ದೇವನಹಳ್ಳಿ: ಶಿಕ್ಷಣ ಮತ್ತು ಆರೋಗ್ಯ ಕ್ಷೇತ್ರದಲ್ಲಿ ಮಾಡಿದ ಸಾಧನೆಗೆ ದೇವನಹಳ್ಳಿ ಆಕಾಶ್ ಸಮೂಹ ಸಂಸ್ಥೆಗಳ ಸಂಸ್ಥಾಪಕ ಅಧ್ಯಕ್ಷ ಕೆ.ಮುನಿರಾಜು ಅವರಿಗೆ ಜೀವಮಾನ ಸಾಧನೆ ಪ್ರಶಸ್ತಿ ಲಬಿಸಿದೆ‌.
ಟೈಮ್ಸ್ ಹೆಲ್ತ್ ಎಕ್ಸೆಲೆನ್ಸ್ ಸಂಸ್ಥೆಯ ವತಿಯಿಂದ ಜೀವಮಾನ ಸಾಧನೆ ಪ್ರಶಸ್ತಿಯನ್ನು ಶುಕ್ರವಾರ ಬೆಂಗಳೂರಿನ ಪ್ರತಿಷ್ಠಿತ ಹೊಟೇಲ್‌ನಲ್ಲಿ ಆಕಾಶ್ ಗ್ರೂಪ್ ಆಫ್ ಇನ್ಸಿಟ್ಯೂಟ್‌ನ ಸಂಸ್ಥಾಪಕ ಅಧ್ಯಕ್ಷ ಕೆ.ಮುನಿರಾಜ್ ಅವರಿಗೆ ಬಾಲಿವುಡ್‌ನ ಖ್ಯಾತ ನಟ ಸುನೀಲ್‌ಶೆಟ್ಟಿ ಅವರು ಜೀವಮಾನ ಪ್ರಶಸ್ತಿ ನೀಡಿ ಗೌರವಿಸಿದರು.

ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಇರುವ ದೇವನಹಳ್ಳಿಯ ಪ್ರಸನ್ನಹಳ್ಳಿಯಲ್ಲಿ 20210ರಲ್ಲಿ ಆಕಾಶ್ ಇಂಟರ್‌ನ್ಯಾಷನಲ್ ಸ್ಕೂಲ್ ಸ್ಥಾಪಿಸಿ, 2012ರಲ್ಲಿ ಆಕಾಶ್ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯನ್ನು ಸ್ಥಾಪಿಸಿ, 950 ಹಾಸಿಗಳನ್ನು ಹೊಂದಿರುವ ಆಕಾಶ್ ಆಸ್ಪತ್ರೆಯು ರೋಗಿಗಳಿಗೆ ಗುಣಮಟ್ಟದ ಚಿಕಿತ್ಸೆ ಹಾಗೂ ಆರೋಗ್ಯ ಸೇವೆಯನ್ನು ನಿರಂತರವಾಗಿ ಒದಗಿಸಿಕೊಡುತ್ತಿದ್ದು ಆಕಾಶ್ ಆಸ್ಪತ್ರೆಯು ರೋಗಿಗಳಿಗೆ ಉತ್ತಮ ಗುಣಮಟ್ಟದ ಚಿಕಿತ್ಸೆ ನೀಡುತ್ತಿದೆ ಎಲ್ಲಾ ಸಮಯದಲ್ಲೂ ರೋಗಿಗಳೊಂದಿಗೆ ಸಮಾಲೋಚನೆ, ಒಳರೋಗಿ ಸೇವೆಗಳಿಗಾಗಿ, ಇನ್‌ಸ್ಟಿಟ್ಯೂಟ್ ಆಫ್ ನರ್ಸಿಂಗ್, ಇನ್‌ಸ್ಟಿಟ್ಯೂಟ್ ಆಫ್ ಪ್ಯಾರಾಮೆಡಿಕ್ ಸೈನ್ಸಸ್, ಇನ್‌ಸ್ಟಿಟ್ಯೂಟ್ ಆಫ್ ಅಲೈಡ್ ಹೆಲ್ತ್ ಸೈನ್ಸಸ್ ಮತ್ತು ಇನ್‌ಸ್ಟಿಟ್ಯೂಟ್ ಆಫ್ ಫಿಸಿಯೋಥೆರಪಿಯನ್ನು ಸ್ಥಾಪಿಸಲಾಗಿದ್ದು, 2022ರಲ್ಲಿ, ಇನ್ಸ್ಟಿಟ್ಯೂಟ್ ಆಫ್ ಮ್ಯಾನೇಜ್ಮೆಂಟ್ ಮತ್ತು ಸೈನ್ಸ್ ಅನ್ನು ಪ್ರಾರಂಭಿಸಲಾಯಿತು. 2023 ರಲ್ಲಿ ಇನ್‌ಸ್ಟಿಟ್ಯೂಟ್ ಆಫ್ ಫಾರ್ಮಸಿ ಮತ್ತು ಆಕಾಶ್ ಇನ್‌ಸ್ಟಿಟ್ಯೂಟ್ ಆಫ್ ಇಂಜಿನಿಯರಿಂಗ್ ಮತ್ತು ಟೆಕ್ನಾಲಜಿಯನ್ನು ಸ್ಥಾಪಿಸಲಾಗಿದೆ. ಕೋವಿಡ್ ಸಂದರ್ಭದಲ್ಲಿ ಕ್ರಮಬದ್ಧವಾಗಿ ರೋಗಿಗಳಿಗೆ ಸಲ್ಲಿಸಿದ್ದ ಸೇವೆಯನ್ನು ಪರಿಗಣಿಸಿ ಟೈಮ್ಸ್ ಹೆಲ್ತ್ ಎಕ್ಸೆಲೆನ್ಸ್ 2023 ವತಿಯಿಂದ ಕೆ ಮುನಿರಾಜು ಅವರಿಗೆ ಜೀವಮಾನ ಸಾಧನೆ ಪ್ರಶಸ್ತಿಯನ್ನು ಪ್ರಧಾನ ಮಾಡಲಾಗಿದೆ, ಎಂದು ಆಕಾಶ್ ಗ್ರೂಪ್ ಆಫ್ ಇನ್ಸ್ಟಿಟ್ಯೂಟ್ ನ ಉಪಾಧ್ಯಕ್ಷ ಅಮರ್‌ಗೌಡ ಮಾಹಿತಿ ನೀಡಿದ್ದಾರೆ.

ಈ ಸಂದರ್ಭದಲ್ಲಿ ಟೈಮ್ಸ್ ಹೆಲ್ತ್ ಎಕ್ಸೆಲೆನ್ಸ್‌ನ
ಮುಖ್ಯಸ್ಥರು ಹಾಗೂ ಆಕಾಶ್ ಆಸ್ಪತ್ರೆ ಗ್ರೂಪ್‌ನ ಪದಾಧಿಕಾರಿಗಳು, ಸಿಬ್ಬಂದಿ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *