ಕೋಲಾರ : ತಾಲೂಕಿನ ವಕ್ಕಲೇರಿ ಗ್ರಾಮದಲ್ಲಿ ರಾಜ್ಯ ಮತ್ತು ಕೇಂದ್ರ ಸರಕಾರ ಮಹತ್ವಾಕಾಂಕ್ಷೆಯ ಮನೆ ಮನೆಗೆ ನೀರು ತಲುಪಿಸುವ ಸುಮಾರು 1.95 ಕೋಟಿ ವೆಚ್ಚದ ಜಲ ಜೀವನ್ ಮಿಷನ್ ಯೋಜನೆಯನ್ನು ಗ್ರಾಪಂ ಅಧ್ಯಕ್ಷೆ ವೈ.ಎಂ.ರಾಧಿಕಾ ಹಾಗೂ ಉಪಾಧ್ಯಕ್ಷ ಎಂ.ಆನಂದ್ ಕುಮಾರ್ ನೇತೃತ್ವದಲ್ಲಿ ಚಾಲನೆ ನೀಡಲಾಯಿತು.

ಈ ಸಂದರ್ಭದಲ್ಲಿ ರಾಜ್ಯ ಒಕ್ಕಲಿಗ ಸಂಘದ ಮಾಜಿ ನಿರ್ದೇಶಕ ಹಿರಿಯ ಮುಖಂಡ ವಕ್ಕಲೇರಿ ರಾಮು ಮಾತನಾಡಿ ಜಲ ಜೀವನ್ ಮಿಷನ್ ಯೋಜನೆಯಿಂದ ಬರಪೀಡಿತ ಜಿಲ್ಲೆಗೆ ಶುದ್ದ ಕುಡಿಯುವ ನೀರು ಒದಗಿಸುವ ಉದ್ದೇಶವಾಗಿದೆ ಇದರಿಂದ ನೀರಿನ ಸದುಪಯೋಗದ ಜೊತೆಗೆ ಮಿತ ಬಳಕೆ ಮಾಡಿಕೊಳ್ಳಲು ಸಹಕಾರಿಯುತ್ತದೆ ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಗ್ರಾಪಂ ಪಿಡಿಒ ಮಂಜುನಾಥ್ ಪ್ರಸಾದ್, ಸದಸ್ಯರಾದ ಜಿ.ಎಂ.ಶ್ರೀನಿವಾಸ್, ಬೊಟ್ಟು ರಾಜಪ್ಪ, ಮಾಜಿ ಸದಸ್ಯ ಮಂಜುನಾಥ, ಮಾರ್ಕಂಡೇಶ್ವರ ಸ್ವಾಮಿ ದೇವಸ್ಥಾನ ಸೇವಾ ಸಮಿತಿ ಸಂಚಾಲಕ ವೇಣುಗೋಪಾಲಗೌಡ, ಗ್ರಾಮದ ಮುಖಂಡ ಹಿರಣ್ಯಯ್ಯ, ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ಇಂಜಿನಿಯರ್ ವೇಣು, ಜೆಎಂಸಿ ಇಂಜಿನಿಯರ್ ಮೋಹನ್, ಗ್ರಾಮ ಪಂಚಾಯತಿ ಸಿಬ್ಬಂದಿ ಇದ್ದರು.

Leave a Reply

Your email address will not be published. Required fields are marked *