
ಚಿಕ್ಕಬಳ್ಳಾಪುರ ನಗರ ಮಂಡಲದ ನಿಕಟಪೂರ್ವ ಅಧ್ಯಕ್ಷ ವಿ. ಶ್ರೀನಿವಾಸ್, ನಗರ ಮಂಡಲ ಮಾಜಿ ಅಧ್ಯಕ್ಷ ಕೆಳಗಿನ ತೋಟದ ವಿ.ಸುಬ್ಬರಾಜು, ಜಿಲ್ಲಾ ಉಪಾಧ್ಯಕ್ಷೆ ಕಲಾ ನಾಗರಾಜ್, ಬಿಜೆಪಿ ಹಿರಿಯ ಮುಖಂಡರಾದ ಆರ್ಕೆಸ್ಟ್ರಾ ಮುನಿರಾಜು,ನಗರದ ಚಾಮರಾಜಪೇಟೆಯ ಟಿ.ಕೊಂಡಪ್ಪ ಇವರಗಳನ್ನು ಸೌತ್ ವೆಸ್ಟ್ ರೈಲ್ವೆ ಚಿಕ್ಕಬಳ್ಳಾಪುರ ನಿಲ್ದಾಣದ ಸಮಿತಿ ಸದಸ್ಯರನ್ನಾಗಿ ನೇಮಿಸಲಾಗಿದೆ ಎಂದು ಸೌತ್ ವೆಸ್ಟ್ ರೈಲ್ವೆ ಇಲಾಖೆ ನೀಡಿರುವ ಪ್ರಕಟಣೆಯಲ್ಲಿ ತಿಳಿಸಿದೆ. ನೂತನವಾಗಿ ಆಯ್ಕೆಯಾದ ರೈಲ್ವೆ ನಿಲ್ದಾಣದ ಸಲಹಾ ಸಮಿತಿ ಸದಸ್ಯರನ್ನು ಡಿವಿಜನ್ ಕಮರ್ಷಿಯಲ್ ಮ್ಯಾನೇಜರ್ ಸೇರಿದಂತೆ ಬಿಜೆಪಿ ಜಿಲ್ಲಾ ಅಧ್ಯಕ್ಷ ರಾಮಲಿಂಗಪ್ಪ ಅಭಿನಂದನೆ ಸಲ್ಲಿಸಿದ್ದಾರೆ. ಇದೇ ವೇಳೆ ರೈಲ್ವೆ ನಿಲ್ದಾಣದ ಸಲಹಾ ಸಮಿತಿ ನೂತನ ಸದಸ್ಯರುಗಳನ್ನಾಗಿ ಆಯ್ಕೆ ಮಾಡಿದ ಕೇಂದ್ರ ರೈಲ್ವೆ ಸಚಿವರಿಗೆ ರಾಜ್ಯ ನಾಯಕರಿಗೆ ಜಿಲ್ಲಾ ಮುಖಂಡರಿಗೆ ನೂತನ ಸದಸ್ಯರು ಧನ್ಯವಾದ ಸಲ್ಲಿಸಿದ್ದಾರೆ.