ಕೊರಟಗೆರೆ:- ತಾಲ್ಲೂಕಿನ ಬುಕ್ಕಪಟ್ಟಣ ಗ್ರಾಮ ಪಂಚಾಯಿತಿಯಲ್ಲಿ ೨ನೇ ಅವಧಿಯ ಅಧ್ಯಕ್ಷ ಮತ್ತು ಉಪಾಧ್ಯಕ್ಷರ ಚುನಾವಣೆಯಲ್ಲಿ ಅಧ್ಯಕ್ಷರಾಗಿ ಮಮತಾ, ಉಪಾಧ್ಯಕ್ಷರಾಗಿ ಮಂಜುಳಾ ಆಯ್ಕೆಯಾಗಿದ್ದಾರೆ ಎಂದು ಚುನಾವಣಾಧಿಕಾರಿ ರಘು ಟಿ.ಆರ್ ಘೋಷಣೆ ಮಾಡಿದರು.
ಚುನಾವಣಾ ಅಧಿಕಾರಿ ರಘು ಟಿ.ಆರ್ ನೇತೃತ್ವದಲ್ಲಿ ತಾಲ್ಲೂಕಿನ ಬುಕ್ಕಪಟ್ಟಣ ಗ್ರಾ.ಪಂಯಲ್ಲಿ ಅಧ್ಯಕ್ಷರಾಗಿ ಮಮತಾ, ಉಪಾಧ್ಯಕ್ಷರಾಗಿ ಮಂಜುಳಾ ಆಯ್ಕೆಯಾದರು. ಸದಸ್ಯರು ಮತ್ತು ಪಕ್ಷದ ಮುಖಂಡರು ಶುಭಾಶಯವನ್ನು ತಿಳಿಸಿದರು, ಬೆಂಬಲಿಗರು ಸಿಹಿ ಹಂಚಿ, ಪಟಾಕಿ ಸಿಡಿಸಿ ಸಂಭ್ರಮಾಚರಣೆ ಮಾಡಿದರು.
ನೂತನ ಅಧ್ಯಕ್ಷೆ ಮಮತಾ ಮಾತನಾಡಿ, ನಮ್ಮ ಪಂಚಾಯಿತಿ ಎಲ್ಲಾ ಸದಸ್ಯ ಸಹಕಾರದಿಂದ ನನ್ನನ್ನು ಅಧ್ಯಕ್ಷ ಸ್ಥಾನಕ್ಕೆ ಆಯ್ಕೆ ಮಾಡಿದ್ದು ನನ್ನ ಕಡೆಯಿಂದ ಅವರಿಗೆ ಕೃತಜ್ಞತೆ ತಿಳಿಸುತ್ತೇನೆ, ನಮ್ಮ ಗ್ರಾಪಂ ವ್ಯಾಪ್ತಿಯಲ್ಲಿ ಬರುವ ಪ್ರತಿ ಗ್ರಾಮಗಳಿಗೆ ಪ್ರಮುಖವಾಗಿ ಮೂಲಭೂತ ಸೌಕರ್ಯ ಒದಗಿಸಿ, ಗ್ರಾಮಗಳನ್ನು ಅಭಿವೃದ್ಧಿ ಪಡಿಸುವುದೇ ನನ್ನ ಮುಖ್ಯ ಉದ್ದೇಶ ಎಂದು ಹೇಳಿದರು.
ನೂತನ ಉಪಾಧ್ಯಕ್ಷೆ ಮಂಜುಳಾ ಮಾತನಾಡಿ, ಗ್ರಾಮದಲ್ಲಿನ ಸಮಸ್ಯೆಗಳಿಗೆ ಸ್ಪಂದಿಸುವ ಕೆಲಸ ಮಾಡಿ ನಮ್ಮ ಗ್ರಾಪಂ ನಿಂದ ಮಾಡಬಹುದಾದ ಅಭಿವೃದ್ಧಿ ಕೆಲಸಗಳಿಗೆ ಮೊದಲ ಆದ್ಯತೆ ನೀಡಿ ಬುಕ್ಕಪಟ್ಟಣ ಪಂಚಾಯಿತಿಯನ್ನು ಮಾದರಿಯನ್ನಾಗಿ ಮಾಡುವುದೇ ನನ್ನ ಪ್ರಮುಖ ಉದ್ದೇಶ, ನಮ್ಮ ಸದಸ್ಯರ ಜೊತೆಯಲ್ಲಿ ಮೂಲಭೂತ ಸೌಕರ್ಯ ಒದಗಿಸುವಲ್ಲಿ ಪ್ರಮಾಣಿಕ ಕೆಲಸ ಮಾಡುತ್ತೇನೆ ಎಂದರು.
ಈ ಸಂದರ್ಭದಲ್ಲಿ ಚುನಾವಣಾಧಿಕಾರಿ ರಘು ಸೇರಿದಂತೆ ಗ್ರಾ.ಪಂಯ ಸರ್ವ ಸದಸ್ಯರು, ಸಿಬ್ಬಂದಿಗಳು, ಬೆಂಬಲಿಗರು ಹಾಜರಿದ್ದರು.
ಬುಕ್ಕಪಟ್ಟಣ ಗ್ರಾಪಂ ಅಧ್ಯಕ್ಷರಾಗಿ ಮಮತಾ, ಉಪಾಧ್ಯಕ್ಷರಾಗಿ ಮಂಜುಳಾ ಆಯ್ಕೆ..
ಕೊರಟಗೆರೆ:- ತಾಲ್ಲೂಕಿನ ಬುಕ್ಕಪಟ್ಟಣ ಗ್ರಾಮ ಪಂಚಾಯಿತಿಯಲ್ಲಿ ೨ನೇ ಅವಧಿಯ ಅಧ್ಯಕ್ಷ ಮತ್ತು ಉಪಾಧ್ಯಕ್ಷರ ಚುನಾವಣೆಯಲ್ಲಿ ಅಧ್ಯಕ್ಷರಾಗಿ ಮಮತಾ, ಉಪಾಧ್ಯಕ್ಷರಾಗಿ ಮಂಜುಳಾ ಆಯ್ಕೆಯಾಗಿದ್ದಾರೆ ಎಂದು ಚುನಾವಣಾಧಿಕಾರಿ ರಘು ಟಿ.ಆರ್ ಘೋಷಣೆ ಮಾಡಿದರು.
ಚುನಾವಣಾ ಅಧಿಕಾರಿ ರಘು ಟಿ.ಆರ್ ನೇತೃತ್ವದಲ್ಲಿ ತಾಲ್ಲೂಕಿನ ಬುಕ್ಕಪಟ್ಟಣ ಗ್ರಾ.ಪಂಯಲ್ಲಿ ಅಧ್ಯಕ್ಷರಾಗಿ ಮಮತಾ, ಉಪಾಧ್ಯಕ್ಷರಾಗಿ ಮಂಜುಳಾ ಆಯ್ಕೆಯಾದರು. ಸದಸ್ಯರು ಮತ್ತು ಪಕ್ಷದ ಮುಖಂಡರು ಶುಭಾಶಯವನ್ನು ತಿಳಿಸಿದರು, ಬೆಂಬಲಿಗರು ಸಿಹಿ ಹಂಚಿ, ಪಟಾಕಿ ಸಿಡಿಸಿ ಸಂಭ್ರಮಾಚರಣೆ ಮಾಡಿದರು.
ನೂತನ ಅಧ್ಯಕ್ಷೆ ಮಮತಾ ಮಾತನಾಡಿ, ನಮ್ಮ ಪಂಚಾಯಿತಿ ಎಲ್ಲಾ ಸದಸ್ಯ ಸಹಕಾರದಿಂದ ನನ್ನನ್ನು ಅಧ್ಯಕ್ಷ ಸ್ಥಾನಕ್ಕೆ ಆಯ್ಕೆ ಮಾಡಿದ್ದು ನನ್ನ ಕಡೆಯಿಂದ ಅವರಿಗೆ ಕೃತಜ್ಞತೆ ತಿಳಿಸುತ್ತೇನೆ, ನಮ್ಮ ಗ್ರಾಪಂ ವ್ಯಾಪ್ತಿಯಲ್ಲಿ ಬರುವ ಪ್ರತಿ ಗ್ರಾಮಗಳಿಗೆ ಪ್ರಮುಖವಾಗಿ ಮೂಲಭೂತ ಸೌಕರ್ಯ ಒದಗಿಸಿ, ಗ್ರಾಮಗಳನ್ನು ಅಭಿವೃದ್ಧಿ ಪಡಿಸುವುದೇ ನನ್ನ ಮುಖ್ಯ ಉದ್ದೇಶ ಎಂದು ಹೇಳಿದರು.
ನೂತನ ಉಪಾಧ್ಯಕ್ಷೆ ಮಂಜುಳಾ ಮಾತನಾಡಿ, ಗ್ರಾಮದಲ್ಲಿನ ಸಮಸ್ಯೆಗಳಿಗೆ ಸ್ಪಂದಿಸುವ ಕೆಲಸ ಮಾಡಿ ನಮ್ಮ ಗ್ರಾಪಂ ನಿಂದ ಮಾಡಬಹುದಾದ ಅಭಿವೃದ್ಧಿ ಕೆಲಸಗಳಿಗೆ ಮೊದಲ ಆದ್ಯತೆ ನೀಡಿ ಬುಕ್ಕಪಟ್ಟಣ ಪಂಚಾಯಿತಿಯನ್ನು ಮಾದರಿಯನ್ನಾಗಿ ಮಾಡುವುದೇ ನನ್ನ ಪ್ರಮುಖ ಉದ್ದೇಶ, ನಮ್ಮ ಸದಸ್ಯರ ಜೊತೆಯಲ್ಲಿ ಮೂಲಭೂತ ಸೌಕರ್ಯ ಒದಗಿಸುವಲ್ಲಿ ಪ್ರಮಾಣಿಕ ಕೆಲಸ ಮಾಡುತ್ತೇನೆ ಎಂದರು.
ಈ ಸಂದರ್ಭದಲ್ಲಿ ಚುನಾವಣಾಧಿಕಾರಿ ರಘು ಸೇರಿದಂತೆ ಗ್ರಾ.ಪಂಯ ಸರ್ವ ಸದಸ್ಯರು, ಸಿಬ್ಬಂದಿಗಳು, ಬೆಂಬಲಿಗರು ಹಾಜರಿದ್ದರು.