ಯಲಹಂಕ : ಕಸ ವಿಲೇವಾರಿ ಸಮಸ್ಯೆ ಎದುರಾಗಿರುವ ಹಿನ್ನೆಲೆಯಲ್ಲಿ ಯಲಹಂಕ ಕ್ಷೇತ್ರದ ಕಸಘಟ್ಟಪುರ ಗ್ರಾಮದಲ್ಲಿ ನಿರ್ಮಿಸಿರುವ ನೂತನ ಕಸ ವಿಲೇವಾರಿ ಘಟಕಕ್ಕೆ ಯಲಹಂಕ ತಾ. ಪಂ. ಕಾರ್ಯ ನಿರ್ವಹಣಾ ಅಧಿಕಾರಿ ಅಪೂರ್ವ ಕುಲಕರ್ಣಿ ಭೇಟಿ ಮಾಡಿ ಪರಿಶೀಲನೆ ನಡೆಸಿದರು.

ಇದೇ ಸಂದರ್ಭದಲ್ಲಿ ಮಾತನಾಡಿದ ಅವರು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಯಾವುದೇ ಕಾರಣಕ್ಕೂ ಕಸದ ಸಮಸ್ಯೆ ಉಂಟಾಗದಂತೆ ಜಾಗ್ರತೆ ವಹಿಸಿ ತ್ವರಿತ ಕ್ರಮ ಕೈಗೊಳ್ಳಬೇಕು, ಈಗಾಗಲೇ ನಿರ್ಮಾಣಗೊಂಡು ಸಿದ್ಧವಿರುವ ಕಸವಿಲೇವಾರಿ ಘಟಕವನ್ನು ತಡಮಾಡದೆ ಕಾರ್ಯಾರಂಭ ಮಾಡಲು ಅಗತ್ಯ ಕ್ರಮ ಕೈಗೊಳ್ಳಬೇಕೆಂದು ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ರಾಜಾಶಂಕರ್ ರವರಿಗೆ ತಾಕೀತು ಮಾಡಿದರು. ಅಲ್ಲಿಯವರೆಗೆ ಕಸವನ್ನು ಕಸವಿಲೇವಾರಿ ಘಟಕದಲ್ಲೇ ಸಂಗ್ರಹಿಸುವಂತೆ ಸೂಚನೆ ನೀಡಿದ ಅವರು ಈ ಎಲ್ಲಾ ಕಾರ್ಯಗಳಿಗೆ ಅಗತ್ಯ ಸಹಕಾರ ನೀಡುವುದಾಗಿ ತಿಳಿಸಿದರು.

ಇದೇ ಸಂದರ್ಭದಲ್ಲಿ ಕಸಘಟ್ಟಪುರ ಗ್ರಾಪಂ.ಅಧ್ಯಕ್ಷೆ ಜಿ.ಸಂಧ್ಯಾ, ಉಪಾಧ್ತಕ್ಷ ರಮೇಶ್ ಬಾಬು, ತಾ.ಪಂ‌.ಮಾಜಿ ಅಧ್ಯಕ್ಷ, ಹಾಲಿ ಗ್ರಾ.ಪಂ.ಸದಸ್ಯರಾದ ಚಾಂದ್ ಪಾಷಾ, ಬಿ.ಎಂ. ಮಂಜುನಾಥ್, ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ರಾಜಾಶಂಕರ್ ಸೇರಿದಂತೆ ಇನ್ನಿತರರಿದ್ದರು.

Leave a Reply

Your email address will not be published. Required fields are marked *