
ಬೀದರ: ನಗರದ ಗುರುನಾನಕ ಪ್ರಥಮ ದರ್ಜೆ ಮಹಾವಿದ್ಯಾಲಯ ಬೆಳ್ಳಿ ಹಬ್ಬ ಪೂರ್ಣಗೊಳಿಸಿದ ಪ್ರಯುಕ್ತ ಬೆಳ್ಳಿ ಹಬ್ಬ ಆಚರಣೆಯ ನಿಮಿತ್ತ ಸಾಂಸ್ಕೃತಿಕ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು. ಈ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ನೃತ್ಯ ,ಹಾಡು ಹಾಗೂ ರೂಪದರ್ಶಿ ಸ್ಪರ್ಧೆ ಏರ್ಪಡಿಸಲಾಯಿತು ಈ ಸ್ಪರ್ಧೆಗಳಲ್ಲಿ ವಿವಿಧ ಕಾಲೇಜಿನ ವಿದ್ಯಾರ್ಥಿಗಳು ಭಾಗವಹಿಸುವ ಮೂಲಕ ವಿಜೇತರಾದ ವಿದ್ಯಾರ್ಥಿಗಳಿಗೆ ನೆನಪಿನ ಕಾಣಿಕೆ ಹಾಗೂ ಪ್ರಮಾಣ ಪತ್ರ ನೀಡಲಾಯಿತು ಈ ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ಆಗಮಿಸಿರುವ ಇಂಡಿಯನ್ ಆರ್ಡರ್ ಕಾರ್ಯಕ್ರಮದಲ್ಲಿ ಭಾಗವಹಿಸಿದ ಶಿವಾನಿ ಸ್ವಾಮಿ ಹಾಗೂ 2023ರ ಮಿಸ್ ಬೀದರ್, ರೂಪದರ್ಶಿ ಕಾರ್ಯಕ್ರಮದಲ್ಲಿ ವಿಜೇತರಾದ ಸ್ನೇಹ ಭಾಗವಹಿಸಿ ಕಾರ್ಯಕ್ರಮಕ್ಕೆ ಮೆರುಗು ತಂದು ಕೊಟ್ಟರು . ನಾನಕ್ ಝೀರಾ ಸಾಹೇಬ್ ಅಧ್ಯಕ್ಷರಾದ ಡಾಕ್ಟರ್ ಬಲ್ಬೀರ್ ಸಿಂಗ್ ಹಾಗೂ ಗುರುನಾನಕ್ ಶಿಕ್ಷಣ ಸಂಸ್ಥೆಯ ಉಪಾಧ್ಯಕ್ಷರಾದ ಡಾಕ್ಟರ್ ರೇಷ್ಮಾ ಕೌರ್ , ನಾಟ್ಯಶ್ರೀ ಕಲಾ ಸಂಸ್ಥಾಪಕರಾದ ರಾಣಿ ಸತ್ಯಮೂರ್ತಿ ಯವರು ಸಂಜಯ ಹಾಗೂ ಗುರುನಾನಕ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲರು ಉಪನ್ಯಾಸಕರು ವಿದ್ಯಾರ್ಥಿಗಳು ಆಡಳಿತ ಮಂಡಳಿ ವಿವಿಧ ಕಾಲೇಜಿನ ವಿದ್ಯಾರ್ಥಿಗಳು ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಯಾಗಿ ಪೂರ್ಣಗೊಳಿಸಿದರು.