





ಸಕ್ಕರೆ ನಾಡು ಮಂಡ್ಯದಲ್ಲಿ ಬಿಜೆಪಿ ಪಾದಯಾತ್ರೆಗೆ ಅಭೂತಪೂರ್ವ ಸ್ವಾಗತ :
ರೈತ ಮೋರ್ಚಾ ವತಿಯಿಂದ ಎತ್ತಿನ ಬಂಡಿ ಯಾತ್ರೆ :
ಮಂಡ್ಯ : ರಾಜ್ಯ ಕಾಂಗ್ರೆಸ್ ಸರ್ಕಾರದ ಮೂಡಾ ಹಗರಣದ ಭ್ರಷ್ಟಾಚಾರದ ವಿರುದ್ಧ ರಾಜ್ಯ ಬಿಜೆಪಿ ವತಿಯಿಂದ, ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ನೇತೃತ್ವದಲ್ಲಿ ನಡೆಯುತ್ತಿರುವ ಮೈಸೂರು ಚಲೋ ಪಾದಯಾತ್ರೆಯನ್ನು ಬುಧವಾರ ಸಕ್ಕರೆ ನಾಡು ಮಂಡ್ಯದ ಜನತೆ ಅಭೂತಪೂರ್ವವಾಗಿ ಸ್ವಾಗತಿಸಿದರು.
ರೈತ ಮೋರ್ಚಾ ವತಿಯಿಂದ ಆಯೋಜಿಸಿದ್ದ ಎತ್ತಿನಬಂಡಿ ಯಾತ್ರೆಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ಮಾಜಿ ಸಚಿವ ಅಶ್ವತ್ಥ ನಾರಾಯಣ, ಸಂಸದ, ರೈತ ಮೋರ್ಚಾ ರಾಷ್ಟ್ರೀಯ ಅಧ್ಯಕ್ಷ ರಾಜಕುಮಾರ್ ಚಹಾರ್, ರೈತ ಮೋರ್ಚಾ ರಾಜ್ಯಾಧ್ಯಕ್ಷ ಎ.ಎಸ್. ಪಾಟೀಲ್ ನಡಹಳ್ಳಿ, ಉಪಾಧ್ಯಕ್ಷ ರುದ್ರೇಶ್, ರೈತ ಮೋರ್ಚಾ ರಾಜ್ಯ ಕಾರ್ಯದರ್ಶಿ ಸತೀಶ್ ಕಡತನಮಲೆ, ಮಂಡ್ಯ ಜಿಲ್ಲಾ ರೈತ ಮೋರ್ಚಾ ಅಧ್ಯಕ್ಷ ಇಂದ್ರೇಶ್, ಬೆಂ.ಉತ್ತರ ಜಿಲ್ಲಾ ರೈತ ಮೋರ್ಚಾ ಅಧ್ಯಕ್ಷ ಜಿ.ಜೆ.ಮೂರ್ತಿ ಸೇರಿದಂತೆ ಹಲವು ಗಣ್ಯರು ಪಾಲ್ಗೊಂಡು ಪಾದಯಾತ್ರೆಗೆ ವಿಶೇಷತೆಯ ಮೆರಗು ನೀಡಿದರು.
ಪಾದಯಾತ್ರೆ ಯನ್ನು ಮಂಡ್ಯದ ಸಾವಿರಾರು ಮಾತೆಯರು ಪೂರ್ಣಕುಂಭದೊಂದಿಗೆ ಸ್ವಾಗತಿಸಿದರು. ಡೊಳ್ಳು ಕುಣಿತ, ಪಟದ ಕುಣಿತ, ವೀರಗಾಸೆ ಮುಂತಾದ ಜನಪದ ಕಲಾ ತಂಡಗಳ ಕಲಾ ಪ್ರದರ್ಶನದ ನಡುವೆ ಪಾದಯಾತ್ರೆ ಸಾಗಿತು.
ಪಾದಯಾತ್ರೆ ಕುರಿತು ರೈತ ಮೋರ್ಚಾ ರಾಜ್ಯ ಕಾರ್ಯದರ್ಶಿ ಸತೀಶ್ ಕಡತನಮಲೆ ಮಾಹಿತಿ ನೀಡುತ್ತಾ ಮಾತನಾಡಿ ‘ಇದು ರಾಜ್ಯ ಕಾಂಗ್ರೆಸ್ ನ ಭ್ರಷ್ಟ ಆಡಳಿತ, ಮೂಡಾ ಹಗರಣದ ವಿರುದ್ಧ ನಡೆಯುತ್ತಿರುವ ಐತಿಹಾಸಿಕ ಪಾದಯಾತ್ರೆ ಯಾಗಿದ್ದು, ರಾಜ್ಯದಲ್ಲಿ ಹೊಸ ಸಂಚಲನ ಸೃಷ್ಟಿಸಿದೆ. ಪಾದಯಾತ್ರೆ ಸಾಗುತ್ತಿರುವ ಪ್ರತಿ ಹಳ್ಳಿ, ಪಟ್ಟಣ, ನಗರಗಳಲ್ಲಿ ಪಾದಯಾತ್ರೆಯನ್ನು ಜನತೆ ಆತ್ಮೀಯತೆ, ಗೌರವ ಪೂರ್ವಕವಾಗಿ ಸ್ವಾಗತಿಸುತ್ತಿದ್ದಾರೆ. ಪಾದಯಾತ್ರೆ ಮೈಸೂರು ತಲುಪುವ ವೇಳೆಗೆ ರಾಜ್ಯ ಕಾಂಗ್ರೆಸ್ ಸರ್ಕಾರದಲ್ಲಿ ಬಹುದೊಡ್ಡ ಆಘಾತಕಾರಿ ಬೆಳವಣಿಗೆ ಸಂಭವಿಸಲಿದೆ, ಮುಖ್ಯಮಂತ್ರಿಗಳು ಸೇರಿದಂತೆ ಹಲವು ಸಚಿವರ ತಲೆದಂಡವಾಗುವುದು ನಿಶ್ಚಿತ, ಪಾದಯಾತ್ರೆ ಮೂಲಕ ರಾಜ್ಯ ಕಾಂಗ್ರೆಸ್ ಸರ್ಕಾರದ ಹಗರಣಗಳ ವಿರುದ್ಧ ಬಹುದೊಡ್ಡ ಜನಾಂದೋಲನ ಹುಟ್ಟು ಹಾಕಿರುವ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ರವರಿಗೆ ಮತ್ತು ಅವರಿಗೆ ಸಾಥ್ ನೀಡುವ ಮೂಲಕ ಪಾದಯಾತ್ರೆಯ ಯಶಸ್ವಿಗೆ ಸಹಕಾರ ನೀಡುತ್ತಿರುವ ಬಿಜೆಪಿ ಶಾಸಕರು, ಮಾಜಿ ಸಚಿವರು, ರೈತ ಮೋರ್ಚಾ ಸೇರಿದಂತೆ ವಿವಿಧ ಮೋರ್ಚಾಗಳ ಪದಾಧಿಕಾರಿಗಳು, ಬಿಜೆಪಿ ಮುಖಂಡರು ಮತ್ತು ಕಾರ್ಯಕರ್ತರಿಗೆ ಈ ಸಂದರ್ಭದಲ್ಲಿ ಅನಂತ ಧನ್ಯವಾದಗಳನ್ನು ತಿಳಿಸಲಿಚ್ಛಿಸುತ್ತೇನೆ ಎಂದರು.
ಇದೇ ವೇಳೆ ರೈತ ಮೋರ್ಚಾ ವತಿಯಿಂದ ಸತೀಶ್ ಕಡತನಮಲೆ ರವರಿಗೆ ಗೌರವಿಸಿ ಸನ್ಮಾನಿಸಲಾಯಿತು
ಸುದ್ದಿ ಹಾಗೂ ಜಾಹಿರಾತುಗಾಗಿ ಸಂಪರ್ಕಿಸಿ
R ಹನುಮಂತು. 9845085793. 7349337989