ಹೊಸಕೋಟೆ : ವಿಧಾನಸಭಾ ಕ್ಷೇತ್ರದ ಅನುಗೊಂಡನಹಳ್ಳಿ ಹೋಬಳಿಯ ಹಾರೋಹಳ್ಳಿ ಗ್ರಾಮದ ನಮ್ಮೂರ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ಆವರಣದಲ್ಲಿ‌ ಕಾಂಪೌಂಡ್ ನಿರ್ಮಾಣ ಮತ್ತು ಸಿ.ಸಿ.ಚರಂಡಿ ನಿರ್ಮಾಣ ಕಾಮಗಾರಿ ಭೂಮಿ ಪೂಜೆಗೆ ಚಿಕ್ಕಬಳ್ಳಾಪುರ ಕ್ಷೇತ್ರದ ಸಂಸದರಾದ ಬಿ.ಎನ್.ಬಚ್ಚೇಗೌಡರವರು ಮತ್ತು ಶಾಸಕರು, ರಾಜ್ಯ ಕಿಯೋನಿಕ್ಸ್ ಅಧ್ಯಕ್ಷರಾದ ಶರತ್ ಬಚ್ಚೇಗೌಡ ರವರು ಗಣ್ಯರೊಂದಿಗೆ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಕೆ ಕೃಷ್ಣಮೂರ್ತಿ, ಬಾಬು ರೆಡ್ಡಿ, ಕೃಷ್ಣಾರೆಡ್ಡಿ (ಕಿಟ್ಟಿ), ಪ್ರಕಾಶ್, ಎಚ್ ಕೆ ದೇವರಾಜ್, ರಮೇಶ್ ಎಚ್ ಕೆ ,ಗ್ರಾಮ ಪಂಚಾಯಿತಿ ಸದಸ್ಯರಾದ ಬಾಲಚಂದ್ರ ಎಚ್ ಕೆ (ಬಾಬು ಜೆಸಿಬಿ), ಮಮತಾ ಲೋಕೇಶ್, ಅನಿತಾ ಮಂಜುನಾಥ್ ಗ್ರಾಮಸ್ಥರು ಸೇರಿದಂತೆ ಹಲವಾರು ಗಣ್ಯರು ಹಾಜರಿದ್ದರು.

Leave a Reply

Your email address will not be published. Required fields are marked *