ಬೀದರ. ಇತ್ತಿಚೇಗೆ ಬೀದರ ಜಿಲ್ಲೆಯ ವಿವಿಧ ಠಾಣೆಗಳ ವ್ಯಾಪ್ತಿಯಲ್ಲಿ ನಡೆದ ೧೪ ಪ್ರತ್ಯೇಕ ಕಳ್ಳತನ ಪ್ರಕರಣಕ್ಕೆ ಸಂಬAಧಿಸಿದAತೆ ೧೧ ಆರೋಪಿಗಳನ್ನು ಬಂಧಿಸಿ ಆರೋಪಿತರಿಂದ ೫೨,೩೭,೭೦೦ ರೂ. ಮೌಲ್ಯದ ವಸ್ತುಗಳನ್ನು ಜಪ್ತಿ ಮಾಡಿ ಆರೋಪಿತರಿಗೆ ನ್ಯಾಯಾಂಗ ಬಂಧನಕ್ಕೆ ಕಳುಹಿಸಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಚನ್ನಬಸವಣ್ಣ ಎಸ್.ಎಲ್ ಹೇಳಿದರು.
ಅವರು ಶನಿವಾರ ಬೀದರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಕಛೇರಿ ಆವರಣದಲ್ಲಿ ಕರೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.
ಜಿಲ್ಲೆಯಲ್ಲಿ ಇತ್ತಿಚೇಗೆ ಬೈಕ್ ಕಳ್ಳತನ ಪ್ರಕರಣಗಳು ಹೆಚ್ಚನ ಸಂಖ್ಯೆಯಲ್ಲಿ ವರದಿಯಾಗುತ್ತಿರುವ ಹಿನ್ನೆಲೆಯಲ್ಲಿ ಇಂತಹ ಪ್ರಕರಣಗಳನ್ನು ತಡೆಗಟ್ಟಲು ಹಾಗೂ ಪತ್ತೆ ಮಾಡಲು ಪೊಲೀಸ್ ಇಲಾಖೆಯು ರೌಡಿ ನಿಗ್ರಹ ದಳ ಬೀದರ ನಗರ ತಂಡ ರಚಿಸಿತು ಈ ತಂಡವು ಕಾರ್ಯಾಚರಣೆ ನಡೆಸಿ ಇಬ್ಬರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದೆ ಈ ಆರೋಪಿಗಳಿಂದ ಗಾಂಧಿ ಗಂಜ ಠಾಣೆಯಲ್ಲಿ ದಾಖಲಾದÀ ೪ ಪ್ರಕರಣಗಳ ೫ ದ್ವಿಚಕ್ರವಾಹನ ಸೇರಿ ಒಟ್ಟು ೪೦,೧೫,೦೦೦ ರೂ.ಮೌಲ್ಯದ ೪೧ ದ್ವಿಚಕ್ರ ವಾಹನಗಳನ್ನು ವಶಕ್ಕೆ ಪಡೆಯಲಾಗಿದೆ ಅದೇ ರೀತಿ ಔರಾದನಲ್ಲಿ ನಡೆದ ಎರಡು ಕಳ್ಳತ ಪ್ರಕರಣಕ್ಕೆ ಸಂಬAಧಿಸಿದAತೆ ಇಬ್ಬರು ಆರೋಪಿಗಳನ್ನು ಬಂಧಿಸಿ ಅವರಿಂದ ೧೨೦೦ ರೂ. ನಗದು ಹಣ ಹಾಗೂ ೨,೫೦,೦೦೦ ರೂ. ಮೌಲ್ಯದ ೮ ಮೋಟಾರ್ ಬೈಕ್ ವಶಕ್ಕೆ ಪಡೆಯಲಾಗಿದೆ ಎಂದರು.
ಹುಮನಾಬಾದ ಠಾಣೆಯ ವ್ಯಾಪ್ತಿಯಲ್ಲಿ ನಡೆದು ಮೂರು ಪ್ರತ್ಯೇಕ ಕಳ್ಳತನ ಪ್ರಕರಣಕ್ಕೆ ಸಂಬAಧಿಸಿದAತೆ ನಾಲ್ಕು ಜನ ಆರೋಪಿಗಳನ್ನು ಬಂಧಿಸಿ ಅವರಿಂದ ೨,೫೫,೦೦೦ ಸಾವಿರ ರೂ. ಮೌಲ್ಯದ ೪ ತೊಲೆ ೮ ಗ್ರಾಮ ಬಂಗಾರದ ಆಭರಣಗಳು, ೮೦ ಸಾವಿರ ರೂ.ಗಳ ಹೊಂಡಾ ಯುನಿಕಾರ್ನ ಮೋಟರ್ ಸೈಕಲ್ ಹಾಗೂ ೧,೩೬,೭೦೦ ರೂ ಮೌಲ್ಯದ ೧೭ ಮೊಬೈಲ್‌ಗಳನ್ನು ಜಪ್ತಿ ಮಾಡಲಾಗಿದೆ. ಅದೇ ರೀತಿ ಬಸವಕಲ್ಯಾಣ ಠಾಣಾ ವ್ಯಾಪ್ತಿಯಲ್ಲಿ ನಡೆದ ಕಳ್ಳತನ ಪ್ರಕರಣಕ್ಕೆ ಸಂಬAಧಿಸಿದAತೆ ಮೂರು ಜನ ಆರೋಪಿಗಳನ್ನು ಬಂಧಿಸಿ ಬಂಗಾರ, ಬೆಳ್ಳಿ ಹಾಗೂ ೯ ಬಾವಿಯ ಮೋಟಾರ ಪಂಪ್ ಸೆಟ್‌ಗಳು ಮತ್ತು ನಗದು ಹಣ ೫ ಸಾವಿರ ಸೇರಿ ಒಟ್ಟು ೪,೯೪,೮೦೦ ರೂ.ಗಳ ವಸ್ತುಗಳನ್ನು ಜಪ್ತಿ ಮಾಡಲಾಗಿದೆ ಜೊತೆಗೆ ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ ಎಂದು ಹೇಳಿದರು.
ಈ ಸಂದರ್ಭದಲ್ಲಿ ಹೆಚ್ಚುವರಿ ಪೊಲೀಸ್ ಅಧೀಕ್ಷಕ ಮಹೇಶ ಮೇಘಣ್ಣನವರ, ಬೀದರ ಉಪ ಪೊಲೀಸ್ ಅಧೀಕ್ಷಕ ಶಿವನಗೌಡ ಪಾಟೀಲ್, ಹುಮನಾಬಾದ ಉಪ ಪೊಲೀಸ್ ಅಧೀಕ್ಷಕ ಜೆ.ಎಸ್ ನ್ಯಾಮಗೌಡರ, ಸೇರಿದಂತೆ ಕಾರ್ಯಚರಣೆಯಲ್ಲಿ ಭಾಗಿಯಾಗಿದ್ದ ಅಧಿಕಾರಿಗಳು ಹಾಗೂ ಪೊಲೀಸ್ ಸಿಬ್ಬಂಧಿಗಳು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *