ಯಲಹಂಕ : ಯಲಹಂಕ ಗ್ರಾಮಾಂತರ ಮಂಡಲ ಬಿಜೆಪಿ ರೈತ ಮೋರ್ಚಾ ನೂತನ ಅಧ್ಯಕ್ಷರಾಗಿ ಯಲಹಂಕ ಕ್ಷೇತ್ರದ ಹುರುಳಿಚಿಕ್ಕನಹಳ್ಳಿ ಗ್ರಾಮದ ಎಚ್.ಸಿ.ರಾಜೇಶ್ ಆಯ್ಕೆಯಾಗಿದ್ದಾರೆ.

ರೈತ ಮೋರ್ಚಾ ನೂತನ ಅಧ್ಯಕ್ಷ ಎಚ್.ಸಿ.ರಾಜೇಶ್ ರವರನ್ನು ಶಾಸಕ ಎಸ್ ಆರ್ ವಿಶ್ವನಾಥ್ ಸಿಂಗನಾಯಕನಹಳ್ಳಿಯ ಗೃಹ ಕಚೇರಿಯಲ್ಲಿ ಗೌರವ ಸನ್ಮಾನ ನೀಡಿ ಶುಭ ಹಾರೈಸಿದರು.

ಇದೇ ವೇಳೆ ರೈತ ಮೋರ್ಚಾ ನೂತನ ಅಧ್ಯಕ್ಷ ಎಚ್ ಸಿ ರಾಜೇಶ್  ಮಾತನಾಡಿ ‘ಕಳೆದ ಎರಡು ವರ್ಷಗಳಿಂದ ಯಲಹಂಕ ಕ್ಷೇತ್ರ ವ್ಯಾಪ್ತಿಯಲ್ಲಿ ಬಿಜೆಪಿ ಪಕ್ಷದ ನಿಷ್ಠಾವಂತ ಕಾರ್ಯಕರ್ತನಾಗಿ ನಾನು ಸೇವೆ ಸಲ್ಲಿಸಿದ್ದು, ನನ್ನ ಸೇವೆಯನ್ನು ಗುರುತಿಸಿ ಶಾಸಕ ಎಸ್ ಆರ್ ವಿಶ್ವನಾಥ್ ರವರು ಯಲಹಂಕ ಗ್ರಾಮಾಂತರ ಮಂಡಲ ಬಿಜೆಪಿ ರೈತ ಮೋರ್ಚಾ ಅಧ್ಯಕ್ಷ ಸ್ಥಾನದ ಜವಾಬ್ದಾರಿ ನೀಡಿದ್ದಾರೆ. ಅವರ ಸಲಹೆ, ಮಾರ್ಗದರ್ಶದ ಮೇರೆಗೆ ಯಲಹಂಕ ಕ್ಷೇತ್ರ ವ್ಯಾಪ್ತಿಯಲ್ಲಿ ಬಿಜೆಪಿ ಪಕ್ಷದ ಬಲವರ್ಧನೆಗೆ ಪ್ರಾಮಾಣಿಕವಾಗಿ ಶ್ರಮಿಸುತ್ತೇನೆ, ಜತೆಗೆ ರೈತರ ಸಮಸ್ಯೆಗಳನ್ನು ಪರಿಹರಿಸುವ ನಿಟ್ಟಿನಲ್ಲಿ ನಿಷ್ಠೆಯಿಂದ ಕಾರ್ಯ ನಿರ್ವಹಿಸುತ್ತೇನೆ. ನನಗೆ ರೈತ ಮೋರ್ಚಾ ಅಧ್ಯಕ್ಷ ಸ್ಥಾನದ ಈ ಜವಾಬ್ದಾರಿ ದೊರೆಯುವಲ್ಲಿ, ಕ್ಷೇತ್ರದ ಹಿರಿಯ ಬಿಜೆಪಿ ಮುಖಂಡರಾದ ದಿಬ್ಬೂರು ಜಯಣ್ಣ, ಎಸ್ ಎನ್ ರಾಜಣ್ಣ,  ರಾಜ್ಯ ಬಿಜೆಪಿ ರೈತ ಮೋರ್ಚಾ ಕಾರ್ಯದರ್ಶಿ ಸತೀಶ್ ಕಡತನಮಲೆ, ಯಲಹಂಕ ಗ್ರಾಮಾಂತರ ಮಂಡಲ ಬಿಜೆಪಿ ಅಧ್ಯಕ್ಷರಾದ ಎಚ್ ಬಿ ಹನುಮಯ್ಯ ಅಗತ್ಯ ಸಹಕಾರ ನೀಡಿದ್ದು, ಅವರ ಸಹಕಾರಕ್ಕೆ ಈ ಸಂದರ್ಭದಲ್ಲಿ ಕೃತಜ್ಞತಾ ಪೂರ್ವಕ ಧನ್ಯವಾದ ತಿಳಿಸಲಿಚ್ಛಿಸುತ್ತೇನೆ ಎಂದರು.

ಇದೇ ಸಂದರ್ಭದಲ್ಲಿ ರೈತ ಮೋರ್ಚಾ ರಾಜ್ಯ ಕಾರ್ಯದರ್ಶಿ ಸತೀಶ್ ಕಡತನಮಲೆ, ಹಿರಿಯ ಬಿಜೆಪಿ ಮುಖಂಡರಾದ ದಿಬ್ಬೂರು ಜಯಣ್ಣ, ಎಸ್ ಎನ್ ರಾಜಣ್ಣ, ಯಲಹಂಕ ಗ್ರಾಮಾಂತರ ಮಂಡಲ ಬಿಜೆಪಿ ಅಧ್ಯಕ್ಷ ಎಚ್ ಬಿ ಹನುಮಯ್ಯ, ಜಿ.ಜೆ.ಮೂರ್ತಿ, ಪಿ.ಕೆ.ರಾಜಣ್ಣ, ವಿನಯ್ ಸೇರಿದಂತೆ ಇನ್ನಿತರರಿದ್ದರು.

Leave a Reply

Your email address will not be published. Required fields are marked *