ಮೂಡಲಗಿ : ಆ. 5ರಂದು ಬೆಳಗ್ಗೆ 10 ಗಂಟೆಗೆ ಪಟ್ಟಣದ ಸತ್ಯಭಾಮಾ ರುಕ್ಷ್ಮಿಣಿ ಬಾಳಪ್ಪ ಹಂದಿಗುಂದ ಕಲ್ಯಾಣ ಮಂಟಪದಲ್ಲಿ ಮಹರ್ಷಿ ಶ್ರೀ ಭಗೀರಥ ಮೂರ್ತಿಯ ಅನಾವರಣ ಹಾಗೂ ಉಪ್ಪಾರ ಸಮಾಜದವರಿಂದ ಸತ್ಕಾರ ಸಮಾರಂಭ ಆಯೋಜಿಸಲಾಗಿದೆ ಎಂದು ಉಪ್ಪಾರ ಸಮಾಜದ ತಾಲೂಕಾ ಅಧ್ಯಕ್ಷ ರಾಮಣ್ಣಾ ಹಂದಿಗುಂದ ಹೇಳಿದರು.

ಸಮಾರಂಭದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಅವರು, ಹೊಸದುರ್ಗದ ಜಗದ್ಗುರು ಭಗೀರಥ ಚಿನ್ಮೂಲಾದ್ರಿ ಪೀಠದ ಪುರುಷೋತ್ತಮಾನಂದಪುರಿ ಸ್ವಾಮೀಜಿ ಸೇರಿದಂತೆ ಅನೇಕ ಸ್ವಾಮೀಜಿಗಳು ಸಾನ್ನಿಧ್ಯ ವಹಿಸುವರು. ಶಾಸಕ ಬಾಲಚಂದ್ರ ಜಾರಕಿಹೊಳಿ ಅಧ್ಯಕ್ಷತೆ ವಹಿಸುವರು. ಲೋಕೋಪಯೋಗಿ ಸಚಿವ ಸತೀಶ ಜಾರಕಿಹೊಳಿ ಉದ್ಘಾಟಿಸುವರು. ಗೋಕಾಕ ಶಾಸಕ ರಮೇಶ ಜಾರಕಿಹೊಳಿ, ಚಾಮರಾಜ ನಗರದ ಶಾಸಕ ಪುಟ್ಟರಂಗಶೆಟ್ಟಿ, ವಿಧಾನ ಪರಿಷತ್ ಸದಸ್ಯ ಲಖನ ಜಾರಕಿಹೊಳಿ, ಯುವ ಮುಖಂಡ ಸರ್ವೋತ್ತಮ ಜಾರಕಿಹೊಳಿ ಭಾಗವಹಿಸುವರು. ಸಮಾರಂಭದಲ್ಲಿ ನೂತನ ಲೋಕಸಭಾ ಸದಸ್ಯರಾದ ಜಗದೀಶ ಶೆಟ್ಟರ, ಪ್ರಿಯಾಂಕಾ ಜಾರಕಿಹೊಳಿ ಅವರನ್ನು ಸನ್ಮಾನಿಸಲಾಗುವುದು. ಸಮಾರಂಭಕ್ಕೆ ಸಮಾಜದ ಹಾಗೂ ವಿವಿಧ ಅನ್ಯ ಸಮಾಜದ ಮುಂಖಡರು, ಜಿಪಂ, ತಾಪಂ, ಪುರಸಭೆ, ಪಪಂ ಸದಸ್ಯರು ಆಗಮಿಸುವರು ಎಂದು ತಿಳಿಸಿದರು.

ನ್ಯಾಯವಾದಿ ಲಕ್ಷ್ಮಣ ಅಡಿಹುಡಿ ಮಾತನಾಡಿ ಗುಡ್ಡಮಡ್ಡಿ ವೀರಭದ್ರೇಶ್ವರ ಗುಡಿಯಿಂದ ಸಕಲ ವಾಧ್ಯ ಮೇಳದೊಂದಿಗೆ ನೂರಾರು ಮಹಿಳೆಯರ ಕುಂಭಮೇಳ ಮೂರ್ತಿಯ ಮೇರವಣಿಗೆ ಜರುವದು ನಂತರ ಮೂರ್ತಿ ಪ್ರತಿಷ್ಠಾಪಣೆ ಜರುಗಿ 11 ಗಂಟೆಗೆ ಸಾವಿರಾರು ಜನರ ಸಮ್ಮುಖದಲ್ಲಿ ಕಾರ್ಯಕ್ರಮ ಜರುಗಲಿದೆ ಎಂದು ತಿಳಿಸಿದ್ದಾರೆ.

ಪತ್ರಿಕಾಗೋಷ್ಠಿಯಲ್ಲಿ ಈಶ್ವರ ಕಂಕಣವಾಡಿ, ಮಹಾದೇವ ಕಂಕಣವಾಡಿ, ಸುಭಾಸ ಗುಡ್ಯಾಗೋಳ, ಶಿವಪ್ಪ ಅಟ್ಟಿಮಟ್ಟಿ, ಅಜ್ಜಪ್ಪ ಕಂಕಣವಾಡಿ, ಮಹಾದೇವ ಕರಗಣ್ಣಿ ಬರಮಪ್ಪ ಕಪ್ಪಲಗುದ್ದಿ,ಅಲ್ಲಪ್ಪ ಕಂಕಣವಾಡಿ, ಯಲ್ಲಪ್ಪ ಖಾನಟ್ಟಿ ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *