
: ದಿನಾಂಕ 04/08/2024 ಭಾನುವಾರ ದಂದು ದೊಡ್ಡಗಟ್ಟಿಗಾನಬ್ಬೆ ಗ್ರಾಮ ಪಂಚಾಯಿತಿಯಲ್ಲಿ ಬರುವ ಪೂಜೇನ ಅಗ್ರಹಾರ ಗ್ರಾಮದಲ್ಲಿ ವಿಶ್ವೇಶ್ವರಯ್ಯ ಜಲನಿಗಮ ಭಾಗ್ಯ ಯೋಜನೆ ಅಡಿಯಲ್ಲಿ ಸುಮಾರು 10 ಲಕ್ಷ ವೆಚ್ಚದ ಸಿಸಿ ರಸ್ತೆ ಚರಂಡಿ ನಿರ್ಮಾಣ ಕಾಮಗಾರಿ ಪೂಜೆ.
ಭಕ್ತರಹಳ್ಳಿ ಗ್ರಾಮದಲ್ಲಿ ಜಲನಿಗಮ ಭಾಗ್ಯ ಯೋಜನೆ ಅಡಿಯಲ್ಲಿ ಸುಮಾರು 10 ಲಕ್ಷ ವೆಚ್ಚದ ಸಿಸಿ ರಸ್ತೆ ಚರಂಡಿ ನಿರ್ಮಾಣ ಕಾಮಗಾರಿ ಪೂಜೆ. ಪ್ರಾದೇಶಾಭಿವೃದ್ದಿ ಯೋಜನೆ ಅಡಿಯಲ್ಲಿ ಎಸ್ ಸಿಪಿ/ ಟಿಎಸ್ಪಿ ಅನುದಾನದಲ್ಲಿ ಸುಮಾರು 12 ಲಕ್ಷ ವೆಚ್ಚದ ಸಿ.ಸಿ.ಚರಂಡಿ ನಿರ್ಮಾಣ ಕಾಮಗಾರಿ ಭೂಮಿ ಪೂಜೆ.
ಭಕ್ತರಹಳ್ಳಿ ಗೇಟ್ ನಿಂದ ಕೋಡಿಹಳ್ಳಿ ಗ್ರಾಮದವರೆಗೆ ರಸ್ತೆ ಡಾಂಬರೀಕರಣ ಕಾಮಗಾರಿ ಪೂಜೆ. ಶುದ್ಧ ಕುಡಿಯುವ ನೀರಿನ ಘಟಕ ನಿರ್ಮಾಣ ಕಾಮಗಾರಿಯ ಭೂಮಿ ಪೂಜೆ. ಜಲಜೀವನ್ ಮಿಷನ್ ಕಾಮಗಾರಿ ಪೂಜೆ, ಸಿ.ಎಸ್.ಆರ್ ಅನುದಾನದಲ್ಲಿ ಗ್ರಾಮದ ಸರ್ಕಾರಿ ಪ್ರಾಥಮಿಕ ಶಾಲೆಯ ಆವರಣದಲ್ಲಿ ನೂತನ ಕೊಠಡಿಗಳ ನಿರ್ಮಾಣ ಕಾಮಗಾರಿ ಪೂಜೆಗೆ ಗಣ್ಯರೊಂದಿಗೆ ಶಾಸಕರು ಕಿಯೋನಿಕ್ಸ್ ಅಧ್ಯಕ್ಷರಾದ ಶರತ್ ಬಚ್ಚೇಗೌಡ ರವರು ಚಾಲನೆ ನೀಡಿದರು.
ನಂತರ ಸುದ್ದಿಗಾರರೊಂದಿಗೆ ಮಾತನಾಡಿ ಪೂಜೆನ ಅಗ್ರಹಾರ, ಭಕ್ತರಹಳ್ಳಿ ಗ್ರಾಮದಲ್ಲಿ ಸಾರ್ವಜನಿಕರ ಕೋರಿಕೆಯಂತೆ ಸಿಸಿ ರಸ್ತೆ, ಚರಂಡಿ ಕಾಮಗಾರಿ, ಶುದ್ಧ ಕುಡಿಯುವ ನೀರಿನ ಘಟಕ, 50ಸಾವಿರ ಸಾಮರ್ಥ್ಯದ ಓವರ್ ಹೆಡ್ ಟ್ಯಾಂಕ್, ಸಿಎಸ್ಆರ್ ಅನುದಾನದಲ್ಲಿ ಸರ್ಕಾರಿ ಶಾಲೆಯ 5 ಕೊಠಡಿಗಳ ನಿರ್ಮಾಣಕ್ಕೆ ಚಾಲನೆ ನೀಡಿದ್ದೇವೆ, ತಾಲೂಕಿನ ಅಭಿವೃದ್ಧಿಗೆ ನಮ್ಮ ಸರ್ಕಾರ ಅನುದಾನಗಳನ್ನು ನೀಡುತ್ತಿದೆ, ಹಂತ ಹಂತವಾಗಿ ಎಲ್ಲಾ ಗ್ರಾಮಗಳಲ್ಲೂ ಅಭಿವೃದ್ಧಿ ಕೆಲಸಗಳಿಗೆ ಚಾಲನೆ ನೀಡಲಾಗುವುದು, ಗುತ್ತಿಗೆದಾರರು ಗುಣಮಟ್ಟ ಕಾಯ್ದುಕೊಂಡು ವೇಗವಾಗಿ ಕೆಲಸ ಮುಗಿಸಬೇಕೆಂದು ಸೂಚನೆ ನೀಡಿದ್ದೇನೆ ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಮಾಜಿ ಸಂಸದರಾದ ಬಿ ಎನ್ ಬಚ್ಚೇಗೌಡ, ತಾಲೂಕು ಪಂಚಾಯಿತಿ ಕಾರ್ಯ ನಿರ್ವಹಣಾಧಿಕಾರಿ ನಾರಾಯಣಸ್ವಾಮಿ, ಹಾಗೂ ಹಿರಿಯ ಮುಖಂಡರು ಸೊಣ್ಣಪ್ಪ, ಹಾಗೂ ಕೆ. ಕೃಷ್ಣಮೂರ್ತಿ, ಕಾಂತರಾಜ್ , ಶೇಷಪ್ಪ, ಲಾಯರ್ ಮಂಜಣ್ಣ, ನಿರ್ಮಲ, ತ್ಯಾಗರಾಜ್ ಗೌಡ ,ಅಂಜಿನಪ್ಪ ,ವೆಂಕಟರಾಜ್, ಸೇರಿದಂತೆ ಹೋಬಳಿಯ ಎಲ್ಲಾ ಮುಖಂಡರುಗಳು, ಕಾರ್ಯಕರ್ತರು, ಗ್ರಾಮಸ್ಥರು ಪಾಲ್ಗೊಂಡಿದ್ದರು.