ಯಲಹಂಕ : ಮತದಾನ ಪ್ರತಿ ವ್ಯಕ್ತಿಗೆ ನಮ್ಮ ಸಂವಿಧಾನ ನೀಡಿರುವ ಅಮೂಲ್ಯವಾದ ಹಕ್ಕು, ಅದನ್ನು ಯಾವುದೇ ಆಮಿಷಗಳಿಗೆ ಒಳಗಾಗದೆ ನಿರ್ಭೀತಿಯಿಂದ ಚಲಾಯಿಸಬೇಕೆಂದು ಬೆಂಗಳೂರು ನಗರ ಜಿಲ್ಲಾ ಪಂಚಾಯ್ತಿ ಮುಖ್ಯ ಕಾರ್ಯ ನಿರ್ವಾಹಕ ಅಧಿಕಾರಿ ಕಾಂತರಾಜು ಪಿ.ಎಸ್ ಮತದಾರರಿಗೆ ಕಿವಿ ಮಾತು ಹೇಳಿದರು.

ಬೆಂಗಳೂರು ಜಿಲ್ಲಾ ಹಾಗೂ ಉತ್ತರ ತಾಲ್ಲೂಕು ಸ್ವೀಪ್ ಸಮಿತಿ ಸಹಭಾಗಿತ್ವದಲ್ಲಿ ಯಲಹಂಕ ಕ್ಷೇತ್ರ ಮತ್ತು ಬೆಂಗಳೂರು ಉತ್ತರ ತಾಲ್ಲೂಕಿನ ವಿವಿಧ ಗ್ರಾಮ ಪಂಚಾಯ್ತಿಗಳ ವ್ಯಾಪ್ತಿಯಲ್ಲಿ ಬುಧವಾರ ಆಯೋಜಿಸಿದ್ದ ಮತದಾನ ಜಾಗೃತಿ ಬೈಕ್ ರ್ಯಾಲಿಗೆ  ಚಾಲನೆ ನೀಡಿ ಅವರು‌ ಮಾತನಾಡಿ ‘ಏಪ್ರಿಲ್ -26 ರಂದು ಲೋಕಸಭಾ ಚುನಾವಣೆ ನಡೆಯಲಿದ್ದು, 18 ವರ್ಷ ಮೇಲ್ಪಟ್ಟ ಪ್ರತಿಯೊಬ್ಬರೂ ಕಡ್ಡಾಯವಾಗಿ ಮತದಾನ ಮಾಡಿ, ಮತದಾನಕ್ಕೆ ಸಂಬಂಧಿಸಿದಂತೆ ಬೂತ್ ಲೆವೆಲ್ ಅಧಿಕಾರಿಗಳು ಪ್ರತಿ ಮನೆಗೆ ಭೇಟಿ ನೀಡಿ ಸ್ಟಿಕ್ಕರ್ ಅಂಟಿಸಿ, ವೋಟರ್ ಮಾರ್ಗ ಸೂಚಿಗಳನ್ನು ನೀಡುತ್ತಿದ್ದಾರೆ. ಅವುಗಳನ್ನು ಓದಿಕೊಂಡು ಯಾವುದೇ ಗೊಂದಲಗಳಿಲ್ಲದೇ, ನಿಮ್ಮಲ್ಲಿರುವ ಯಾವುದಾದ ರೊಂದು ಅಧಿಕೃತ ಗುರುತಿನ ಕಾರ್ಡ್ ತೋರಿಸಿ ಮತದಾನ ಮಾಡಿ ಎಂದರು. 

ನಂತರ ರ್ಯಾಲಿಯಲ್ಲಿ ಪಾಲ್ಗೊಂಡಿದ್ದ ಎಲ್ಲರಿಗೂ ಪ್ರತಿಜ್ಞಾ ವಿಧಿ ಭೋದಿಸಿದರು.

ಇದೇ ಸಂದರ್ಭದಲ್ಲಿ ಉಪ ಕಾರ್ಯದರ್ಶಿ ಅನಿತಾ, ಮುಖ್ಯ ಯೋಜನಾಧಿಕಾರಿ ವಿನುತಾ ರಾಣಿ, ಮುಖ್ಯ ಲೆಕ್ಕಾಧಿಕಾರಿ ಲಲಿತಾ ನಾಯಕ್, ಬೆಂಗಳೂರು ಉತ್ತರ ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ರಮೇಶ್ ಡಿ.ಓ,  ಸಹಾಯಕ ನಿರ್ದೇಶಕ ಅಮರಯ್ಯ, ತಾಲ್ಲೂಕು ಯೋಜನಾ ಅಧಿಕಾರಿ ವೆಂಕಟಾ ಚಲಪತಿ, ಜಿಲ್ಲಾ ಐಇಸಿ ಸಂಯೋಜಕ ನವೀನ್ ಬಾಬು ಎನ್. ಸೇರಿದಂತೆ ಬೆಂಗಳೂರು ಉತ್ತರ ತಾಲ್ಲೂಕು ವ್ಯಾಪ್ತಿಯ ಎಲ್ಲಾ ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳು, ಆಡಳಿತ ಸಿಬ್ಬಂದಿ ವರ್ಗದವರು, ಮನರೆಗಾ ಕೂಲಿ ಕಾರ್ಮಿಕರಿದ್ದರು.

11 ಗ್ರಾಮ ಪಂಚಾಯ್ತಿ ವ್ಯಾಪ್ತಿಯಲ್ಲಿ ಸಾಗಿದ ಬೃಹತ್ ಬೈಕ್ ರ್ಯಾಲಿ :

ಮತದಾನದ ಮಹತ್ವ ಕುರಿತು ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಆಯೋಜಿಸಿದ್ದ ಈ ಬೈಕ್ ರ್ಯಾಲಿಯಲ್ಲಿ ನೂರಾರು ನಾಗರೀಕರು, ಗ್ರಾಮ ಪಂಚಾಯಿತಿ ಸಿಬ್ಬಂದಿಗಳು ಪಾಲ್ಗೊಂಡಿದ್ದು ಬೆಂಗಳೂರು ಉತ್ತರ ತಾಲ್ಲೂಕಿನ 11 ಗ್ರಾಮ ಪಂಚಾಯ್ತಿಗಳ ವ್ಯಾಪ್ತಿಯಲ್ಲಿ ಸಾಗಿ, ಮತದಾನದ ಮಹತ್ವ ಕುರಿತು ಜಾಗೃತಿ ಮೂಡಿಸಿದರು.

ಚಿತ್ರಸುದ್ದಿ :

ಬೆಂಗಳೂರು ಜಿಲ್ಲಾ ಹಾಗೂ ಉತ್ತರ ತಾಲ್ಲೂಕು ಸ್ವೀಪ್ ಸಮಿತಿ ಸಹಭಾಗಿತ್ವದಲ್ಲಿ ಯಲಹಂಕ ಕ್ಷೇತ್ರ ಮತ್ತು ಬೆಂಗಳೂರು ಉತ್ತರ ತಾಲ್ಲೂಕಿನ ವಿವಿಧ ಗ್ರಾಮ ಪಂಚಾಯ್ತಿಗಳ ವ್ಯಾಪ್ತಿಯಲ್ಲಿ ಬುಧವಾರ ಆಯೋಜಿಸಿದ್ದ ಮತದಾನ ಜಾಗೃತಿ ಬೈಕ್ ರ್ಯಾಲಿಗೆ ಬೆಂ.ನಗರ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯ ನಿರ್ವಾಹಕ ಅಧಿಕಾರಿ(ಸಿಇಓ) ಕಾಂತರಾಜು ಪಿ.ಎಸ್. ಚಾಲನೆ ನೀಡಿದರು. ಇದೇ ಸಂದರ್ಭದಲ್ಲಿ ಉಪ ಕಾರ್ಯದರ್ಶಿ ಅನಿತಾ, ಮುಖ್ಯ ಯೋಜನಾಧಿಕಾರಿ ವಿನುತಾ ರಾಣಿ, ಮುಖ್ಯ ಲೆಕ್ಕಾಧಿಕಾರಿ ಲಲಿತಾ ನಾಯಕ್, ಬೆಂಗಳೂರು ಉತ್ತರ ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ರಮೇಶ್ ಡಿ.ಓ,  ಸಹಾಯಕ ನಿರ್ದೇಶಕ ಅಮರಯ್ಯ, ತಾಲ್ಲೂಕು ಯೋಜನಾ ಅಧಿಕಾರಿ ವೆಂಕಟಾ ಚಲಪತಿ, ಜಿಲ್ಲಾ ಐಇಸಿ ಸಂಯೋಜಕ ನವೀನ್ ಬಾಬು ಎನ್. ಸೇರಿದಂತೆ ಬೆಂಗಳೂರು ಉತ್ತರ ತಾಲ್ಲೂಕು ವ್ಯಾಪ್ತಿಯ ಎಲ್ಲಾ ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳು, ಆಡಳಿತ ಸಿಬ್ಬಂದಿ ವರ್ಗದವರು, ಮನರೆಗಾ ಕೂಲಿ ಕಾರ್ಮಿಕರಿದ್ದರು.

ಸುದ್ದಿ ಹಾಗೂ ಜಾದೂತವಾಗಿ ಸಂಪರ್ಕಿಸಿ 

ಆರ್ ಹನುಮಂತು 9840 85 793

73 49 33 79 89

Leave a Reply

Your email address will not be published. Required fields are marked *