ಯಲಹಂಕ : ಮತದಾನ ಪ್ರಜಾಪ್ರಭುತ್ವದ ಬಹುದೊಡ್ಡ ಹಬ್ಬ, ಎಲ್ಲರೂ ಪಾಲ್ಗೊಳ್ಳುವ ಮೂಲಕ ಯಶಸ್ವಿಗೊಳಿಸಬೇಕೆಂದು ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಮತದಾರರಿಗೆ ಕಿವಿಮಾತು ಹೇಳಿದರು.

ಬೆಂ. ಜಿಲ್ಲಾ, ಯಲಹಂಕ ತಾಲ್ಲೂಕು ಮತ್ತು ಬೆ.ಉತ್ತರ ತಾಲ್ಲೂಕು ಸ್ವೀಪ್ ಸಮಿತಿ, ಶೇಷಾದ್ರಿಪುರಂ ಪ್ರಥಮದರ್ಜೆ ಕಾಲೇಜು ಸಹಭಾಗಿತ್ವದಲ್ಲಿ ಸೋಮವಾರ ಬೆಳಿಗ್ಗೆ ಯಲಹಂಕ ಹೊಯ್ಸಳ ಕ್ರೀಡಾಂಗಣದಲ್ಲಿ ಏರ್ಪಡಿಸಿದ್ದ ‘ಮತದಾನ ಜಾಗೃತಿ ಜಾಥಾ’ಕ್ಕೆ ಚಾಲನೆ ನೀಡಿ ಮಾತನಾಡಿದ ಅವರು ‘ಮತದಾನ ಬಹಳ ಮಹತ್ವದ ಪ್ರಕ್ರಿಯೆಯಾಗಿದ್ದು, ದೇಶದ ಪ್ರತಿ ವ್ಯಕ್ತಿಗೆ ನಮ್ಮ ಸಂವಿಧಾನ ನೀಡಿರುವ ಅಮೂಲ್ಯ ವಾದ ಹಕ್ಕು, ಅದನ್ನು ಯಾವುದೇ ಆಮಿಷಗಳಿಗೆ ಒಳಗಾಗದೆ ಸ್ವಯಂ ಪ್ರೇರಣೆಯಿಂದ  ಚಲಾಯಿಸಬೇಕು. 

ನಾಗರೀಕರಿಗೆ ಮತದಾನ ಪ್ರಕ್ರಿಯೆ ಕುರಿತು ಸಂಪೂರ್ಣ ಮಾಹಿತಿ ನೀಡಲು ಚುನಾವಣಾ ಆಯೋಗ ಪ್ರತ್ಯೇಕ ವೆಬ್ ಸೈಟ್ ತೆರೆದಿದ್ದು, ಅಲ್ಲಿ ಚುನಾವಣೆಗೆ ಸಂಬಂಧಿಸಿದ ಪೂರ್ಣ ಮಾಹಿತಿ, ಕುಂದು- ಕೊರತೆಗಳನ್ನು ಪರಿಹರಿಸಿಕೊಳ್ಳಲು ಸಹಾಯವಾಣಿ, ಬಿಎಲ್ ಓಗಳ ಮಾಹಿತಿ, ಮತಗಟ್ಟೆಗಳ ಮಾಹಿತಿ ಸೇರಿದಂತೆ ಮತದಾನ ಪ್ರಕ್ರಿಯೆಯ ಸಂಪೂರ್ಣ ಮಾಹಿತಿಯನ್ನು ನೀಡಲಾಗಿದೆ, ಜನತೆ ಯಾವುದೇ ಗೊಂದಲಗಳಿಗೆ ಒಳಗಾಗದೆ, ಮಾಹಿತಿ ಪಡೆದುಕೊಂಡು ಮತದಾನ ಮಾಡಬಹುದು. 

ಮತದಾನ ಮಾಡಲು  ಚುನಾವಣಾ ಆಯೋಗ 17 ಗುರುತಿನ ಚೀಟಿಗಳನ್ನು ನಿಗದಿಪಡಿಸಿದ್ದು, ಅವುಗಳಲ್ಲಿ ಯಾವುದಾದರೊಂದು ಗುರುತಿನ ಚೀಟಿ ತೋರಿಸಿ ಮತದಾನ ಮಾಡಬಹುದಾಗಿದೆ. ಮತದಾರರ ಚೀಟಿಯನ್ನು ಪ್ರತಿ ಮನೆಗೆ ತಲುಪಿಸಲು ಅಗತ್ಯ ಕ್ರಮ ಕೈಗೊಂಡಿದ್ದು, ಪ್ರತಿ ನಾಗರೀಕರು ನಿರ್ಭೀತಿಯಿಂದ ತಮಗಿಷ್ಟವಾದ ವ್ಯಕ್ತಿ, ಚಿಹ್ನೆಗೆ ಮತ ಚಲಾಯಿಸ ಬಹುದು ಎಂದ ಅವರು ಹೆಚ್ಚಿನ ಸಂಖ್ಯೆಯ ಮತದಾರರು ಪ್ರಜಾಪ್ರಭುತ್ವದ ಈ ಹಬ್ಬದಲ್ಲಿ ಸ್ವಯಂ ಪ್ರೇರಣೆಯಿಂದ ಪಾಲ್ಗೊಳ್ಳುವ ಮೂಲಕ ಯಶಸ್ವಿಗೊಳಿಸಬೇಕೆಂದು ಮನವಿ ಮಾಡಿದರು. ನಂತರ ಕಾರ್ಯಕ್ರಮ ದಲ್ಲಿ ಪಾಲ್ಗೊಂಡಿದ್ದ ಎಲ್ಲರಿಗೂ ಪ್ರತಿಜ್ಞಾ ವಿಧಿ ಭೋದಿಸಿದರು.

ಇದೇ ಸಂದರ್ಭದಲ್ಲಿ  ಬೆಂ.ನಗರ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ 

ಕಾಂತರಾಜು ಪಿ.ಎಸ್., ಮುಖ್ಯ ಯೋಜನಾಧಿಕಾರಿ ವಿನುತಾ ರಾಣಿ, ಮುಖ್ಯ ಲೆಕ್ಕಾಧಿಕಾರಿ ಲಲಿತಾ, ಉಪ‌ ಕಾರ್ಯದರ್ಶಿ ಅನಿತಾ, ಯಲಹಂಕ ತಾಲ್ಲೂಕು ಪಂಚಾಯಿತಿ ಕಾರ್ಯ ನಿರ್ವಾಹಕ ಅಧಿಕಾರಿ ಅಪೂರ್ವ ಎ ಕುಲಕರ್ಣಿ, ಬೆಂ.ಉತ್ತರ ತಾಲ್ಲೂಕು ಪಂಚಾಯಿತಿ ಕಾರ್ಯ ನಿರ್ವಾಹಕ ಅಧಿಕಾರಿ ರಮೇಶ್ ಡಿ.ಓ., ಜಿಲ್ಲಾ ಸ್ವೀಪ್ ಸಮಿತಿಯ ರಾಯಭಾರಿ, ಬಿಗ್ ಬಾಸ್ ಖ್ಯಾತಿಯ ನೀತು ವನಜಾಕ್ಷಿ, ಸಹಾಯಕ ನಿರ್ದೇಶಕ ಅಮರಯ್ಯ, ಶೇಷಾದ್ರಿಪುರಂ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ ಡಾ.ಎಸ್.ಎನ್. ವೆಂಕಟೇಶ್, ಜ್ಞಾನಜ್ಯೋತಿ ಪ್ರಥಮ ದರ್ಜೆ ಕಾಲೇಜು ಪ್ರಾಂಶುಪಾಲ ರಮೇಶ್ ಯಾದವ್, ಜಿಲ್ಲಾ ಐಇಸಿ ಸಂಯೋಜಕ ನವೀನ್ ಬಾಬು ಎನ್., ತಾಲ್ಲೂಕು ಟಿಎಂಐಎಸ್ ಮಹಮ್ಮದ್ ರಫಿ ಸೇರಿದಂತೆ ಯಲಹಂಕ ಮತ್ತು ಬೆಂ.ಉತ್ತರ ತಾಲ್ಲೂಕು ವ್ಯಾಪ್ತಿಯ ಗ್ರಾಮ ಪಂಚಾಯಿತಿಗಳ ಪಿಡಿಓಗಳು, ಗ್ರಾಮ ಪಂಚಾಯಿತಿ ಸಿಬ್ಬಂದಿಗಳು, ಶೇಷಾದ್ರಿಪುರಂ ಪ್ರಥಮ ದರ್ಜೆ ಕಾಲೇಜು, ಜ್ಞಾನಜ್ಯೋತಿ ಪ್ರಥಮ ದರ್ಜೆ ಕಾಲೇಜು ಸೇರಿದಂತೆ ಯಲಹಂಕದ ವಿವಿಧ ಕಾಲೇಜುಗಳ ಸಹಸ್ರಾರು ವಿದ್ಯಾರ್ಥಿಗಳಿದ್ದರು.

ಹೊಯ್ಸಳ ಕ್ರೀಡಾಂಗಣದಿಂದ ಆರಂಭಗೊಂಡ ಮತದಾನ ಜಾಗೃತಿ ಜಾಥಾ ಯಲಹಂಕ ಉಪನಗರ ಮುಖ್ಯರಸ್ತೆ, ಚಿಕ್ಕಬೊಮ್ಮಸಂದ್ರ ವೃತ್ತ, ಜ್ಞಾನಜ್ಯೋತಿ ವೃತ್ತದ ಮಾರ್ಗವಾಗಿ ಶೇಷಾದ್ರಿಪುರಂ ಕಾಲೇಜು ಆವರಣ ತಲುಪಿ ಅಲ್ಲಿ ಸಭಾ ಕಾರ್ಯಕ್ರಮದೊಂದಿಗೆ ಮುಕ್ತಾಯಗೊಂಡಿತು.

ಚಿತ್ರಸುದ್ದಿ : ಬೆಂಗಳೂರು ಜಿಲ್ಲಾ, ಯಲಹಂಕ ಮತ್ತು ಬೆಂ.ಉತ್ತರ ತಾಲ್ಲೂಕು ಸ್ವೀಪ್ ಸಮಿತಿ ಹಾಗೂ ಶೇಷಾದ್ರಿಪುರಂ ಪ್ರಥಮ ದರ್ಜೆ ಕಾಲೇಜು ಸಹಯೋಗದೊಂದಿಗೆ ಯಲಹಂಕ ಹೊಯ್ಸಳ ಕ್ರೀಡಾಂಗಣ ದಲ್ಲಿ ಸೋಮವಾರ ಆಯೋಜಿಸಿದ್ದ ‘ಮತದಾನ ಜಾಗೃತಿ ಜಾಥಾ’ಕ್ಕೆ ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಚಾಲನೆ ನೀಡಿದರು. ಇದೇ ಸಂದರ್ಭದಲ್ಲಿ ಬೆಂ.ನಗರ ಜಿಲ್ಲಾ ಪಂಚಾಯಿತಿ ಸಿಇಓ ಕಾಂತರಾಜು ಪಿ.ಎಸ್., ಮುಖ್ಯ ಯೋಜನಾಧಿಕಾರಿ ವಿನುತಾ ರಾಣಿ ಮುಖ್ಯ ಲೆಕ್ಕಾಧಿಕಾರಿ ಲಲಿತಾ, ಉಪ‌ ಕಾರ್ಯದರ್ಶಿ ಅನಿತಾ, ಯಲಹಂಕ ತಾಲ್ಲೂಕು ಇಓ ಅಪೂರ್ವ ಎ.ಕುಲಕರ್ಣಿ, ಬೆಂ.ಉತ್ತರ ತಾಲ್ಲೂಕು ಇಓ ರಮೇಶ್ ಡಿ.ಓ., ಜಿಲ್ಲಾ ಸ್ವೀಪ್ ಸಮಿತಿಯ ರಾಯಭಾರಿ, ಬಿಗ್ ಬಾಸ್ ಖ್ಯಾತಿಯ ನೀತು ವನಜಾಕ್ಷಿ,
ಸಹಾಯಕ ನಿರ್ದೇಶಕರು ಅಮರಯ್ಯ ಜಿಲ್ಲಾ ಐಇಸಿ ಸಂಯೋಜಕರು ನವೀನ್ ಬಾಬು ಎನ್., ಟಿಎಂಐಎಸ್ ಮಹಮ್ಮದ್ ರಫಿ. ಸೇರಿದಂತೆ ಸಹಸ್ರಾರು ಸಂಖ್ಯೆಯ ಕಾಲೇಜು ವಿದ್ಯಾರ್ಥಿಗಳಿದ್ದರು.

Leave a Reply

Your email address will not be published. Required fields are marked *