ದೇವನಹಳ್ಳಿ : ರಾಷ್ಟ್ರಕವಿ ಕುವೆಂಪು ಅವರ ಜನ್ಮದಿನದ ಅಂಗವಾಗಿ ವಿಶ್ವಮಾನವ ದಿನಾಚರಣೆಯನ್ನು ಇಂದು ದೇವನಹಳ್ಳಿ ತಾಲ್ಲೂಕು ಕಛೇರಿ ಸಭಾಂಗಣದಲ್ಲಿ ಸರಳವಾಗಿ ಆಚರಿಸಲಾಯಿತು.
ಗ್ರೇಟ್2 ತಹಶಿಲ್ದಾರ್ ಉಷಾ, ಹಾಗೂ ಹಿರಿಯ ಪತ್ರಕರ್ತ ಪಿಳ್ಳರಾಜು ಅವರುಗಳು ರಾಷ್ಟ್ರಕವಿ ಕುವೆಂಪು ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವ ಮೂಲಕ ಗೌರವ ನಮನ ಸಲ್ಲಿಸಿದರು.
ಕಾರ್ಯಕ್ರಮದಲ್ಲಿ ತಾಲೂಕು ಕಚೇರಿ ಅಧಿಕಾರಿಗಳು ಹಾಗೂ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.
