



ಬ್ಯಾಟರಾಯನಪುರ : ಬ್ಯಾಟರಾಯನಪುರ ಕ್ಷೇತ್ರದ ಕೋಗಿಲು ವಾರ್ಡ್ ನಲ್ಲಿ
ಬುಧವಾರ ಸಂಜೆ ಏರ್ಪಡಿಸಿದ್ದ ಕಾರ್ಯಕ್ರಮದಲ್ಲಿ ಬೆಂಗಳೂರು ಪದವೀಧರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಅ.ದೇವೇಗೌಡ ಮತ ಯಾಚನೆ ನಡೆಸಿದರು.
ನಂತರ ಮಾತನಾಡಿದ ಅವರು ‘ಕಳೆದ ಆರು ವರ್ಷಗಳಲ್ಲಿ ಬೆಂಗಳೂರು ಪದವೀಧರ ಕ್ಷೇತ್ರದ ವಿಧಾನ ಪರಿಷತ್ ಸದಸ್ಯನಾಗಿ ಪದವೀಧರರ ಸಂಕಷ್ಟಗಳಿಗೆ ಸ್ಪಂಧಿಸಿದ್ದೇನೆ, ಶಕ್ತಿ ಮೀರಿ ಕೆಲಸ ಮಾಡಿದ್ದೇನೆ. ಈ ಬಾರಿ ಸಹ ಬಿಜೆಪಿ ಅಭ್ಯರ್ಥಿ ಯಾಗಿ ಸ್ಪರ್ಧಿಸಿದ್ದೇನೆ, ಪದವೀಧರ ಮತದಾರರು ತಮ್ಮ ಅಮೂಲ್ಯ ಮತ ನೀಡುವ ಮೂಲಕ ಸೇವೆಗೆ ಅವಕಾಶ ಮಾಡಿಕೊಡಿ ಎಂದು ಮನವಿ ಮಾಡಿದರು.
ಕಾರ್ಯಕ್ರಮ ಉದ್ದೇಶಿಸಿ ಕ್ಷೇತ್ರದ ಬಿಜೆಪಿ ಮುಖಂಡ, ಬಿಜೆಪಿ ರಾಜ್ಯ ಕಾರ್ಯ ದರ್ಶಿ ಎಚ್ ಸಿ ತಮ್ಮೇಶ್ ಗೌಡ ಮಾತನಾಡಿ ‘ಅ.ದೇವೇಗೌಡ ರು ಬೆಂಗಳೂರು ಪದವೀಧರ ಕ್ಷೇತ್ರದ ವಿಧಾನ ಪರಿಷತ್ ಸದಸ್ಯ ಸ್ಥಾನದ ಬಿಜೆಪಿ ಅಭ್ಯರ್ಥಿಯಾಗಿ ಕಣದಲ್ಲಿದ್ದು, ಕಳೆದ ಅವಧಿಯಲ್ಲಿ ಸಾಕಷ್ಟು ಕೆಲಸ ಮಾಡಿದ್ದಾರೆ. ಇದೀಗ ಪುನಃ ಸ್ರರ್ಧಿಯಾಗಿ ಕಣದ ಲ್ಲಿದ್ದು ಬ್ಯಾಟರಾಯನಪುರ ಕ್ಷೇತ್ರದ ಪದವೀಧರ ಮತದಾರರು ಅವರ ಆಯ್ಕೆಗಾಗಿ ಸಹಕಾರ ನೀಡಬೇಕು ಎಂದರು.
ಬ್ಯಾಟರಾಯನಪುರ ಕ್ಷೇತ್ರದ ವ್ಯಾಪ್ತಿಯಲ್ಲಿ ನೀರಿನ ಸಮಸ್ಯೆ ಉಲ್ಬಣವಾಗಿದ್ದು, ಈ ಕುರಿತು ಕ್ಷೇತ್ರದ ವಿವಿಧ ಭಾಗಗಳ ಜನತೆ, ನಿಮ್ಮ ವ್ಯಾಪ್ತಿಯಲ್ಲಿನ ನೀರಿನ ಸಮಸ್ಯೆ ಕುರಿತು ಲಿಖಿತ ಮನವಿ ಸಲ್ಲಿಸಿದರೆ. ಕ್ಷೇತ್ರದ ನೀರಿನ ಸಮಸ್ಯೆ ವಿರುದ್ಧ ಪ್ರತಿಭಟನೆ ಕೈಗೊಂಡು, ಸರ್ಕಾರದ ಗಮನ ಸೆಳೆಯುವ ಮೂಲಕ ಕ್ಷೇತ್ರದ ನೀರಿನ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಲು ಶ್ರಮಿಸುವುದಾಗಿ ತಿಳಿಸಿದರು.
ಇದೇ ಸಂದರ್ಭದಲ್ಲಿ ಬ್ಯಾಟರಾಯನಪುರ ಗ್ರಾಮಾಂತರ ಮಂಡಲ ಬಿಜೆಪಿ ಅಧ್ಯಕ್ಷ ದೊಡ್ಡಜಾಲ ಹನುಮಂತುಗೌಡ, ನಗರ ಮಂಡಲ ಅಧ್ಯಕ್ಷ ಕೃಷ್ಣಮೂರ್ತಿ, ಕೋಗಿಲು ವಾರ್ಡ್ ಬಿಜೆಪಿ ಅಧ್ಯಕ್ಷ ಕೆ.ಎ.ಅನಿಲ್ ಕುಮಾರ್, ಬ್ಯಾಟರಾಯನಪುರ ನಗರ ಮಂಡಲ ಯುವ ಮೋರ್ಚಾ ಅಧ್ಯಕ್ಷ ಲೋಹಿತ್ ಗೌಡ, ಉಪಾಧ್ಯಕ್ಷ ಸುನಿಲ್, ಬಿಜೆಪಿ ಮುಖಂಡರಾದ ಮುನಿಹನು ಮಯ್ಯ, ಭುಜಂಗಣ್ಣ ಸೇರಿದಂತೆ ಬಿಜೆಪಿ ಕಾರ್ಯಕರ್ತರು ಹಾಗೂ ಮುಖಂಡರಿದ್ದರು.
R Hanumanthu. 9845085793