಾಯಿ, ದರ್ಶನ, ವಿಶಾಲ ಇನ್ನೀತರ ಕಾರ್ಯಕರ್ತರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *