

ಬ್ಯಾಟರಾಯನಪುರ : ಕ್ಷೇತ್ರದ ಬೆಟ್ಟಹಲಸೂರು ಗ್ರಾಮ ಪಂಚಾಯ್ತಿ ನೂತನ ಅಧ್ಯಕ್ಷರಾಗಿ ಅದೇ ಗ್ರಾಮದ ಹೇಮಾವತಿ ನಾಗರಾಜ್ ಬಾಬು ಆಯ್ಕೆಯಾಗಿದ್ದಾರೆ.
ಬೆಟ್ಟಹಲಸೂರು ಗ್ರಾ.ಪಂ.ಯಲ್ಲಿ ಒಟ್ಟು 26 ಸದಸ್ಯರಿದ್ದು, ಅಧ್ಯಕ್ಷ ರಾಗಿದ್ದ ಬಿ.ಎಸ್.ಅನಿಲ್ ಕುಮಾರ್ ರವರ ರಾಜೀನಾಮೆ ಯಿಂದ ತೆರವಾದ ಸ್ಥಾನಕ್ಕೆ ಸೋಮವಾರ ನಡೆದ ಚುನಾವಣಾ ಪ್ರಕ್ರಿಯೆಯಲ್ಲಿ ಬಿಜೆಪಿ ಬೆಂಬಲಿತ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಹೇಮಾವತಿ ನಾಗರಾಜ್ ಬಾಬು ರವರು 13 ಮತಗಳನ್ನು ಪಡೆದು ಅಧ್ಯಕ್ಷರಾಗಿ ಆಯ್ಕೆಯಾದರು, ಇವರ ಪ್ರತಿಸ್ಪರ್ಧಿಯಾಗಿ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಯಾಗಿ ಕಣದಲ್ಲಿದ್ದ ಪ್ರೇಮ ಎಂಬುವವರು 12 ಮತಗಳನ್ನು ಪಡೆದು ಪರಾಭವಗೊಂಡರು. ಉಳಿದ ಒಂದು ಮತ ತಿರಸ್ಕೃತವಾಗಿದೆ.
ಉಳಿದಂತೆ ಉಪಾಧ್ಯಕ್ಷ ಸ್ಥಾನಕ್ಕಾಗಿ ನಡೆದ ಚುನಾವಣೆಯಲ್ಲಿ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಯಾಗಿ ಕಣದಲ್ಲಿದ್ದ ಬೆಟ್ಟಹಲಸೂರು ಗ್ರಾಮದ ಬಿ.ಆರ್. ಪ್ರವೀಣ್ 14 ಮತಗಳನ್ನು ಪಡೆದು ಉಪಾಧ್ಯಕ್ಷ ರಾಗಿ ಆಯ್ಕೆಯಾದರು, ಇವರ ಪ್ರತಿಸ್ಪರ್ಧಿಯಾಗಿ ಬಿಜಿಪಿ ಬೆಂಬಲಿತ ಅಭ್ಯರ್ಥಿಯಾಗಿ ಕಣದಲ್ಲಿದ್ದ ಬಿ.ಆರ್.ರಾಮಾಂಜಿನಿ 12 ಮತಗ ಳನ್ನು ಪಡೆದು ಪರಾಭವಗೊಂಡರು.
ನೂತನ ಅಧ್ಯಕ್ಷೆ ಹೇಮಾವತಿ ನಾಗರಾಜ್ ಬಾಬು ರವರನ್ನು ಬಿಜೆಪಿ ಮುಖಂಡ ಎ.ರವಿ ಗೌರವ ಸನ್ಮಾನ ನೀಡಿ ಅಭಿನಂದಿಸಿದರು. ಈ ವೇಳೆ ಮಾತನಾಡಿದ ಅವರು ‘ಬೆಟ್ಟಹಲಸೂರು ಗ್ರಾ.ಪಂ.ಅಧ್ಯಕ್ಷ ರಾಗಿ ಹೇಮಾವತಿ ರವರು ಆಯ್ಕೆ ಯಾಗುವಲ್ಲಿ ನಿಕಟಪೂರ್ವ ಅಧ್ಯಕ್ಷ ಬಿ.ಎಸ್.ಅನಿಲ್ ಕುಮಾರ್ ಮತ್ತು ಬಿಜೆಪಿ ಮುಖಂಡ ಟಿ.ಪಿ.ಪ್ರಕಾಶ್ ಹಾಗೂ ಕೆಲವು ಮುಖಂಡರು ಮಹತ್ವದ ಪಾತ್ರ ನಿರ್ವಹಿಸಿದ್ದು, ಬಿಜೆಪಿ ಬೆಂಬಲಿತ ಅಭ್ಯರ್ಥಿ ಗೆ ಗೆಲುವು ತಂದು ಕೊಡುವಲ್ಲಿ ಯಶಸ್ವಿಯಾಗಿದ್ದಾರೆ. ಈ ಗೆಲುವನ್ನು ದೇವರ ಆಶೀರ್ವಾದವಾದ ಎಂದು ಪರಿಗಣಿಸಿ, ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗ್ರಾಮಗಳ ಸರ್ವಾಂಗೀಣ ಪ್ರಗತಿಗೆ ನೂತನ ಅಧ್ಯಕ್ಷೆ ಹೇಮಾವತಿ ನಾಗರಾಜ್ ಬಾಬು ಶ್ರಮಿಸುವಂತಾಗಲಿ ಎಂದು ಶುಭ ಹಾರೈಸಿದರು.
ಇದೇ ಸಂದರ್ಭದಲ್ಲಿ ಬೆಟ್ಟಹಲ ಸೂರು ಗ್ರಾ.ಪಂ. ನಿಕಟ ಪೂರ್ವ ಅಧ್ಯಕ್ಷ ಬಿ.ಎಸ್.ಅನಿಲ್ ಕುಮಾರ್, ತಾ.ಪಂ.ಮಾಜಿ ಸದಸ್ಯ ನಾಗರಾಜ್ ಬಾಬು, ಬಿಬಿಎಂಪಿ ಆಡಳಿತ ಪಕ್ಷದ ಮಾಜಿ ನಾಯಕ ಅಶ್ವಥ್ ನಾರಾಯಣ, ಬಿಜೆಪಿ ಮುಖಂಡ ರಾದ ಟಿ.ಪಿ.ಪ್ರಕಾಶ್, ದೀಪು, ಪಟೇಲ್(ಅಗ್ರಹಾರ), ಮಾಜಿ ಗ್ರಾ.ಪಂ.ಸದಸ್ಯ ಬಿ.ಕೆ.ಚಂದ್ರು ಗ್ರಾ.ಪಂ.ನಿಕಟ ಪೂರ್ವ ಉಪಾಧ್ಯಕ್ಷೆ ವಿಮಲಾ ಗಣೇಶ್, ಸದಸ್ಯರಾದ ಬಿ.ಆರ್. ರಾಮಾಂಜಿನಿ, ಬಿ.ವೈ. ಮಂಜುನಾಥ್, ರತ್ನಮ್ಮ ಆಂಜಿನಪ್ಪ, ತುಳಸಮ್ಮ ವೆಂಕಟರಮಣಪ್ಪ, ಸಾವಿತ್ರಮ್ಮ ಮುನಿರಾಜು, ಸುವರ್ಣ ಜಯಣ್ಣ, ಮಮತಾ ಪ್ರಶಾಂತ್, ಸೇರಿದಂತೆ ಇನ್ನಿತರರಿದ್ದರು.
ಸುದ್ದಿ ಹಾಗೂ ಜಾಹಿರಾತುಗಾಗಿ ಸಂಪರ್ಕಿಸಿ
R hanumanthu. 9845085793.
7349337989