ಶಾಸಕ ಎಸ್ ಆರ್ ವಿಶ್ವನಾಥ್ ನೇತೃತ್ವದಲ್ಲಿ ಮೈಸೂರು ಚಲೋ ಪಾದಯಾತ್ರೆಗೆ ತೆರಳಿದ ಯಲಹಂಕದ ಸಹಸ್ರಾರು ಬಿಜೆಪಿ ಕಾರ್ಯಕರ್ತರು :

ಯಲಹಂಕ : ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಮತ್ತು ಜೆಡಿಎಸ್ ಮೈತ್ರಿಪಕ್ಷಗಳ ವತಿಯಿಂದ‌ ಭಾನುವಾರ ಬಿಡದಿಯಿಂದ ಪ್ರಾರಂಭವಾದ 2ನೇ ದಿನದ ‘ಮೈಸೂರು ಚಲೋ ಪಾದಯಾತ್ರೆ’ ಯಲ್ಲಿ ಪಾಲ್ಗೊಳ್ಳಲು ಯಲಹಂಕ ಕ್ಷೇತ್ರದ ಸಹಸ್ರಾರು ಬಿಜೆಪಿ ಕಾರ್ಯಕರ್ತರು, ಮುಖಂಡರು ಯಲಹಂಕ ಶಾಸಕ ಎಸ್ ಆರ್ ವಿಶ್ವನಾಥ್ ನೇತೃತ್ವದಲ್ಲಿ ಕ್ಷೇತ್ರದ ಮಾದಾವರದ ಬಳಿಯ ನೈಸ್ ಮೈದಾನದಿಂದ ತೆರಳಿದರು.

ಇದೇ ಸಂದರ್ಭದಲ್ಲಿ ಮಾಜಿ ಸಚಿವ, ಕೆ ಆರ್ ಪುರ ಶಾಸಕ ಬಸವರಾಜು, ಮಾಜಿ ಶಾಸಕ ನೆ.ಲ.ನರೇಂದ್ರಬಾಬು, ನಟಿ ಮಾಳವಿಕ ಅವಿನಾಶ್, ಬಿಜೆಪಿ ಯುವ ಮುಖಂಡ‌ ಅಲೋಕ್ ಟವಿಶ್ವನಾಥ್, ರೈತ ಮೋರ್ಚಾ ರಾಜ್ಯ ಕಾರ್ಯದರ್ಶಿ ಸತೀಶ್ ಕಡತನಮಲೆ, ಜಿ.ಪಂ.ಮಾಜಿ ಅಧ್ಯಕ್ಷ ಚೊಕ್ಕನಹಳ್ಳಿ ವೆಂಕಟೇಶ್, ಸದಸ್ಯ ಡಾ.ಉದ್ದಂಡಯ್ಯ, ರಾಜಾನುಕುಂಟೆ ಗ್ರಾ.ಪಂ.ಮಾಜಿ ಅಧ್ಯಕ್ಷ ಎಸ್ ಜಿ ನರಸಿಂಹಮೂರ್ತಿ (ಎಸ್ ಟಿ ಡಿ ಮೂರ್ತಿ), ಸಿಂಗನಾಯಕನಹಳ್ಳಿ ಗ್ರಾ.ಪಂ. ಮಾಜಿ ಉಪಾಧ್ಯಕ್ಷ ಎಸ್.ಜಿ.ಪ್ರಶಾಂತ್ ರೆಡ್ಡಿ, ರೈತ ಮೋರ್ಚಾ ಜಿಲ್ಲಾಧ್ಯಕ್ಷ ಜಿ.ಜೆ.ಮೂರ್ತಿ, ಗ್ರಾಮಾಂತರ ಮಂಡಲ ರೈತ ಮೋರ್ಚಾ ಉಪಾಧ್ಯಕ್ಷ ಪಿ.ಕೆ.ರಾಜಣ್ಣ, ಅದ್ದಿಗಾನಹಳ್ಳಿ ಸತೀಶ್, ಯುವ ಮುಖಂಡರಾದ ವಿನಯ್, ಸಾದೇನಹಳ್ಳಿ ಪ್ರಕಾಶ್ ಗೌಡ ಸೇರಿದಂತೆ ಇನ್ನಿತರರಿದ್ದು, ಪಾದಯಾತ್ರೆಯಲ್ಲಿ ಹೆಜ್ಜೆ ಹಾಕಿದರು.

Leave a Reply

Your email address will not be published. Required fields are marked *