ವಿಶ್ವವಾಣಿ ಫೌಂಡೇಶನ್ ವತಿಯಿಂದ ಬೃಹತ್ ಆರೋಗ್ಯ ಶಿಬಿರ :

‘.

ಯಲಹಂಕ : ಸುಭದ್ರ ದೇಶ ಸುಸ್ಥಿರ ಆರೋಗ್ಯ ನಮ್ಮ ಬದುಕಿನ ಧ್ಯೇಯವಾಗಬೇಕು ಎಂದು ವಿಶ್ವವಾಣಿ ಫೌಂಡೇಶನ್ ಮತ್ತು ಸಿಂಗನಾಯಕನಹಳ್ಳಿ ರೈತ ಸೇವಾ ಸಹಕಾರ ಸಂಘದ ಅಧ್ಯಕ್ಷೆ ಡಾ.ವಾಣಿಶ್ರೀ ವಿಶ್ವನಾಥ್ ಅಭಿಪ್ರಾಯಪಟ್ಟರು.

ಯಲಹಂಕ ಕ್ಷೇತ್ರ ವ್ಯಾಪ್ತಿಯ ಶಿವಕೋಟೆ ಗ್ರಾಮದಲ್ಲಿ ವಿಶ್ವವಾಣಿ ಫೌಂಡೇಶನ್, ಭಾಜಪ ವೈದ್ಯಕೀಯ ಪ್ರಕೋಷ್ಠ, ಶಿವಕೋಟೆ ಗ್ರಾ.ಪಂ. ಸಹಯೋಗ ದೊಂದಿಗೆ ಶನಿವಾರ ಆಯೋಜಿಸಿದ್ದ ಬೃಹತ್ ಆರೋಗ್ಯ ಶಿಬಿರ ಉದ್ಘಾಟಿಸಿ ಮಾತನಾಡಿದ ಅವರು ‘ಶಿವಕೋಟೆ ಗ್ರಾ.ಪಂ‌.ವ್ಯಾಪ್ತಿಯ ವಿವಿಧ ಗ್ರಾಮಗಳ ಜನತೆಯ ಆರೋಗ್ಯದ ಹಿತರಕ್ಷಣೆಯ ನಿಟ್ಟಿನಲ್ಲಿ ವಿಶ್ವವಾಣಿ ಫೌಂಡೇಶನ್ ವತಿಯಿಂದ ಇಂದು ಬೃಹತ್ ಆರೋಗ್ಯ ಶಿಬಿರ ಏರ್ಪಡಿಸಿದ್ದು, ರಕ್ತದೊತ್ತಡ, ಮಧುಮೇಹ, ನೇತ್ರ ತಪಾಸಣೆ, ಕಿಡ್ನಿ ಸಂಬಂಧಿತ ಖಾಯಿಲೆಗಳು, ಕ್ಯಾನ್ಸರ್ ಸೇರಿದಂತೆ ಹಲವು ರೋಗಗಳ ತಪಾಸಣೆ, ಉಚಿತ ಔಷಧಿ ವಿತರಣೆ, ದೃಷ್ಟಿ ದೋಷ ಇರುವವರಿಗೆ ಉಚಿತ ಕನ್ನಡಕಗಳ ವಿತರಣೆ ಸೇರಿದಂತೆ ಹಲವು ಆರೋಗ್ಯ ಸೌಲಭ್ಯಗಳನ್ನು ಉಚಿತ ವಾಗಿ ನೀಡಲಾಗುತ್ತಿದ್ದು, ಜನತೆ ಇದರ ಸದುಪಯೋಗ ಪಡೆದುಕೊಳ್ಳಿ’ ಎಂದರು.

‘ವಿಶೇಷವಾಗಿ ಈ ಆರೋಗ್ಯ ಶಿಬಿರದಲ್ಲಿ ತಪಾಸಣೆಗೆ ಒಳಗಾದವರಿಗೆ ಹೆಚ್ಚಿನ ಚಿಕಿತ್ಸೆಯ ಅಗತ್ಯವಿದ್ದಲ್ಲಿ ಪ್ರಧಾನ ಮಂತ್ರಿಗಳ ಆಯುಷ್ಮಾನ್ ಭಾರತ್ ಮತ್ತು ಯಶಸ್ವಿನಿ ಆರೋಗ್ಯ ಯೋಜನೆಯ ಅಡಿಯಲ್ಲಿ ಹೆಚ್ಚಿನ ಚಿಕಿತ್ಸೆ ಮತ್ತು ಸರ್ಜರಿಗೂ ಸಹ ವ್ಯವಸ್ಥೆ ಕಲ್ಪಿಸಲಾಗುವುದು’ ಎಂದರು.

ಇದೇ ಸಂದರ್ಭದಲ್ಲಿ ವಿಶ್ವವಾಣಿ ಫೌಂಡೇಶನ್ ನ ಮುಖ್ಯ ಸಂಚಾಲಕರೂ, ಬಿಜೆಪಿ ಯುವ ಮುಖಂಡರಾದ ಅಲೋಕ್ ವಿಶ್ವನಾಥ್, ಶಿವಕೋಟೆ ಗ್ರಾ.ಪಂ. ಅಧ್ಯಕ್ಷೆ ಮುನಿರತ್ನಮ್ಮ ಬೈಲಪ್ಪ, ಮಾಜಿ ಅಧ್ಯಕ್ಷರಾದ ಟಿ.ರಮೇಶ್, ಇಂದ್ರಮ್ಮ ರಾಮಾಂಜಿನಪ್ಪ, ಉಪಾಧ್ಯಕ್ಷೆ ಗೌರಮ್ಮ ನಾರಾಯಣ ಸ್ವಾಮಿ, ಸದಸ್ಯರಾದ ಮುನಿ ಯಲ್ಲಪ್ಪ, ವಿಜಯಕುಮಾರ್, ಕಿರಣ್, ಲಕ್ಷ್ಮೀನಾರಾಯಣ, ಮಂಜುನಾಥ್, ಉಮೇಶ್, ಪ್ರಮೀಳಾ ವಾಸುದೇವ್, ವೈದ್ಯಕೀಯ ಪ್ರಕೋಷ್ಠದ ಮುಖ್ಯ ಸಂಚಾಲಕರಾದ ಬಸವರಾಜ್ ಜಗದಾಳೆ, ಲತಾ ಚಂದ್ರಶೇಖರ್ ಸೇರಿದಂತೆ ಕೇರ್ ವೆಲ್ ಆಸ್ಪತ್ರೆ, ಸಕ್ರ ಆಸ್ಪತ್ರೆ, ಕ್ಯಾನ್ಸರ್ ಕೇರ್ ಆಸ್ಪತ್ರೆ, ಕೃಷ್ಣ ನೇತ್ರಾಲಯದ ವೈದ್ಯರು, ನಂದಾದೀಪ ಮಹಿಳಾ ಒಕ್ಕೂಟದ ಪದಾಧಿಕಾರಿಗಳಿದ್ದರು.

Leave a Reply

Your email address will not be published. Required fields are marked *