




ಜಿಲ್ಲಾ, ತಾಲ್ಲೂಕು ಸ್ವೀಪ್(SVEEP)ಸಮಿತಿಯಿಂದ ಕಾರ್ಯಕ್ರಮ ಆಯೋಜನೆ :
ಯಲಹಂಕ : ಏಪ್ರಿಲ್ 26 ಮತ್ತು ಮೇ 7ರಂದು ನಡೆಯಲಿರುವ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಮತದಾರರಲ್ಲಿ ಮತದಾನದ ಮಹತ್ವ ಕುರಿತು ಜಾಗೃತಿ ಮೂಡಿಸುವ ಸಲುವಾಗಿ ಬೆಂಗಳೂರು ನಗರ ಜಿಲ್ಲಾಡಳಿತ, ಯಲಹಂಕ ತಾಲ್ಲೂಕು ಆಡಳಿತ, ಜಿಲ್ಲಾ ಸ್ವೀಪ್ ಸಮಿತಿ, ಯಲಹಂಕ ತಾಲ್ಲೂಕು ಸ್ವೀಪ್ ಸಮಿತಿ ಸಹಯೋಗದೊಂದಿಗೆ ಯಲಹಂಕ ಮಿನಿ ವಿಧಾನ ಸೌಧದ ಮುಂಭಾಗ ದಲ್ಲಿ ಆಯೋಜಿಸಿದ್ದ ಕಾರ್ಯಕ್ರಮ ದಲ್ಲಿ ಯಲಹಂಕ ತಾಲ್ಲೂಕು ಪಂಚಾಯಿತಿ ಮತ್ತು ಬೆಂ. ಉತ್ತರ ತಾಲ್ಲೂಕು ಪಂಚಾಯ್ತಿ ಸೇರಿದಂತೆ ಯಲಹಂಕ ತಾಲ್ಲೂಕು ಆಡಳಿತದ ವಿವಿಧ ಇಲಾಖೆಗಳ ಸಿಬ್ಬಂದಿಗಳು, ವಿವಿಧ ಗ್ರಾಮ ಪಂಚಾಯಿತಿಗಳ ಸಿಬ್ಬಂದಿಗಳು ಆಕರ್ಷಕ ರಂಗೋಲಿ ಬಿಡಿಸುವ ಮೂಲಕ ಮತದಾನದ ಮಹತ್ವ, ಜಾಗೃತಿ, ಸಾಕ್ಷರತೆ, ಮತದಾನದಲ್ಲಿ ಪಾಲ್ಗೊಳ್ಳುವಿಕೆ ಕುರಿತು ಅರಿವು ಮೂಡಿಸಿದರು.
ರಂಗೋಲಿಯಲ್ಲಿ ಮತದಾನ ನಮ್ಮ ಹಕ್ಕು, ವೋಟ್ ಫಾರ್ ಬೆಟರ್ ಇಂಡಿಯಾ, ದೇಶದ ಉಜ್ವಲ ಭವಿಷ್ಯಕ್ಕಾಗಿ ಮತ ಚಲಾಯಿಸಿ ಎಂಬ ಮತದಾನ ಜಾಗೃತಿಯ ಘೋಷ ವಾಕ್ಯಗಳನ್ನು ಬರೆಯುವ ಮೂಲಕ ಮತದಾನದ ಕುರಿತು ಅರಿವು ಮೂಡಿಸಲಾಯಿತು.
ಮತದಾನ ಜಾಗೃತಿ ರಂಗೋಲಿ ಸ್ಪರ್ಧೆಯಲ್ಲಿ ಪಾಲ್ಗೊಂಡಿದ್ದ ವಿವಿಧ ಇಲಾಖೆಯ ಸಿಬ್ಬಂದಿಗಳಿಗೆ ಬೆಂಗಳೂರು ಉತ್ತರ ಉಪ ವಿಭಾಧಿಕಾರಿ ಪ್ರಮೋದ್ ಪಾಟೀಲ್ ರವರು ಬಹುಮಾನ ಮತ್ತು ಪ್ರಮಾಣಪತ್ರ ವಿತರಿಸಿದರು.
ಇದೇ ಸಂದರ್ಭದಲ್ಲಿ ಯಲಹಂಕ ತಾ.ಪಂ. ಕಾರ್ಯ ನಿರ್ವಹಣಾ ಅಧಿಕಾರಿ ಅಪೂರ್ವ ಎ.ಕುಲಕರ್ಣಿ, ಬೆಂ. ಉತ್ತರ ತಾ.ಪಂ.ಕಾರ್ಯ ನಿರ್ವಹಣಾ ಅಧಿಕಾರಿ ರಮೇಶ್ ಡಿ.ಓ., ತಾಲ್ಲೂಕು ಸಮಾಜ ಕಲ್ಯಾಣಾಧಿಕಾರಿ ಹರೀಶ್ ಟಿ., ಯಲಹಂಕ ತಾ.ಪಂ.ಸಹಾಯಕ ನಿರ್ದೇಶಕ ಅಮರಯ್ಯ, ಜಿಲ್ಲಾ ಮಾಹಿತಿ ಶಿಕ್ಷಣ ಸಂವಹನ ಸಂಯೋಜಕ ನವೀನ್ ಬಾಬು ಎನ್, ತಾಲ್ಲೂಕು ಎಂಐಎಸ್ ಸಂಯೋಜಕ ಮಹಮದ್ ರಫಿ ಸೇರಿದಂತೆ ಯಲಹಂಕ ತಾಲ್ಲೂಕು ಆಡಳಿತದ ವಿವಿಧ ಇಲಾಖೆಗಳ ಸಿಬ್ಬಂದಿಗಳಿದ್ದರು.
ಸುದ್ದಿ ಹಾಗೂ ಜಾಗೃತಿಗಾಗಿ ಸಂಪರ್ಕಿಸಿ
R ಹನುಮಂತು 9845085793. 7349337989