ಯಲಹಂಕ ಶಾಸಕ ಎಸ್.ಆರ್.ವಿಶ್ವನಾಥ್ ಮಾತನಾಡಿ, ‘ಸರ್ಕಾರ ಹಲವು ಜನಪರ ಯೋಜನೆಗಳನ್ನು ಜಾರಿಗೆ ತಂದರೂ ಸಹ ಅನೇಕರಿಗೆ ಅರ್ಜಿ ಹಾಕಬೇಕು, ಸರ್ಕಾರದ ಯೋಜನೆಗಳ ಸದುಪಯೋಗ ಪಡೆದುಕೊಳ್ಳಬೇಕು ಎಂಬುದರ ಅರಿವು ಇರುವುದಿಲ್ಲ. ಯಲಹಂಕದಲ್ಲಿಂದು ಕಾರ್ಯಕ್ರಮ ರೂಪಿಸಿರುವುದು ಶ್ಲಾಘನೀಯ. ಇಂದು 5 ಸಾವಿರ ಅರ್ಜಿಗಳು ಬರುವ ನಿರೀಕ್ಷೆ ಇದೆ ಎಂದರು.

ಡಿಸಿಎಂ ನೇತೃತ್ವದಲ್ಲಿ ಯಲಹಂಕದಲ್ಲಿ ಜನಸಂಪರ್ಕ ಸಭೆ :

ಯಲಹಂಕ : ಮನೆ ಬಾಗಿಲಿಗೆ ಸರಕಾರ ಸೇವೆಗೆ ಇರಲಿ ಸಹಕಾರ, ಅಹವಾಲು ನಿಮ್ಮದು ಪರಿಹಾರ ನಮ್ಮದು ಎಂಬ ಘೋಷ ವಾಕ್ಯದೊಂದಿಗೆ ಡಿಸಿಎಂ ಡಿ.ಕೆ.ಶಿವಕುಮಾರ್ ನೇತೃತ್ವದಲ್ಲಿ ಯಲಹಂಕ ಉಪನಗರದ ಡಾ.ಬಿ.ಆರ್. ಅಂಬೇಡ್ಕರ್  ಭವನದಲ್ಲಿ ಶುಕ್ರವಾರ ಆಯೋಜಿಸಿದ್ದ ಜನಸಂಪರ್ಕ ಸಭೆಯಲ್ಲಿ  ಡಿಸಿಎಂ ಡಿ ಕೆ ಶಿವಕುಮಾರ್ ರವರು ಯಲಹಂಕ, ಬ್ಯಾಟರಾಯನಪುರ, ದಾಸರಹಳ್ಳಿ ವಿಧಾನಸಭಾ ಕ್ಷೇತ್ರಗಳ ವ್ಯಾಪ್ತಿಯ ನಾಗರೀಕರಿಂದ ಶಕ್ತಿ, ಗೃಹ ಜ್ಯೋತಿ, ಅನ್ನಭಾಗ್ಯ, ಗೃಹಲಕ್ಷ್ಮಿ, ಯುವನಿಧಿ ಯೋಜನೆಗಳು ಸೇರಿದಂತೆ ವಿವಿಧ ಸಮಸ್ಯೆಗಳ ಕುರಿತ ಅರ್ಜಿಗಳನ್ನು ಸ್ವೀಕಾರ ಮಾಡಿದರು.

ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹಾಗೂ ಕಂದಾಯ ಸಚಿವ ಕೃಷ್ಣಬೈರೇಗೌಡ ಮಾವಿನ ಗಿಡಕ್ಕೆ ನೀರೆರೆಯುವ ಮೂಲಕ ಕಾರ್ಯಕ್ರಮ ಉದ್ಘಾಟಿಸಿದರು.

ನಂತರ ಡಿಸಿಎಂ ಡಿ.ಕೆ.ಶಿವಕುಮಾರ್ ಮಾತನಾಡಿ ‘ಅಧಿಕಾರಿಗಳ ಕರ್ತವ್ಯಲೋಪ, ಮಂದಗತಿಯ‌ ಕಾರ್ಯನಿರ್ವಹಣೆ, ಲಂಚಗುಳಿತನ ಮುಂತಾದ ದುರ್ವರ್ತನೆಗಳ ಬಗ್ಗೆ ಜನತೆ ಮುಕ್ತವಾಗಿ ತಿಳಿಸಬೇಕು. ರಾಜ್ಯ ಕಾಂಗ್ರೆಸ್ ಸರ್ಕಾರ ಜನಪರ ಆಡಳಿತವನ್ನು ನೀಡುತ್ತಿದೆ. ನಮ್ಮ ಸರ್ಕಾರ ಪ್ರಾಮಾಣಿಕ ಸೇವೆಯನ್ನು ಬೆಂಬಲಿಸುತ್ತದೆಯೇ ಹೊರತು ಭ್ರಷ್ಟಾಚಾರವನ್ನು ಎಂದಿಗೂ ಬೆಂಬಲಿಸುವುದಿಲ್ಲ. ಭ್ರಷ್ಟ ಅಧಿಕಾರಿಗಳ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಲಾಗುವುದು.

ಪ್ರತಿಯೊಬ್ಬರು ತಂದೆ-ತಾಯಿಯ ಋಣ, ಗುರುಗಳ ಋಣ, ಮಣ್ಣಿನ ಋಣ ಮತ್ತು ಜನರ ಋಣವನ್ನು ತಪ್ಪದೆ ತೀರಿಸಬೇಕೆಂದು ಸಂಸ್ಕೃತ ಶ್ಲೋಕದಲ್ಲಿ ಉಲ್ಲೇಖವಿದೆ. ನಮಗೆ ಅಧಿಕಾರ ನೀಡುವ ಮೂಲಕ ಶಕ್ತಿ ನೀಡಿರುವ ಜನತೆಯ ಋಣವನ್ನು ನಾವು ತಪ್ಪದೇ ತೀರಿಸುತ್ತೇವೆ. ಈ ನಿಟ್ಟಿನಲ್ಲಿ ಚುನಾವಣೆಯ ವೇಳೆ ನಮ್ಮ ಕಾಂಗ್ರೆಸ್ ಪಕ್ಷ ನೀಡಿದ್ದ ಐದೂ ಗ್ಯಾರೆಂಟಿಗಳನ್ನು ಈಡೇರಿಸಿದ್ದೇವೆ. ಗೃಹಲಕ್ಷ್ಮಿ ಯೋಜನೆಯಲ್ಲಿ ಕೆಲವು ವ್ಯಕ್ತಿಗತವಾದ ತಾಂತ್ರಿಕ ಸಮಸ್ಯೆಗಳಿಂದಾಗಿ ಕೆಲವರಿಗೆ ಹಣ ಸಂದಾಯವಾಗಿಲ್ಲ, ಕೆಲವು ತಾಯಂದಿರು ತಮ್ಮ ಮೊಬೈಲ್ ಸಂಖ್ಯೆ, ಬ್ಯಾಂಕ್ ಖಾತೆ ಸಂಖ್ಯೆ ನೀಡುವ ಬದಲಿಗೆ ತಮ್ಮ ಗಂಡನ ಮೊಬೈಲ್, ಬ್ಯಾಂಕ್ ಖಾತೆ ಸಂಖ್ಯೆ ನೀಡಿದ್ದಾರೆ. ಇದರಿಂದಾಗಿ ಅವರಿಗೆ ಹಣ ಸಂದಾಯವಾಗಿಲ್ಲ. ಇದನ್ನು ಸರಿಪಡಿಸಲು ಅಗತ್ಯ ಕ್ರಮ ಕೈಗೊಳ್ಳಲಾಗುತ್ತಿದ್ದು ಮುಂದಿನ ದಿನಗಳಲ್ಲಿ ಹೆಚ್ಚುವರಿ ಐದು ಲಕ್ಷಕ್ಕೂ ಹೆಚ್ಚು ಮಹಿಳೆಯರಿಗೆ ಹಣ ಸಂದಾಯವಾಗಲಿದೆ ಎಂದರು.

ಸರ್ಕಾರದ ಎಲ್ಲಾ ಇಲಾಖೆಗಳ ಅಧಿಕಾರಿಗಳು ಇಲ್ಲಿ ಉಪಸ್ಥಿತರಿದ್ದಾರೆ. ಜನರಿಗೆ ಸೇವೆ ಮಾಡುವ ದಿಸೆಯಲ್ಲಿ ಅಧಿಕಾರಿಗಳೊಂದಿಗೆ ಜನರ ಸಮಸ್ಯೆ ಬಗೆಹರಿಸಲು ಇಲ್ಲಿಗೆ ಬಂದಿದ್ದೇನೆ. ಸಮಸ್ಯೆಗಳನ್ನು ಆಲಿಸಿ ಬಗೆಹರಿಸುವ ನಿಟ್ಟಿನಲ್ಲಿ ಅಧಿಕಾರಿಗಳು ಕಾರ್ಯಪ್ರವೃತ್ತ ರಾಗುತ್ತಾರೆ. ಅಧಿಕಾರಿಗಳಿಂದ ಬೇಸತ್ತವರು ರಾಜಕಾರಣಿಗಳ ಬಳಿ ಬರುತ್ತಾರೆ. ಅಧಿಕಾರಿಗಳ ಬೇಜವಾಬ್ದಾರಿಯುತ ವರ್ತನೆ ತಪ್ಪಿಸುವ ನಿಟ್ಟಿನಲ್ಲಿ ಕಾರ್ಯಕ್ರಮ ರೂಪಿಸಿದ್ದೇವೆ. ಯಾರೇ ಆದರೂ ಲಂಚ ಕೇಳಿದರೆ ನೇರವಾಗಿ ದೂರು ಸಲ್ಲಿಸಿ ಕಾನೂನು ಚೌಕಟ್ಟಿನಲ್ಲಿ ನ್ಯಾಯ ಒದಗಿಸಲಾಗುವುದು ಎಂದರು.

5 ಗ್ಯಾರಂಟಿಗಳನ್ನು ಅನುಷ್ಟಾನಗೊಳಿಸಿದ್ದೇವೆ.  ಜನರಿಗೆ ಈಗಾಗಲೇ ಸೌಲಭ್ಯ ದೊರಕಿದೆ. 1.45ಕೋಟಿ ಜನರು ನಗರದಲ್ಲಿ ವಾಸಿಸುತ್ತಿದ್ದಾರೆ ಆದರೆ ಸರಿಯಾಗಿ ತೆರಿಗೆ ಪಾವತಿಸುತ್ತಿಲ್ಲ. ನಗರದ ಸ್ವಚ್ಛತೆ , ಸುರಕ್ಷತೆ ಕಾಪಾಡಲು ಹಣ ಅವಶ್ಯಕವಾಗಿದ್ದು, ಜನತೆ ಸ್ವಯಂ ಪ್ರೇರಣೆಯಿಂದ ತೆರಿಗೆ ಪಾವತಿಸುವಂತಾಗಬೇಕು ಎಂದರು

ಕಂದಾಯ ಸಚಿವ ಕೃಷ್ಣಬೈರೇಗೌಡ ಮಾತನಾಡಿ, ಅಂತಾರಾಷ್ಟ್ರೀಯ ಮಟ್ಟದಲ್ಲಿ ಬೆಂಗಳೂರು ಹೆಸರಾಗಿದೆ. ಬೆಂಗಳೂರಿಗೆ ಹೊಸದಿಕ್ಕು ಹಾಗೂ ಹೊಸ ಲುಕ್ಕು ಕೊಡುವ ನೀಡುವ ಸಂಕಲ್ಪದೊಂದಿಗೆ ಅಭಿವೃದ್ಧಿ ಕಾರ್ಯಗಳನ್ನು ಹಮ್ಮಿಕೊಂಡಿದ್ದೇವೆ. ಜನರು ಸರ್ಕಾರಿ ಕಚೇರಿಗಳಿಗೆ ಅಲೆಯುವುದನ್ನು ತಪ್ಪಿಸುವ ನಿಟ್ಟಿನಲ್ಲಿ ಕಾರ್ಯಕ್ರಮ ರೂಪಿಸಿಧ್ದೇವೆ,, ಜನರ ಸಮಸ್ಯೆ ಪರಿಹಾರ ಮಾಡುವತ್ತ ಸರ್ಕಾರ ಹೆಜ್ಜೆ ಇಟ್ಟಿದೆ. ಅಧಿಕಾರಿಗಳಿಗೆ ಪರಿಶ್ರಮ ಇರುತ್ತದೆ  ಎಂದು ಗೊತ್ತಿದೆ ಆದರೆ ಅಧಿಕಾರಿಗಳು ಪರಿಹರಿಸುವ ನಿಟ್ಟಿನಲ್ಲಿ ಕಾರ್ಯಪ್ರವೃತ್ತಟರಾಗಬೇಕು ಎಂದು ತಿಳಿಸಿದರು.

ಯಲಹಂಕ ಶಾಸಕ ಎಸ್.ಆರ್.ವಿಶ್ವನಾಥ್ ಮಾತನಾಡಿ, ‘ಸರ್ಕಾರ ಹಲವು ಜನಪರ ಯೋಜನೆಗಳನ್ನು ಜಾರಿಗೆ ತಂದರೂ ಸಹ ಅನೇಕರಿಗೆ ಅರ್ಜಿ ಹಾಕಬೇಕು, ಸರ್ಕಾರದ ಯೋಜನೆಗಳ ಸದುಪಯೋಗ ಪಡೆದುಕೊಳ್ಳಬೇಕು ಎಂಬುದರ ಅರಿವು ಇರುವುದಿಲ್ಲ. ಯಲಹಂಕದಲ್ಲಿಂದು ಕಾರ್ಯಕ್ರಮ ರೂಪಿಸಿರುವುದು ಶ್ಲಾಘನೀಯ. ಇಂದು 5 ಸಾವಿರ ಅರ್ಜಿಗಳು ಬರುವ ನಿರೀಕ್ಷೆ ಇದೆ ಎಂದರು.

ಕಾರ್ಯಕ್ರಮದಲ್ಲಿ ದಾಸರಹಳ್ಳಿ ವಿಧಾನಸಬಾ ಕ್ಷೇತ್ರ ಶಾಸಕ ಮುನಿರಾಜು, ವಿಧಾನ ಪರಿಷತ್ ಸದಸ್ಯ ಎಂ.ಆರ್.ಸೀತಾರಾಮ್, ಬಿಬಿಎಂಪಿ ಅಪರ ಮುಖ್ಯ ಆಯುಕ್ತ ರಾಕೇಶ್ ಸಿಂಗ್, ಆಯುಕ್ತರಾದ ದಯಾನಂದ್, ತುಷಾರ್ ಗಿರಿನಾಥ್, ಯಲಹಂಕ ತಹಶಿಲ್ದಾರ್ ಅನಿಲ್ ಅರೋಲಿಕರ್ ಸೇರಿದಂತೆ ಕಂದಾಯ, ಶಿಕ್ಷಣ, ಸಮಾಜ ಕಲ್ಯಾಣ, ಮಹಿಳಾ ಮತ್ತು ಮಕ್ಕಳ ಕಲ್ಯಾಣ, ಕೃಷಿ, ಆಹಾರ, ಆರೋಗ್ಯ ಇಲಾಖೆ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿ ಪಾಲ್ಗೊಂಡಿದ್ದರು.

ಕಾರ್ಯಕ್ರಮದಲ್ಲಿ ಯಲಹಂಕ, ಬ್ಯಾಟರಾಯನಪುರ ಮತ್ತು ದಾಸರಹಳ್ಳಿ ವಿಧಾನ ಸಭಾ ಕ್ಷೇತ್ರಗಳ ವ್ಯಾಪ್ತಿಯ ಸಾವಿರಾರು ನಾಗರೀಕರು ತಮ್ಮ ಅಹವಾಲು ಗಳನ್ನು ಹಿಡಿದು ಧಾವಿಸಿದ್ದರು. ಖುದ್ದು ಜನರ ಬಳಿ ತೆರಳಿದ ಉಪ ಮುಖ್ಯಮಂತ್ರಿಗಳು ಸಮಸ್ಯೆಗಳ ಅಹವಾಲುಗಳನ್ನು ಸ್ವೀಕರಿಸಿದರು.

Leave a Reply

Your email address will not be published. Required fields are marked *