ಬ್ಯಾಟರಾಯನಪುರ : ಇಂಜಿನಿಯರ್ ಗಳು ರಾಷ್ಟ್ರ ನಿರ್ಮಾತೃಗಳಿದ್ದಂತೆ, ದೇಶದ ವೈಜ್ಞಾನಿಕ ಮತ್ತು ಆರ್ಥಿಕ ಕ್ಷೇತ್ರಕ್ಕೆ ಅವರ ಕೊಡುಗೆ ಅಪಾರ ಎಂದು ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ ಉಪಕುಲಪತಿ ಡಾ.ವಿದ್ಯಾಶಂಕರ್ ಅಭಿಪ್ರಾಯಪಟ್ಟರು.

ಬ್ಯಾಟರಾಯನಪುರ ಕ್ಷೇತ್ರದ ವಿದ್ಯಾನಗರದಲ್ಲಿರುವ ಶ್ರೀ ವೆಂಕಟೇಶ್ವರ ಇಂಜಿನಿಯರಿಂಗ್ ಕಾಲೇಜಿನಲ್ಲಿ ಶನಿವಾರ ಆಯೋಜಿಸಿದ್ದ 19 ನೇ ಘಟಿಕೋತ್ಸವ ಉದ್ಘಾಟಿಸಿ ಅವರು ಮಾತನಾಡಿದರು.

ಮುಂಬರುವ ತಂತ್ರಜ್ಞಾನಗಳು ರಾಷ್ಟ್ರದ ಬೆಳವಣಿಗೆಯ ಮೇಲೆ ಹೆಚ್ಚು ಪ್ರಭಾವ ಬೀರಲಿದ್ದು, ಜಾಗತಿಕ ತಂತ್ರಜ್ಞರ ಆಶಯಗಳನ್ನು ಪೂರ್ಣಗೊಳಿಸಲು ಆರ್ಟಿಫಿಶಿಯಲ್ ಇಂಟೆಲಿಜೆನ್ಸ್ ಮತ್ತು ಮೆಷಿನ್ ಲರ್ನಿಂಗ್ ಟೆಕ್ನಾಲಜೀಸ್‌ನಲ್ಲಿ ಹೆಚ್ಚಿನ ಸಂಶೋಧನೆ ಮುಂದುವರಿಸ ಬೇಕಾದ ಅಗತ್ಯವಿದೆ ಎಂದ ಅವರು ಈ ಬಗ್ಗೆ ಪದವೀಧರರನ್ನು ಪ್ರೇರೇಪಿಸಿದರು.

ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾನಿಲಯದ ಪದವೀಧರರ ಸಾಧನೆಗಳ ಬಗ್ಗೆ ಶ್ಲಾಘನೆ ವ್ಯಕ್ತಪಡಿಸಿದ ಅವರು ಇಂಜಿನಿಯರ್ ಗಳು ರಾಷ್ಟ್ರದ ನಿರ್ಮಾತೃಗಳಿದ್ದಂತೆ ಎಂದರು.

ಕಾರ್ಯಕ್ರಮದಲ್ಲಿ ವೆಂಕಟೇಶ್ವರ ಇಂಜಿನಿಯರಿಂಗ್ ಕಾಲೇಜಿನ ವ್ಯವಸ್ಥಾಪಕ ನಿರ್ದೇಶಕ ಡಾ.ಶಶಿಧರ್ ಮುನಿಯಪ್ಪ , ಪ್ರಾಂಶುಪಾಲ ಡಾ.ನಾಗೇಶ್ವರ ಗುಪ್ತಾ, ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ ಕಾರ್ಯಕಾರಿ ಮಂಡಳಿ ಸದಸ್ಯರಾದ ಡಾ, ದಿಲೀಪ್ ಕೃಷ್ಣ ಸೇರಿದಂತೆ ವೆಂಕಟೇಶ್ವರ ಇಂಜಿನಿಯರಿಂಗ್ ಕಾಲೇಜಿನ ಬೋಧಕ, ಬೋಧಕೇತರ ಸಿಬ್ಬಂದಿಗಳಿದ್ದರು.

Leave a Reply

Your email address will not be published. Required fields are marked *