
ಪೀಣ್ಯ ದಾಸರಹಳ್ಳಿ : ಕ್ಷೇತ್ರದ ಸಮೀಪದ ಲಗ್ಗೆರೆ ವಾರ್ಡಿನಲ್ಲಿ ಉಪಮುಖ್ಯ ಮಂತ್ರಿ ಡಿ.ಕೆ. ಶಿವಕುಮಾರ್ ಅವರ ಧರ್ಮಪತ್ನಿ ಉಷಾ ಶಿವಕುಮಾರ್ ಅವರು ಬೆಂಗಳೂರು ಗ್ರಾಮಾಂತರ ಲೋಕಸಭಾ ಅಭ್ಯರ್ಥಿ ಡಿಕೆ ಸುರೇಶ್ ರವರ ಪರ ಲಗ್ಗೆರೆ ವಾರ್ಡಿನ ಪ್ರಮುಖರ ಮನೆಗಳಿಗೆ ಭೇಟಿ ನೀಡಿ ಮತಯಾಚಿಸಿದರು.
ಈ ಸಂದರ್ಭದಲ್ಲಿ ರಾಜರಾಜೇಶ್ವರಿ ನಗರ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ನಾಯಕಿ ಕುಸುಮಾ ಹನುಮಂತರಾಯಪ್ಪ, ಶಾಸಕ ರಂಗನಾಥ್, ಮಾಜಿ ಪಾಲಿಕೆ ಸದಸ್ಯೆ ಹಾಗೂ ಶಿಕ್ಷಣ ಸ್ಥಾಯಿ ಸಮಿತಿ ಮಾಜಿ ಅಧ್ಯಕ್ಷೆ ಮಂಜುಳಾ ನಾರಾಯಣ ಸ್ವಾಮಿ, ಶಾಸಕ ರಂಗನಾಥ್ ಅವರ ಪತ್ನಿ ಡಾ. ಸುಮಾ ರಂಗನಾಥ್, ಮಾಜಿ ಪಾಲಿಕೆ ನಾಮನಿರ್ದೇಶನ ಸದಸ್ಯ ಸಿದ್ದೇಗೌಡ, ಕಾಂಗ್ರೆಸ್ ಪ್ರಭಾವಿ ಮುಖಂಡ ಲಗ್ಗೆರೆ ನಾರಾಯಣ ಸ್ವಾಮಿ, ಸೇರಿದಂತೆ ಕಾಂಗ್ರೆಸ್
ಮುಖಂಡರು ಮಹಿಳೆಯರು ಕಾರ್ಯಕರ್ತರು ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರ ಪತ್ನಿ ಉಷಾ ಶಿವಕುಮಾರ್ ಅವರಿಗೆ ಸಾಥ್ ನೀಡಿದರು.