ಚಿಕ್ಕಬಳ್ಳಾಪುರ, ಜುಲೈ 15: ಜಿಲ್ಲೆಯಲ್ಲಿ ನಗರೋತ್ಥಾನ ಯೋಜನೆಯಲ್ಲಿ ಬಿಡುಗಡೆಯಾಗಿರುವ ಅನುದಾನವನ್ನು ಸಮರ್ಪಕವಾಗಿ ವೆಚ್ಚ ಮಾಡಿ,ಯೋಜನೆಯನ್ನು ತ್ವರಿತವಾಗಿ ಜನರಿಗೆ ತಲುಪಿಸಬೇಕು ಎಂದು ಪೌರಾಡಳಿತ ಮತ್ತು ಹಜ್ ಸಚಿವ ರಹೀಂ ಖಾನ್ ಅವರು ಅಧಿಕಾರಿಗಳಿಗೆ ಸೂಚಿಸಿದರು.

ಅವರು ಶನಿವಾರ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನಡೆದ “ನಗರೋತ್ಥಾನ ಯೋಜನೆ ಅನುಷ್ಠಾನ ಮತ್ತು UGD ವ್ಯವಸ್ಥೆ ಹಾಗೂ ಕುಡಿಯುವ ನೀರಿನ ಪೂರೈಕೆ ಕುರಿತು ಜಿಲ್ಲಾ ಮಟ್ಟದ ಅಧಿಕಾರಿಗಳೊಂದಿಗೆ ಪ್ರಗತಿ ಪರಿಶೀಲನೆ ಸಭೆಯಲ್ಲಿ ಅಗತ್ಯ ಸೂಚನೆಗಳನ್ನು ನೀಡಿದರು. ನಂತರ ಸುದ್ದಿಗಾರರನ್ನು ಉದ್ದೇಶಿಸಿ ಮಾತನಾಡಿದರು.

ನಗರೋತ್ಥಾನ ಯೋಜನೆಯಲ್ಲಿ ಚಿಕ್ಕಬಳ್ಳಾಪುರ ಜಿಲ್ಲೆಗೆ 120 ಕೋಟಿ ಅನುದಾನ ಬಿಡುಗಡೆಯಾಗಿದ್ದು, ಈ ಪೈಕಿ ವಿವಿಧ ಅಭಿವೃದ್ಧಿ ಕಾಮಗಾರಿಗಳು ವಿವಿಧ ಹಂತದಲ್ಲಿ ಪ್ರಗತಿಯಲ್ಲಿವೆ. ಈ ಕುರಿತು ಪ್ರಗತಿ ಪರಿಶೀಲನೆ ನಡೆಸಿ ಅಧಿಕಾರಿಗಳಿಗೆ ಅಗತ್ಯ ಸೂಚನೆಗಳನ್ನು ನೀಡಲಾಗಿದೆ,ತ್ವರಿತಗತಿಯಲ್ಲಿ ಕಾಮಗಾರಿಗಳು ಆಗಬೇಕು.ನಗರ ಪ್ರದೇಶಗಳಲ್ಲಿನ ಒಳ ಚರಂಡಿ ವ್ಯವಸ್ಥೆ ಮತ್ತು ಕುಡಿಯುವ ನೀರಿನ ಸಮಸ್ಯೆಗಳ ಪರಿಹಾರಕ್ಕೆ ಹಲವು ಸೂಚನೆಗಳನ್ನು ನೀಡಿದ್ದೇನೆ. SFC ಮತ್ತು 15ನೇ ಹಣಕಾಸು ಯೋಜನೆಯ ಅನುದಾನದ ಸದ್ಬಳಕೆಗೆ ಕ್ರಮಕೈಗೊಳ್ಳಲು ತಿಳಿಸಿದ್ದೇನೆ.ಒಟ್ಟಾರೆ ನೂತನ ಸರ್ಕಾರದ ಆಶಯದಂತೆ ಜನರಿಗೆ ತ್ವರಿತ ಆಡಳಿತ, ತ್ವರಿತ ಸೇವೆ ನೀಡಲು ಅಧಿಕಾರಿಗಳಿಗೆ ಸೂಚಿಸಿರುವುದಾಗಿ ತಿಳಿಸಿದರು.

ಬಡವರಿಗೆ ಸಹಕಾರಿ

ಸರ್ಕಾರ ಇತ್ತೀಚೆಗೆ ಅನುಷ್ಠಾನಗೊಳಿಸುತ್ತಿರುವ ಗ್ಯಾರಂಟಿ ಯೋಜನೆಗಳಿಂದ ಮಹಿಳೆಯರು,ಯುವಕರು ಮತ್ತು ಬಡವರಿಗೆ ಹೆಚ್ಚು ಅನುಕೂಲಕಾರಿಯಾಗಿದೆ.ಜಾತ್ಯಾತೀತವಾಗಿ ಎಲ್ಲ ಯೋಜನೆಗಳನ್ನು ಅನುಷ್ಠಾನಗೊಳಿಸಲಾಗುತ್ತಿದೆ. ಯಾವುದೇ ಒಂದು ವರ್ಗಕ್ಕೆ ,ಉದ್ಯಮಕ್ಕೆ ಅನುಕೂಲ ಆಗುವ ನಿಟ್ಟಿನಲ್ಲಿ ಯೋಜನೆಗಳನ್ನು ಜಾರಿಗೆ ತಂದಿಲ್ಲ.ಈ ಯೋಜನೆಗಳಿಂದ ಸರ್ಕಾರ ದಿವಾಳಿ ಆಗುತ್ತದೆ,ಆರ್ಥಿಕತೆ ನಾಶವಾಗುತ್ತದೆ ಎಂಬುದು ಸುಳ್ಳು ಆರೋಪಗಳು ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಪೌರಾಡಳಿತ ಇಲಾಖೆಯ ನಿರ್ದೇಶಕಿ ಮಂಜುಶ್ರೀ, ಜಿಲ್ಲಾಧಿಕಾರಿ ಪಿ.ಎನ್ ರವೀಂದ್ರ, ಗೌರಿಬಿದನೂರು ವಿದಾನಸಭಾ ಕ್ಷೇತ್ರದ ಶಾಸಕ ಪುಟ್ಟಸ್ವಾಮಿ ಗೌಡ, ಶಿಡ್ಲಘಟ್ಟ ವಿಧಾನಸಭಾ ಕ್ಷೇತ್ರದ ಶಾಸಕ ರವಿ ಕುಮಾರ್, ನಗರಸಭೆ ಆಯುಕ್ತೆ ಪಂಪಾಶ್ರೀ, ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕಿ ರೇಣುಕಾ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು,

ನಗರೋತ್ಥಾನ ಯೋಜನೆ ಸಮರ್ಪಕ ಅನುಷ್ಠಾನಕ್ಕೆ ಸಚಿವ ರಹೀಂ ಖಾನ್ ಸೂಚನೆ

ಚಿಕ್ಕಬಳ್ಳಾಪುರ, ಜುಲೈ 15: ಜಿಲ್ಲೆಯಲ್ಲಿ ನಗರೋತ್ಥಾನ ಯೋಜನೆಯಲ್ಲಿ ಬಿಡುಗಡೆಯಾಗಿರುವ ಅನುದಾನವನ್ನು ಸಮರ್ಪಕವಾಗಿ ವೆಚ್ಚ ಮಾಡಿ,ಯೋಜನೆಯನ್ನು ತ್ವರಿತವಾಗಿ ಜನರಿಗೆ ತಲುಪಿಸಬೇಕು ಎಂದು ಪೌರಾಡಳಿತ ಮತ್ತು ಹಜ್ ಸಚಿವ ರಹೀಂ ಖಾನ್ ಅವರು ಅಧಿಕಾರಿಗಳಿಗೆ ಸೂಚಿಸಿದರು.

ಅವರು ಶನಿವಾರ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನಡೆದ “ನಗರೋತ್ಥಾನ ಯೋಜನೆ ಅನುಷ್ಠಾನ ಮತ್ತು UGD ವ್ಯವಸ್ಥೆ ಹಾಗೂ ಕುಡಿಯುವ ನೀರಿನ ಪೂರೈಕೆ ಕುರಿತು ಜಿಲ್ಲಾ ಮಟ್ಟದ ಅಧಿಕಾರಿಗಳೊಂದಿಗೆ ಪ್ರಗತಿ ಪರಿಶೀಲನೆ ಸಭೆಯಲ್ಲಿ ಅಗತ್ಯ ಸೂಚನೆಗಳನ್ನು ನೀಡಿದರು. ನಂತರ ಸುದ್ದಿಗಾರರನ್ನು ಉದ್ದೇಶಿಸಿ ಮಾತನಾಡಿದರು.

ನಗರೋತ್ಥಾನ ಯೋಜನೆಯಲ್ಲಿ ಚಿಕ್ಕಬಳ್ಳಾಪುರ ಜಿಲ್ಲೆಗೆ 120 ಕೋಟಿ ಅನುದಾನ ಬಿಡುಗಡೆಯಾಗಿದ್ದು, ಈ ಪೈಕಿ ವಿವಿಧ ಅಭಿವೃದ್ಧಿ ಕಾಮಗಾರಿಗಳು ವಿವಿಧ ಹಂತದಲ್ಲಿ ಪ್ರಗತಿಯಲ್ಲಿವೆ. ಈ ಕುರಿತು ಪ್ರಗತಿ ಪರಿಶೀಲನೆ ನಡೆಸಿ ಅಧಿಕಾರಿಗಳಿಗೆ ಅಗತ್ಯ ಸೂಚನೆಗಳನ್ನು ನೀಡಲಾಗಿದೆ,ತ್ವರಿತಗತಿಯಲ್ಲಿ ಕಾಮಗಾರಿಗಳು ಆಗಬೇಕು.ನಗರ ಪ್ರದೇಶಗಳಲ್ಲಿನ ಒಳ ಚರಂಡಿ ವ್ಯವಸ್ಥೆ ಮತ್ತು ಕುಡಿಯುವ ನೀರಿನ ಸಮಸ್ಯೆಗಳ ಪರಿಹಾರಕ್ಕೆ ಹಲವು ಸೂಚನೆಗಳನ್ನು ನೀಡಿದ್ದೇನೆ. SFC ಮತ್ತು 15ನೇ ಹಣಕಾಸು ಯೋಜನೆಯ ಅನುದಾನದ ಸದ್ಬಳಕೆಗೆ ಕ್ರಮಕೈಗೊಳ್ಳಲು ತಿಳಿಸಿದ್ದೇನೆ.ಒಟ್ಟಾರೆ ನೂತನ ಸರ್ಕಾರದ ಆಶಯದಂತೆ ಜನರಿಗೆ ತ್ವರಿತ ಆಡಳಿತ, ತ್ವರಿತ ಸೇವೆ ನೀಡಲು ಅಧಿಕಾರಿಗಳಿಗೆ ಸೂಚಿಸಿರುವುದಾಗಿ ತಿಳಿಸಿದರು.

ಬಡವರಿಗೆ ಸಹಕಾರಿ

ಸರ್ಕಾರ ಇತ್ತೀಚೆಗೆ ಅನುಷ್ಠಾನಗೊಳಿಸುತ್ತಿರುವ ಗ್ಯಾರಂಟಿ ಯೋಜನೆಗಳಿಂದ ಮಹಿಳೆಯರು,ಯುವಕರು ಮತ್ತು ಬಡವರಿಗೆ ಹೆಚ್ಚು ಅನುಕೂಲಕಾರಿಯಾಗಿದೆ.ಜಾತ್ಯಾತೀತವಾಗಿ ಎಲ್ಲ ಯೋಜನೆಗಳನ್ನು ಅನುಷ್ಠಾನಗೊಳಿಸಲಾಗುತ್ತಿದೆ. ಯಾವುದೇ ಒಂದು ವರ್ಗಕ್ಕೆ ,ಉದ್ಯಮಕ್ಕೆ ಅನುಕೂಲ ಆಗುವ ನಿಟ್ಟಿನಲ್ಲಿ ಯೋಜನೆಗಳನ್ನು ಜಾರಿಗೆ ತಂದಿಲ್ಲ.ಈ ಯೋಜನೆಗಳಿಂದ ಸರ್ಕಾರ ದಿವಾಳಿ ಆಗುತ್ತದೆ,ಆರ್ಥಿಕತೆ ನಾಶವಾಗುತ್ತದೆ ಎಂಬುದು ಸುಳ್ಳು ಆರೋಪಗಳು ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಪೌರಾಡಳಿತ ಇಲಾಖೆಯ ನಿರ್ದೇಶಕಿ ಮಂಜುಶ್ರೀ, ಜಿಲ್ಲಾಧಿಕಾರಿ ಪಿ.ಎನ್ ರವೀಂದ್ರ, ಗೌರಿಬಿದನೂರು ವಿದಾನಸಭಾ ಕ್ಷೇತ್ರದ ಶಾಸಕ ಪುಟ್ಟಸ್ವಾಮಿ ಗೌಡ, ಶಿಡ್ಲಘಟ್ಟ ವಿಧಾನಸಭಾ ಕ್ಷೇತ್ರದ ಶಾಸಕ ರವಿ ಕುಮಾರ್, ನಗರಸಭೆ ಆಯುಕ್ತೆ ಪಂಪಾಶ್ರೀ, ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕಿ ರೇಣುಕಾ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು,

Leave a Reply

Your email address will not be published. Required fields are marked *