ಕೋಲಾರ : ಸಂವಿಧಾನ ಶಿಲ್ಪಿ ಡಾ.ಬಿ.ಆರ್ ಅಂಬೇಡ್ಕರ್ ಅವರು ಬದುಕಿದ್ದಾಗ ಮತ್ತು ಅವರ ಸಾವಿನ ನಂತರವೂ ಕಾಂಗ್ರೆಸ್ ಪಕ್ಷವು ಅವರನ್ನು ಅವಮಾನಿಸುವ ಜೊತೆಗೆ ಅಗೌರವದಿಂದ ನಡೆಸಿಕೊಂಡಿದ್ದಾರೆ ಅವರ ದೊಡ್ಡ ಸಾಧನೆ ಇದರ ಬಗ್ಗೆ ಜನ ಸಮುದಾಯಕ್ಕೆ ತಿಳಿಸುವ ಜವಾಬ್ದಾರಿ ನಮ್ಮ ಮೇಲಿದೆ ಎಂದು ಬಿಜೆಪಿ ಎಸ್ಸಿ ಮೋರ್ಚಾ ರಾಜ್ಯ ಅಧ್ಯಕ್ಷ ಹಾಗೂ ಶಾಸಕ ಸಿಮೆಂಟ್ ಮಂಜು ತಿಳಿಸಿದರು.
ನಗರದ ಹೊರವಲಯದಲ್ಲಿ ನಾರಾಯಣಿ ಕಲ್ಯಾಣ ಮಂಟಪದಲ್ಲಿ ಮಂಗಳವಾರ ಬಿಜೆಪಿ ಪಕ್ಷದಿಂದ ಬಲವರ್ಧನೆಗಾಗಿ ಭೀಮ ಸಮಾವೇಶವನ್ನು ಉದ್ಘಾಟಸಿ ಮಾತನಾಡಿದ ಅವರು ಅಂಬೇಡ್ಕರ್ ಅವರಿಗೆ ಭಾರತ ರತ್ನವನ್ನು ಮರಣೋತ್ತರದ ನಂತರ ಅದರಲ್ಲೂ ಕಾಂಗ್ರೆಸ್ಸೇತರ ಸರ್ಕಾರದಿಂದ ನೀಡಲಾಗಿದೆ
ಕೇಂದ್ರ ಮತ್ತು ವಿವಿಧ ರಾಜ್ಯಗಳಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದ ನಂತರವೇ ಅಂಬೇಡ್ಕರ್ ಅವರಿಗೆ ಸಂಬಂಧಿಸಿದ ಐದು ಸ್ಥಳಗಳನ್ನು ಅಭಿವೃದ್ಧಿ ಪಡಿಸಲಾಗಿದೆ ಇದರ ಸತ್ಯವನ್ನು ತಿಳಿಸಬೇಕಾಗಿದೆ ಎಂದರು.
ಕಾಂಗ್ರೆಸ್ ಪಕ್ಷವು ಉರಿಯುವ ಮನೆಯಂತೆ ಎಂದು ಅವತ್ತೇ ಹೇಳಿದ್ದಾರೆ ಆದರೆ ಇವತ್ತು ಕಾಂಗ್ರೆಸ್ ಪಕ್ಷವು ಬಾಬಾಸಾಹೇಬ್ ಅಂಬೇಡ್ಕರ್ ಬಗ್ಗೆ ಮಾತನಾಡುತ್ತದೆ. ಕಾಂಗ್ರೆಸ್ ವಿರೋಧದ ನಡುವೆಯೂ ಯಾವುದೇ ಭಯವಿಲ್ಲದೆ ಸಮಾನತೆಗಾಗಿ ಸ್ವತಂತ್ರ ಭಾರತಕ್ಕೆ ಸಂವಿಧಾನ ಮತ್ತು ಉತ್ತಮ ಆಡಳಿತಕ್ಕೆ ಅಂಬೇಡ್ಕರ್ ಅವರು ತನ್ನದೇ ಆದ ಕೊಡುಗೆಯನ್ನು ನೀಡಿದ್ದಾರೆ ಇದೇ ರೀತಿಯಲ್ಲಿ ಮುಂದೆಯೂ ಚುನಾವಣೆಗಳಲ್ಲಿ ಬಿಜೆಪಿ ಪಕ್ಷವನ್ನು ಬೆಂಬಲಿಸುವಂತೆ ದಲಿತ ಸಮುದಾಯವನ್ನು ಮನವಿ ಮಾಡಿದರು.
ಈ ಸಂದರ್ಭದಲ್ಲಿ ಮಾಜಿ ಸಚಿವ ಹಾಗೂ ಬಿಜೆಪಿ ರಾಜ್ಯ ಉಪಾಧ್ಯಕ್ಷ ಎನ್. ಮಹೇಶ್ ಮಾತನಾಡಿ ಪ್ರಜಾಪ್ರಭುತ್ವ ವ್ಯವಸ್ಥೆ ಬಲಗೊಳ್ಳದೇ ಹೋದರೆ ದೇಶದಲ್ಲಿ ಯಾವುದೇ ಪಕ್ಷಗಳು ಬಂದರೂ ಅಭಿವೃದ್ಧಿ ಕಾಣಲು ಸಾಧ್ಯವಿಲ್ಲ ಕಾಂಗ್ರೆಸ್ ಅಧಿಕಾರದಲ್ಲಿ ಇದ್ದ 30 ವರ್ಷಗಳ ಕಾಲ ದೇಶದ ಆರ್ಥಿಕ ಅಭಿವೃದ್ಧಿಗೆ ಹಾಗೂ ದಲಿತರ ಯೋಜನೆಗಳಿಗೆ ಹಣ ನೀಡಲಿಲ್ಲ ಅದರಿಂದ ಶೋಷಿತರು ಅಭಿವೃದ್ಧಿಯಾಗಲಿಲ್ಲ ಬಡತನ ರೇಖೆಗಿಂತ ಹೆಚ್ಚು ಜನ ಸಮಾಜದಲ್ಲಿ ದಲಿತರು ಅಲ್ಪಸಂಖ್ಯಾತರು ಇದ್ದಾರೆ ಎಂಬುದನ್ನು ನಾವು ಎಲ್ಲರೂ ಅರ್ಥ ಮಾಡಿಕೊಂಡು ಮುಂದಿನ ದಿನಗಳಲ್ಲಿ ಎಚ್ಚರಿಕೆಯಿಂದ ಮತದಾನ ಮಾಡಬೇಕಾಗಿದೆ ಎಂದರು.
ಕಳೆದ ಚುನಾವಣೆಯಲ್ಲಿ ಸುಳ್ಳು ಭರವಸೆಗಳನ್ನು ನೀಡಿ ರಾಜ್ಯದಲ್ಲಿ ಅಧಿಕಾರಕ್ಕೆ ಬಂದ ಕಾಂಗ್ರೆಸ್ ಸರಕಾರವು ದಲಿತರ ಅಭಿವೃದ್ಧಿಗಾಗಿ ಮೀಸಲಿಡಲಾಗಿದ್ದ ಸುಮಾರು 60 ಸಾವಿರ ಕೋಟಿ ಹಣವನ್ನು ಚುನಾವಣೆಯ ಗೆಲ್ಲಲು ಘೋಷಣೆ ಮಾಡಿದ್ದ ಗ್ಯಾರಂಟಿ ಯೋಜನೆಗಳಿಗೆ ಬಳಕೆಯಾಗಿದೆ ಕಾಂಗ್ರೆಸ್ ಪಕ್ಷದ ತಪ್ಪು ನೀತಿ ನಿರ್ಧಾರಗಳಿಂದ ಇವತ್ತು ದಲಿತರ ಸಮಗ್ರ ಅಭಿವೃದ್ಧಿ ಕಾಣಲು ಸಾಧ್ಯವಾಗುತ್ತಾ ಇಲ್ಲ ಸರಕಾರದ ಆದಾಯ ಹೆಚ್ಚಳದಲ್ಲಿ ದಲಿತರ ಪಾತ್ರ ಮುಖ್ಯವಾಗಿದೆ ಆದರೆ ದಲಿತರ ಅಭಿವೃದ್ಧಿಗೆ ಮಾತ್ರ ಹಣ ಬಿಡುಗಡೆ ಮಾಡುತ್ತಾ ಇಲ್ಲ ಎಂದರು.
ಈ ಸಂದರ್ಭದಲ್ಲಿ ಪ್ರಾಸ್ತಾವಿಕವಾಗಿ ಸಂಸದ ಎಸ್ ಮುನಿಸ್ವಾಮಿ ಮಾತನಾಡಿ ದೇಶದಲ್ಲಿ ಕಾಂಗ್ರೆಸ್ ಪಕ್ಷವು ಅಂಬೇಡ್ಕರ್ ಅವರಿಗೆ ಕೊಟ್ಟು ಅವಮಾನ ನೋವುಗಳನ್ನು ಬೇರೆ ಯಾವ ಪಕ್ಷವು ಕೊಟ್ಟಿಲ್ಲ ಅಂಬೇಡ್ಕರ್ ವಿಚಾರಗಳನ್ನು ಪ್ರತಿಹಂತದಲ್ಲಿ ಕಾಂಗ್ರೆಸ್ ಪಕ್ಷ ವಿರೋಧಿಸಿಕೊಂಡು ಬಂದರೆ ಬಿಜೆಪಿ ಪಕ್ಷ ಅವರ ಆಶಯಗಳನ್ನು ಜಾರಿ ಮಾಡುವ ನಿಟ್ಟಿನಲ್ಲಿ ದೇಶದಲ್ಲಿ ಕೆಲಸ ಮಾಡಿಕೊಂಡು ಬಂದಿದೆ ಜಿಲ್ಲೆಯಲ್ಲಿ ದಲಿತರ ಅಭಿವೃದ್ಧಿಗಾಗಿ ಮೋದಿ ನಾಯಕತ್ವದಲ್ಲಿ ದಲಿತಪರ ಯೋಜನೆಗಳನ್ನು ಕಳೆದ ಐದು ವರ್ಷಗಳಲ್ಲಿ ಜಾರಿ ಮಾಡಲಾಗಿದೆ ಮುಂದೆಯೂ ದಲಿತರು ಒಗ್ಗಟ್ಟಿನಿಂದ ಚುನಾವಣೆಯನ್ನು ಎದುರಿಸಿ ಕಾಂಗ್ರೆಸ್ ಪಕ್ಷಕ್ಕೆ ತಕ್ಕ ಉತ್ತರ ಕೊಡಬೇಕಾಗಿದೆ ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಎಂಎಲ್ಸಿ ಛಲವಾದಿ ನಾರಾಯಣಸ್ವಾಮಿ, ಮಾಜಿ ಶಾಸಕರಾದ ಬಿ.ಪಿ ವೆಂಕಟಮುನಿಯಪ್ಪ, ಸಂಪಂಗಿ, ಬಾಲರಾಜ್, ಜಿಪಂ ಮಾಜಿ ಸದಸ್ಯರಾದ ಬಿ.ವಿ ಮಹೇಶ್, ಅಶ್ವಿನಿ,ಎಸ್.ಬಿ ಮುನಿವೆಂಕಟಪ್ಪ ಎಸ್ಸಿ ಮೋರ್ಚಾ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಚಿ.ನಾ ರಾಮು, ರಾಜ್ಯ ಉಪಾಧ್ಯಕ್ಷೆ ಶ್ರೀದೇವಿ ರಾಜನ್, ರಾಜ್ಯ ಕಾರ್ಯದರ್ಶಿ ಆರ್.ಎನ್ ಹನುಮಂತಪ್ಪ, ಸೀಗೇಹಳ್ಳಿ ಸುಂದರ್ ಸೂಲೂರು ಅಂಜಿನಪ್ಪ, ಅಗ್ರಿ ನಾರಾಯಣಪ್ಪ ಮುಂತಾದವರು ಇದ್ದರು.
