ಬಿಜೆಪಿ,ಜೆಡಿಎಸ್ ಮೈತ್ರಿ ಮುಖಂಡರಿಂದ ರಾಜ್ಯದ ಮಹಿಳೆಯರಿಗೆ ಅವಮಾನ : ಕೃಷ್ಣಬೈರೇಗೌಡ ಆರೋಪ
ಬ್ಯಾಟರಾಯನಪುರ : ರಾಜ್ಯ ಕಾಂಗ್ರೆಸ್ ಸರ್ಕಾರ ನೀಡಿರುವ ಗೃಹಲಕ್ಷ್ಮಿ ಯೋಜನೆಯಿಂದ ರಾಜ್ಯದ ಮಹಿಳೆಯರು ದಾರಿತಪ್ಪು ತ್ತಿದ್ದಾರೆ ಎಂಬ ಕ್ಷುಲ್ಲಕ ಹೇಳಿಕೆ ನೀಡುವ ಮೂಲಕ ಜೆಡಿಎಸ್ ಮತ್ತು ಬಿಜೆಪಿ ಮೈತ್ರಿಕೂಟದ ಮುಖಂಡರು ರಾಜ್ಯದ ಮಹಿಳೆಯರಿಗೆ ಅವಮಾನ ಮಾಡಿದ್ದಾರೆ ಎಂದು ಸಚಿವ ಕೃಷ್ಣಬೈರೇಗೌಡ ಆರೋಪಿಸಿದರು.

ಡಾ.ಬಿ.ಆರ್.ಅಂಬೇಡ್ಕರ್ ಸಮುದಾಯ ಭವನ ಟ್ರಸ್ಟ್, ಜಕ್ಕೂರು ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿ ಮತ್ತು ಕರ್ನಾಟಕ ಜಾತ್ಯಾತೀತ ಸಮಾಜವಾದಿ ಸಂಘಟನೆ ಇವರ ಸಹಯೋಗದೊಂದಿಗೆ ಜಕ್ಕೂರಿನಲ್ಲಿ ಭಾನುವಾರ ಆಯೋಜಿಸಿದ್ದ ಡಾ.ಬಿ.ಆರ್.ಅಂಬೇಡ್ಕರ್ ರವರ 133ನೇ ಜಯಂತಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು ‘ರಾಜ್ಯದ ಬಡ ಮಹಿಳೆಯರು ಸ್ವಾವಲಂಬನೆ ಯಿಂದ ಬದುಕಲೆಂಬ ಮಹತ್ವದ ಉದ್ದೇಶದಿಂದ ರಾಜ್ಯ ಕಾಂಗ್ರೆಸ್ ಸರ್ಕಾರ ಚುನಾವಣಾ ಪ್ರಣಾಳಿಕೆ ಯಲ್ಲಿ ನೀಡಿದ್ದ ಐದೂ ಗ್ಯಾರೆಂಟಿಗಳನ್ನು ಈಡೇರಿಸಿದೆ, ಇದನ್ನು ಸಹಿಸದ ಜೆಡಿಎಸ್, ಬಿಜೆಪಿ ಮೈತ್ರಿ ಮುಖಂಡರು ಬಡ ಮಹಿಳೆ ಯರಿಗೆ ನೀಡಿರುವ ಗ್ಯಾರೆಂಟಿ ಗಳಿಂದ ಮಹಿಳೆಯರು ದಾರಿ ತಪ್ಪುತ್ತಿದ್ದಾರೆ ಎಂದು ಮಹಿಳೆಯರ ಬಗ್ಗೆ ಲಘುವಾಗಿ ಮಾತನಾಡಿ ರಾಜ್ಯದ ಬಡ ಮಹಿಳೆಯರ ಕೆಂಗಣ್ಣಿಗೆ ಗುರಿಯಾ ಗಿದ್ದು,ಲೋಕಸಭಾ ಚುನಾವಣೆ ಯಲ್ಲಿ ಇವರಿಗೆ ತಕ್ಕಪಾಠ ಕಲಿಸಲಿದ್ದಾರೆ ಎಂದರು.

ಡಾ.ಬಿ.ಆರ್.ಅಂಬೇಡ್ಕರ್ ಸಮುದಾಯ ಭವನ ಟ್ರಸ್ಟಿನ ಅಧ್ಯಕ್ಷ, ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷ ಜಕ್ಕೂರು ರವಿಕುಮಾರ್ ಮಾತನಾಡಿ ‘ಬಾಲ್ಯದಲ್ಲಿ ಅಂಬೇಡ್ಕರ್ ರವರ ತತ್ವಸಿದ್ಧಾಂತ, ವಿಚಾರಧಾರೆ ಗಳನ್ನು ತಿಳಿದುಕೊಂಡು ಅವುಗಳಿಂದ ಆಕರ್ಷಿತqನಾಗಿ ಸಾಮಾಜಿಕ ಹೋರಾಟ, ದಲಿತ ಪರ ಹೋರಾಟಕ್ಕೆ ಧುಮುಕಿದೆ, ದಲಿತ ಸಂಘರ್ಷ ಸಮಿತಿಯ ರಾಜ್ಯ ಸಂಯೋಜಕ ರಾದ ಪ್ರೊ.ವಿ.ನಾಗರಾಜ್ ರವರ ಮಾರ್ಗದರ್ಶನದಲ್ಲಿ ಹಲವು  ಹೋರಾಟಗಳನ್ನು ರೂಪಿಸಿ, ಬಡವರು, ದಲಿತರು, ತುಳಿತಕ್ಕೊಳ ಗಾದ ತಳ ಸಮುದಾಯಗಳಿಗೆ ಸಾಮಾಜಿಕ ನ್ಯಾಯ ಕೊಡಿಸಲು ಹೋರಾಟ ಮಾಡಿದ್ದು, ಅಂದು ಕೇವಲ 12 ರು.ಗಳಲ್ಲಿ ಅಂಬೇಡ್ಕರ್ ಜಯಂತಿ ಆಚರಿಸಿದ್ದೆ, ಪರಿಶ್ರಮದ ದುಡಿಮೆಯಿಂದ ಇಂದು ಬೃಹತ್ ವೇದಿಕೆಯಲ್ಲಿ ಸಹಸ್ರಾರು ಜನರೊಂದಿಗೆ ಅಂಬೇಡ್ಕರ್ ರವರ 133ನೇ ಜಯಂತಿ ಆಚರಿಸುತ್ತಿರು ವುದು ಸಂತೋಷ ಉಂಟು ಮಾಡಿದೆ ಎಂದು ತಮ್ಮ ಹೋರಾಟದ ಹಾದಿಯ ಬಗ್ಗೆ ಸ್ಮರಿಸಿಕೊಂಡರು.

ಕಾರ್ಯಕ್ರಮದಲ್ಲಿ ಸಾದಕ ಮಹಿಳೆಯರಿಗೆ ಸನ್ಮಾನಿಸಿ ಗೌರವಿಸಲಾಯಿತು. ಇದೇ ಸಂದರ್ಭದಲ್ಲಿ ದಲಿತ ಸಂಘರ್ಷ ಸಮಿತಿಯ ರಾಜ್ಯ ಸಂಯೋಜಕ ಪ್ರೊ.ವಿ.ನಾಗರಾಜ್, ಕಾಂಗ್ರೆಸ್ ಮುಖಂಡರಾದ ಎಂ.ಹನುಮಂತೇ ಗೌಡ, ಟಿ.ಚಂದ್ರು,ಜಯಗೋಪಾಲ್ ಗೌಡ, ಶ್ರೀನಿವಾಸಯ್ಯ ಮಾರುತಿ ಎಸ್. ತಿರುಮಳಪ್ಪ, ಜಕ್ಕೂರು ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿಯ ಉಪಾಧ್ಯಕ್ಷ ನಾಗರಾಜಪ್ಪ, ಹೈಕೋರ್ಟ್ ಹಿರಿಯ ವಕೀಲರಾದ ಎಸ್.ವಿ. ರಾಮಚಂದ್ರಪ್ಪ, ಜಕ್ಕೂರು ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿಯ ನಿರ್ದೇಶಕರು, ಅಂಬೇಡ್ಕರ್ ಸಮುದಾಯ ಭವನ ಟ್ರಸ್ಟಿನ ಟ್ರಸ್ಟಿಗಳು ಸೇರಿದಂತೆ ಇನ್ನಿತರ ಗಣ್ಯರಿದ್ದರು.

ಸುದ್ದಿ ಹಾಗೂ ಜಾಹೀರಾತುಗಾಗಿ ಸಂಪರ್ಕಿಸಿ

ಆರ್ ಹನುಮಂತ 984508573

,7349337989

Leave a Reply

Your email address will not be published. Required fields are marked *