ನೂತನ ಅಧ್ಯಕ್ಷರಾಗಿ ಸುಮಂಗಳ ರಂಗನಾಥ್ ಮತ್ತು ಉಪಾಧ್ಯಕ್ಷರಾಗಿ ಗಾಯಿತ್ರಮ್ಮ ಆಯ್ಕೆ.
ಕೊರಟಗೆರೆ:- ಜಿಲ್ಲಾಧಿಕಾರಿಗಳ ಆದೇಶದಂತೆ ತಾಲ್ಲೂಕಿನ ಗ್ರಾಮ ಪಂಚಾಯಿತಿಯ ಮೂರನೇ ಸುತ್ತಿನ ಅಧ್ಯಕ್ಷ ಮತ್ತು ಉಪಾಧ್ಯಕ್ಷ ಸ್ಥಾನಕ್ಕೆ ಚುನಾವಣೆಯು ಅಧಿಕಾರಿಗಳ ನೇತೃತ್ವದಲ್ಲಿ ಶಾಂತಿಯುತವಾಗಿ ನಡೆದಿದೆ.
೮ ಗ್ರಾ.ಪಂಗಳಲ್ಲಿ ಕೆಲ ಕಡೆ ಚುನಾವಣೆ ಮುಖಾಂತರ ಅಧ್ಯಕ್ಷ ಮತ್ತು ಉಪಾಧ್ಯಕ್ಷರನ್ನು ಆಯ್ಕೆ ಮಾಡಿದ್ದು, ಇನ್ನೂ ಕೆಲವು ಗ್ರಾ.ಪಂಚಾಯಿತಿಗಳಲ್ಲಿ ಸದಸ್ಯರ ಒಮ್ಮತದಿಂದ ಆಯ್ಕೆ ಮಾಡಲಾಯಿತು.
೮ ಗ್ರಾಪಂಗಳಲ್ಲಿ ಒಂದಾದ ಗ್ರಾಮ ತೀತಾ ಗ್ರಾಮ ಪಂಚಾಯಿತಿ ಕಚೇರಿಯಲ್ಲಿ ನಡೆದ ಚುನಾವಣೆ ಪ್ರಕ್ರಿಯೆಯನ್ನು ಚುನಾವಣಾಧಿಕಾರಿಯಾಗಿ ತಾಲೂಕು ತೋಟಗಾರಿಕೆ ಇಲಾಖೆ ನಾಗರಾಜು ನಡೆಸಿಕೊಟ್ಟರು. ಎಸ್ಟಿ ಮೀಸಲಿನ ಅಧ್ಯಕ್ಷ ಸ್ಥಾನಕ್ಕೆ ಸುಮಂಗಳ ರಂಗನಾಥ್ ಹಾಗೂ ಒಬಿಸಿ ಎ ಕ್ಷೇತ್ರದ ಉಪಾಧ್ಯಕ್ಷ ಸ್ಥಾನಕ್ಕೆ ಗಾಯಿತ್ರಮ್ಮ ಚಂದ್ರಶೇಖರ್ ಆಯ್ಕೆಯಾದರು.
ನೂತನ ಅಧ್ಯಕ್ಷರಾಗಿ ಸುಮಂಗಳ ರಂಗನಾಥ್ ಮಾತನಾಡಿ. ಎರಡನೇ ಅವಧಿಯಲ್ಲಿ ತೀತಾ ಗ್ರಾಮ ಪಂಚಾಯಿತಿ ಸದಸ್ಯರ ಒಮ್ಮತದಿಂದ ನನ್ನನ್ನು ಅಧ್ಯಕ್ಷರನ್ನಾಗಿ ಮಾಡಿದ್ದು, ಅವರೆಲ್ಲರಿಗೂ ಚಿರಋಣಿಯಾಗಿರುತ್ತೇನೆ. ಗ್ರಾಮ ಪಂಚಾಯಿತಿ ವ್ಯಾಪ್ತಿಯ ಎಲ್ಲಾ ಗ್ರಾಮಗಳಿಗೆ ಅವಶ್ಯಕತೆ ಇರುವ ಮೂಲಭೂತ ಸೌಕರ್ಯವನ್ನು ಒದಗಿಸುವುದರ ಜೊತೆಗೆ ರಸ್ತೆ, ಚರಂಡಿ, ಕುಡಿಯುವ ನೀರು, ಕಸ ವಿಲೇವಾರಿಗೆ ಮೊದಲ ಆದ್ಯತೆ ನೀಡುವುದರ ಜೊತೆಗೆ ತನ್ನ ಜವಾಬ್ದಾರಿ ಸ್ಥಾನವನ್ನು ಪ್ರಾಮಾಣಿಕವಾಗಿ ನಿರ್ವಹಿಸುತ್ತೇನೆ ಎಂದರು.
ನೂತನ ಉಪಾಧ್ಯಕ್ಷೇ ಗಾಯಿತ್ರಮ್ಮ ಚಂದ್ರಶೇಖರ್ ಮಾತನಾಡಿ, ಎಲ್ಲಾ ಸದಸ್ಯರ ಒಮ್ಮತದಲ್ಲಿ ಅಭಿವೃದ್ಧಿ ಕೆಲಸ ಮಾಡುತ್ತೇನೆ, ಗ್ರಾಮೀಣ ಭಾಗದ ಜನರಿಗೆ ಪ್ರಮುಖವಾಗಿ ಮೂಲಭೂತ ಸೌಕರ್ಯದೊಂದಿಗೆ ಅನುಕೂಲವಾಗಿರುವಂತೆ ಮಾಡುತ್ತೇನೆ ಎಂದು ಹೇಳಿದರು.
ಈ ಸಂದರ್ಭದಲ್ಲಿ ಗ್ರಾಮ ಪಂಚಾಯ್ತಿ ಹರೀಶ್ ಟಿಎನ್, ಶೈಲಜಾ ಓಬಳೇಶ್,ಉಮಾ ಸಿದ್ದರಾಜು,ನಳಿನ ಸತೀಶ್,
ರಮೇಶ್,ಕಮಲಮ್ಮ, ನಟರಾಜು, ನರಸಿಂಹರಾಜು,ಗಂಗಲಕ್ಷ್ಮಮ್ಮ, ನಾಗರತ್ನಮ್ಮಸುಭಾಷ್, ಶ್ರೀನಿವಾಸ್ ಸೇರಿದಂತೆ ಗ್ರಾಮಸ್ಥರು ಹಾಜರಿದ್ದರು.
ಮೂರನೇ ದಿನದ ೮ ಗ್ರಾಪಂಗಳ ಅಧ್ಯಕ್ಷ ಮತ್ತು ಉಪಾಧ್ಯಕ್ಷರ ಚುನಾವಣೆ ಯಶಸ್ವಿ…
ನೂತನ ಅಧ್ಯಕ್ಷರಾಗಿ ಸುಮಂಗಳ ರಂಗನಾಥ್ ಮತ್ತು ಉಪಾಧ್ಯಕ್ಷರಾಗಿ ಗಾಯಿತ್ರಮ್ಮ ಆಯ್ಕೆ.
ಕೊರಟಗೆರೆ:- ಜಿಲ್ಲಾಧಿಕಾರಿಗಳ ಆದೇಶದಂತೆ ತಾಲ್ಲೂಕಿನ ಗ್ರಾಮ ಪಂಚಾಯಿತಿಯ ಮೂರನೇ ಸುತ್ತಿನ ಅಧ್ಯಕ್ಷ ಮತ್ತು ಉಪಾಧ್ಯಕ್ಷ ಸ್ಥಾನಕ್ಕೆ ಚುನಾವಣೆಯು ಅಧಿಕಾರಿಗಳ ನೇತೃತ್ವದಲ್ಲಿ ಶಾಂತಿಯುತವಾಗಿ ನಡೆದಿದೆ.
೮ ಗ್ರಾ.ಪಂಗಳಲ್ಲಿ ಕೆಲ ಕಡೆ ಚುನಾವಣೆ ಮುಖಾಂತರ ಅಧ್ಯಕ್ಷ ಮತ್ತು ಉಪಾಧ್ಯಕ್ಷರನ್ನು ಆಯ್ಕೆ ಮಾಡಿದ್ದು, ಇನ್ನೂ ಕೆಲವು ಗ್ರಾ.ಪಂಚಾಯಿತಿಗಳಲ್ಲಿ ಸದಸ್ಯರ ಒಮ್ಮತದಿಂದ ಆಯ್ಕೆ ಮಾಡಲಾಯಿತು.
೮ ಗ್ರಾಪಂಗಳಲ್ಲಿ ಒಂದಾದ ಗ್ರಾಮ ತೀತಾ ಗ್ರಾಮ ಪಂಚಾಯಿತಿ ಕಚೇರಿಯಲ್ಲಿ ನಡೆದ ಚುನಾವಣೆ ಪ್ರಕ್ರಿಯೆಯನ್ನು ಚುನಾವಣಾಧಿಕಾರಿಯಾಗಿ ತಾಲೂಕು ತೋಟಗಾರಿಕೆ ಇಲಾಖೆ ನಾಗರಾಜು ನಡೆಸಿಕೊಟ್ಟರು. ಎಸ್ಟಿ ಮೀಸಲಿನ ಅಧ್ಯಕ್ಷ ಸ್ಥಾನಕ್ಕೆ ಸುಮಂಗಳ ರಂಗನಾಥ್ ಹಾಗೂ ಒಬಿಸಿ ಎ ಕ್ಷೇತ್ರದ ಉಪಾಧ್ಯಕ್ಷ ಸ್ಥಾನಕ್ಕೆ ಗಾಯಿತ್ರಮ್ಮ ಚಂದ್ರಶೇಖರ್ ಆಯ್ಕೆಯಾದರು.
ನೂತನ ಅಧ್ಯಕ್ಷರಾಗಿ ಸುಮಂಗಳ ರಂಗನಾಥ್ ಮಾತನಾಡಿ. ಎರಡನೇ ಅವಧಿಯಲ್ಲಿ ತೀತಾ ಗ್ರಾಮ ಪಂಚಾಯಿತಿ ಸದಸ್ಯರ ಒಮ್ಮತದಿಂದ ನನ್ನನ್ನು ಅಧ್ಯಕ್ಷರನ್ನಾಗಿ ಮಾಡಿದ್ದು, ಅವರೆಲ್ಲರಿಗೂ ಚಿರಋಣಿಯಾಗಿರುತ್ತೇನೆ. ಗ್ರಾಮ ಪಂಚಾಯಿತಿ ವ್ಯಾಪ್ತಿಯ ಎಲ್ಲಾ ಗ್ರಾಮಗಳಿಗೆ ಅವಶ್ಯಕತೆ ಇರುವ ಮೂಲಭೂತ ಸೌಕರ್ಯವನ್ನು ಒದಗಿಸುವುದರ ಜೊತೆಗೆ ರಸ್ತೆ, ಚರಂಡಿ, ಕುಡಿಯುವ ನೀರು, ಕಸ ವಿಲೇವಾರಿಗೆ ಮೊದಲ ಆದ್ಯತೆ ನೀಡುವುದರ ಜೊತೆಗೆ ತನ್ನ ಜವಾಬ್ದಾರಿ ಸ್ಥಾನವನ್ನು ಪ್ರಾಮಾಣಿಕವಾಗಿ ನಿರ್ವಹಿಸುತ್ತೇನೆ ಎಂದರು.
ನೂತನ ಉಪಾಧ್ಯಕ್ಷೇ ಗಾಯಿತ್ರಮ್ಮ ಚಂದ್ರಶೇಖರ್ ಮಾತನಾಡಿ, ಎಲ್ಲಾ ಸದಸ್ಯರ ಒಮ್ಮತದಲ್ಲಿ ಅಭಿವೃದ್ಧಿ ಕೆಲಸ ಮಾಡುತ್ತೇನೆ, ಗ್ರಾಮೀಣ ಭಾಗದ ಜನರಿಗೆ ಪ್ರಮುಖವಾಗಿ ಮೂಲಭೂತ ಸೌಕರ್ಯದೊಂದಿಗೆ ಅನುಕೂಲವಾಗಿರುವಂತೆ ಮಾಡುತ್ತೇನೆ ಎಂದು ಹೇಳಿದರು.
ಈ ಸಂದರ್ಭದಲ್ಲಿ ಗ್ರಾಮ ಪಂಚಾಯ್ತಿ ಹರೀಶ್ ಟಿಎನ್, ಶೈಲಜಾ ಓಬಳೇಶ್,ಉಮಾ ಸಿದ್ದರಾಜು,ನಳಿನ ಸತೀಶ್,
ರಮೇಶ್,ಕಮಲಮ್ಮ, ನಟರಾಜು, ನರಸಿಂಹರಾಜು,ಗಂಗಲಕ್ಷ್ಮಮ್ಮ, ನಾಗರತ್ನಮ್ಮಸುಭಾಷ್, ಶ್ರೀನಿವಾಸ್ ಸೇರಿದಂತೆ ಗ್ರಾಮಸ್ಥರು ಹಾಜರಿದ್ದರು.