Jan 26, 2024

ದಿನಾಂಕ : 26.01.2024

ಗಣರಾಜ್ಯೋತ್ಸವದ ಸಮಯದಲ್ಲಿ ರಾಷ್ಟ್ರಧ್ವಜಕ್ಕಾಗುವ ಅಪಮಾನವನ್ನು ತಡೆಗಟ್ಟಿ ರಾಷ್ಟ್ರೀಯ ಚಿಹ್ನೆಗಳ ಗೌರವ ಕಾಪಾಡಿ !

ಹಿಂದೂ ಜನಜಾಗೃತಿ ಸಮಿತಿಯಿಂದ ಬೆಂಗಳೂರಿನ ವಿವಿಧ ಶಾಲಾ-ಕಾಲೇಜುಗಳಲ್ಲಿ ಮನವಿ

ಬೆಂಗಳೂರು : ಗಣರಾಜ್ಯೋತ್ಸವದ ನಿಮಿತ್ತ ರಾಷ್ಟ್ರಧ್ವಜಕ್ಕಾಗುವ ಅಪಮಾನವನ್ನು ತಡೆಗಟ್ಟಿ ರಾಷ್ಟ್ರೀಯ ಚಿಹ್ನೆಗಳ ಗೌರವ ಕಾಪಾಡಬೇಕೆಂದು ಹಿಂದೂ ಜನಜಾಗೃತಿ ಸಮಿತಿ ವತಿಯಿಂದ ಬೆಂಗಳೂರಿನ ಹೆಗ್ಗನಹಳ್ಳಿಯ ಸರಕಾರಿ ಪ್ರೌಢಶಾಲೆ, ನಿಸರ್ಗ ಪ್ರೌಢಶಾಲೆ, ಬಿಷಪ್ ಆಂಗ್ಲ ಮಾಧ್ಯಮ ಶಾಲೆ, ನೂತನ ಪಬ್ಲಿಕ್ ಶಾಲೆ, ಕಿರಣ ಸಮೂಹ ಸಂಸ್ಥೆಯ ಶಾಲಾ-ಕಾಲೇಜುಗಳು, ಪೂರ್ಣಿಮಾ ಕನ್ನಡ ಮಾಧ್ಯಮ ಶಾಲೆ, ಯಲಹಂಕ ಮಾರುತಿ ನಗರದ ಎಂಇಎಸ್ ಕಾನ್ವೆಂಟ್ ಶಾಲೆ, ಅಸೆಂಟ್ ಪಬ್ಲಿಕ್ ಸ್ಕೂಲ್, ಬೂದಿಗೆರೆಯ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ, ಸಿದ್ದಗಂಗಾ ಕನ್ನಡ ಮಾಧ್ಯಮ ಪ್ರೌಢಶಾಲೆ ಸೇರಿದಂತೆ 15 ಕ್ಕೂ ಅಧಿಕ ಶಾಲೆಗಳಲ್ಲಿ ಮನವಿ ಸಲ್ಲಿಸಲಾಯಿತು.

‘ರಾಷ್ಟ್ರಧ್ವಜವು ರಾಷ್ಟ್ರದ ಆತ್ಮಾಭಿಮಾನವಾಗಿದೆ. 26 ಜನವರಿ ಹಾಗೂ 15 ಆಗಸ್ಟ್ ಈ ದಿನ ರಾಷ್ಟ್ರಧ್ವಜವನ್ನು ಅಭಿಮಾನದೊಂದಿಗೆ ಪ್ರದರ್ಶಿಸಲಾಗುತ್ತದೆ. ಆದರೆ ಅದೇ ದಿನ ಇದೇ ಕಾಗದ/ಪ್ಲಾಸ್ಟಿಕ್‌ನ ಚಿಕ್ಕ ಚಿಕ್ಕ ರಾಷ್ಟ್ರಧ್ವಜಗಳು ರಸ್ತೆಗಳ ಮೇಲೆ, ಕಸದ ತೊಟ್ಟಿ ಮತ್ತು ಚರಂಡಿಗಳಲ್ಲಿ ಹರಿದ ಅವಸ್ಥೆಯಲ್ಲಿ ಬಿದ್ದಿರುವುದು ಕಂಡು ಬರುತ್ತದೆ. ಪ್ಲಾಸ್ಟಿಕ್ ಧ್ವಜಗಳು ಕೂಡಲೇ ನಾಶವಾಗುವುದಿಲ್ಲ, ಆದುದರಿಂದ ಅನೇಕ ದಿನಗಳವರೆಗೆ ಈ ರಾಷ್ಟ್ರಧ್ವಜಗಳ ಅನಾದರವಾಗುವುದನ್ನು ನೋಡಬೇಕಾಗುತ್ತದೆ. ಅದಕ್ಕಾಗಿ ನಾವೆಲ್ಲರೂ ನಮ್ಮ ರಾಷ್ಟ್ರ ಧ್ವಜದ ಅಪಮಾನವನ್ನು ತಡೆದು ಮತ್ತು ರಾಷ್ಟ್ರ ಧ್ವಜದ ಗೌರವವನ್ನು ಕಾಪಾಡೋಣ‘ ಎಂದು ಹಿಂದೂ ಜನಜಾಗೃತಿ ಸಮಿತಿಯು ಕರೆ ನೀಡಿದೆ.

ಇಂತಿ,

ತಮ್ಮ ವಿಶ್ವಾಸಿ,
ಶ್ರೀ. ಮೋಹನ್ ಗೌಡ,
ರಾಜ್ಯ ವಕ್ತಾರರು, ಹಿಂದೂ ಜನಜಾಗೃತಿ ಸಮಿತಿ
ಸಂಪರ್ಕ : 7204082609

Leave a Reply

Your email address will not be published. Required fields are marked *