ಚಿಕ್ಕಬಳ್ಳಾಪುರ: ಮಣಿಪುರದಲ್ಲಿ ಮಹಿಳೆಯರಿಬ್ಬರನ್ನು ವಿವಸ್ತ್ರಗೊಳಿಸಿ ಮೆರವಣಿಗೆ ನಡೆಸಿರುವ ಘಟನೆಯನ್ನು ಖಂಡಿಸಿ ನಗರದ ಅಂಬೇಡ್ಕರ್ ವೃತ್ತದಲ್ಲಿ ಕೆವಿಎಸ್, ರೈತ ಸಂಘದ ಕಾರ್ಯಕರ್ತರು ಶುಕ್ರವಾರ ಪ್ರತಿಭಟನೆ ನಡೆಸಿದರು. ಎಲ್ಲ ಆರೋಪಿಗಳನ್ನು ಕೂಡಲೇ ಬಂಧಿಸಿ ಕಠಿಣ ಶಿಕ್ಷೆಗೆ ಒಳಪಡಿಸಬೇಕೆಂದು ಆಗ್ರಹಿಸಿದರು.
ರೈತ ಸಂಘದ ಸುಷ್ಮಾ ಶ್ರೀನಿವಾಸ್ ಮಾತನಾಡಿ ದೇಶಕ್ಕೆ ಸ್ವಾತಂತ್ರ್ಯ ಬಂದು 75 ವರ್ಷಗಳು ಕಳೆದರೂ ಶೋಷಿತರ ಹೆಣ್ಣು ಮಕ್ಕಳ ಮೇಲಿನ ದೌರ್ಜನ್ಯ ನಿಂತಿಲ್ಲ. ಮಹಿಳೆಯರಿಗೆ ಪೂಜ್ಯನೀಯ ಸ್ಥಾನಮಾನವನ್ನು ನೀಡಿರುವ ದೇಶದಲ್ಲಿ ಇಂತಹ ಅಮಾನವೀಯ ಘಟನೆ ಪದೇ ಪದೇ ನಡೆಯುತ್ತಿರುವುದು ನಾಚಿಗೆಗೇಡಿನ ಸಂಗತಿಯಾಗಿದ್ದು, ಮಣಿಪುರದ ಘಟನೆಯಲ್ಲಿ ತೊಡಗಿರುವ ಎಲ್ಲ ಆರೋಪಿಗಳನ್ನು ಬಂಧಿಸಿ ಕಠಿಣ ಶಿಕ್ಷೆಗೆ ಗುರಿಪಡಿಸಬೇಕು ಎಂದು ಹೇಳಿದರು.
ಕೆವಿಎಸ್‍ನ ಕಿರಣ್ ನಾಯಕ್ ಮಾತನಾಡಿ, ದೇಶದಲ್ಲಿ ಮಹಿಳೆಯರಿಗೆ ರಕ್ಷಣೆ ಎಂಬುದು ಇಲ್ಲವಾಗಿದೆ. ಮಣಿಪುರದ ಘಟನೆಯಿಂದ ಇಡೀ ನಾಗರೀಕ ಸಮಾಜವೇ ತಲೆತಗ್ಗಿಸುವಂತೆ ಮಾಡಿದೆ. 24 ಗಂಟೆಗಳಲ್ಲಿ ಘಟನೆ ಸಂಬಂಧಿಸಿದ ಎಲ್ಲ ಆರೋಪಿಗಳನ್ನು ಬಂಧಿಸಿ, ಇಂತಹ ಘಟನೆಗಳು ಮರುಕಳಿಸದಂತೆ ಸರ್ಕಾರಗಳು ಕಟ್ಟು ನಿಟ್ಟಿನ ಕ್ರಮಗಳನ್ನು ಕೈಗೊಳ್ಳಬೇಕೆಂದು ಒತ್ತಾಯಿಸಿದರು.
ಪ್ರತಿಭಟನೆಯಲ್ಲಿ ಮುರಳಿಧರ್, ಸೌಭಾಗ್ಯಮ್ಮ, ಕೆ.ಸಿ.ಮಮತಾ, ಸುಬ್ರಮಣ್ಯಂ, ಕೃಷ್ಣಪ್ಪ, ಅಮೃತ, ಭವ್ಯ, ಕಾವ್ಯ, ಭಾಗ್ಯ, ವಿಜಯಲಕ್ಷ್ಮೀ, ಇಬ್ರಾಹಿಂ, ವೆಂಕಟರೆಡ್ಡಿ, ಗೌಸ್‍ಪಾಷಾ, ಸಮೀರ್, ಮೌಲ, ಸಂತೋಷ್, ರೇಷ್ಮಾ, ಐಶು, ಅಮೃತ, ಮಂಜುನಾಥ್ ಇದ್ದರು.

ಮಣಿಪುರ ಘಟನೆ ಖಂಡಿಸಿ ಪ್ರತಿಭಟನೆ

ಚಿಕ್ಕಬಳ್ಳಾಪುರ: ಮಣಿಪುರದಲ್ಲಿ ಮಹಿಳೆಯರಿಬ್ಬರನ್ನು ವಿವಸ್ತ್ರಗೊಳಿಸಿ ಮೆರವಣಿಗೆ ನಡೆಸಿರುವ ಘಟನೆಯನ್ನು ಖಂಡಿಸಿ ನಗರದ ಅಂಬೇಡ್ಕರ್ ವೃತ್ತದಲ್ಲಿ ಕೆವಿಎಸ್, ರೈತ ಸಂಘದ ಕಾರ್ಯಕರ್ತರು ಶುಕ್ರವಾರ ಪ್ರತಿಭಟನೆ ನಡೆಸಿದರು. ಎಲ್ಲ ಆರೋಪಿಗಳನ್ನು ಕೂಡಲೇ ಬಂಧಿಸಿ ಕಠಿಣ ಶಿಕ್ಷೆಗೆ ಒಳಪಡಿಸಬೇಕೆಂದು ಆಗ್ರಹಿಸಿದರು.
ರೈತ ಸಂಘದ ಸುಷ್ಮಾ ಶ್ರೀನಿವಾಸ್ ಮಾತನಾಡಿ ದೇಶಕ್ಕೆ ಸ್ವಾತಂತ್ರ್ಯ ಬಂದು 75 ವರ್ಷಗಳು ಕಳೆದರೂ ಶೋಷಿತರ ಹೆಣ್ಣು ಮಕ್ಕಳ ಮೇಲಿನ ದೌರ್ಜನ್ಯ ನಿಂತಿಲ್ಲ. ಮಹಿಳೆಯರಿಗೆ ಪೂಜ್ಯನೀಯ ಸ್ಥಾನಮಾನವನ್ನು ನೀಡಿರುವ ದೇಶದಲ್ಲಿ ಇಂತಹ ಅಮಾನವೀಯ ಘಟನೆ ಪದೇ ಪದೇ ನಡೆಯುತ್ತಿರುವುದು ನಾಚಿಗೆಗೇಡಿನ ಸಂಗತಿಯಾಗಿದ್ದು, ಮಣಿಪುರದ ಘಟನೆಯಲ್ಲಿ ತೊಡಗಿರುವ ಎಲ್ಲ ಆರೋಪಿಗಳನ್ನು ಬಂಧಿಸಿ ಕಠಿಣ ಶಿಕ್ಷೆಗೆ ಗುರಿಪಡಿಸಬೇಕು ಎಂದು ಹೇಳಿದರು.
ಕೆವಿಎಸ್‍ನ ಕಿರಣ್ ನಾಯಕ್ ಮಾತನಾಡಿ, ದೇಶದಲ್ಲಿ ಮಹಿಳೆಯರಿಗೆ ರಕ್ಷಣೆ ಎಂಬುದು ಇಲ್ಲವಾಗಿದೆ. ಮಣಿಪುರದ ಘಟನೆಯಿಂದ ಇಡೀ ನಾಗರೀಕ ಸಮಾಜವೇ ತಲೆತಗ್ಗಿಸುವಂತೆ ಮಾಡಿದೆ. 24 ಗಂಟೆಗಳಲ್ಲಿ ಘಟನೆ ಸಂಬಂಧಿಸಿದ ಎಲ್ಲ ಆರೋಪಿಗಳನ್ನು ಬಂಧಿಸಿ, ಇಂತಹ ಘಟನೆಗಳು ಮರುಕಳಿಸದಂತೆ ಸರ್ಕಾರಗಳು ಕಟ್ಟು ನಿಟ್ಟಿನ ಕ್ರಮಗಳನ್ನು ಕೈಗೊಳ್ಳಬೇಕೆಂದು ಒತ್ತಾಯಿಸಿದರು.
ಪ್ರತಿಭಟನೆಯಲ್ಲಿ ಮುರಳಿಧರ್, ಸೌಭಾಗ್ಯಮ್ಮ, ಕೆ.ಸಿ.ಮಮತಾ, ಸುಬ್ರಮಣ್ಯಂ, ಕೃಷ್ಣಪ್ಪ, ಅಮೃತ, ಭವ್ಯ, ಕಾವ್ಯ, ಭಾಗ್ಯ, ವಿಜಯಲಕ್ಷ್ಮೀ, ಇಬ್ರಾಹಿಂ, ವೆಂಕಟರೆಡ್ಡಿ, ಗೌಸ್‍ಪಾಷಾ, ಸಮೀರ್, ಮೌಲ, ಸಂತೋಷ್, ರೇಷ್ಮಾ, ಐಶು, ಅಮೃತ, ಮಂಜುನಾಥ್ ಇದ್ದರು.

Leave a Reply

Your email address will not be published. Required fields are marked *