
‘ಸಂಗಮ’ ಶೀರ್ಷಿಕೆ ಅಡಿಯಲ್ಲಿ ಮಕ್ಕಳಿಗೆ ನಾಲ್ಕು ದಿನಗಳ ಸಾಂಸ್ಕೃತಿಕ ಸ್ಪರ್ದೆ :
ಬ್ಯಾಟರಾಯನಪುರ : ಬ್ಯಾಟರಾಯನಪುರ ಕ್ಷೇತ್ರದ ರಾಚೇನಹಳ್ಳಿ ಕೆರೆಯ ಸಮೀಪ ಇರುವ ಮಾದರಿ ಪಾರಂಪರಿಕ ಗ್ರಾಮ ‘ರಂಗೋಲಿ ಗಾರ್ಡನ್ಸ್’ ನಲ್ಲಿ ಸ್ವಾತಂತ್ರ್ಯೋತ್ಸವ ಸಪ್ತಾಹದ ಅಂಗವಾಗಿ ಆ.15 ರಿಂದ 18ರ ವರೆಗೆ ‘ಸಂಗಮ’ ಶೀರ್ಷಿಕೆ ಅಡಿಯಲ್ಲಿ ಮಕ್ಕಳಿಗೆ ನಾಲ್ಕು ದಿನಗಳ ಸಾಂಸ್ಕೃತಿಕ ಸ್ಪರ್ಧೆ ಏರ್ಪಡಿಸಲಾಗಿದೆ ಎಂದು ‘ರಂಗೋಲಿ ಗಾರ್ಡನ್ಸ್ ‘ನ ಸಿಇಒ ವಿ.ಗಣೇಶ್ ತಿಳಿಸಿದರು.
ಶನಿವಾರ ಏರ್ಪಡಿಸಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ‘ಮಕ್ಕಳಲ್ಲಿನ ಸಾಂಸ್ಕೃತಿಕ ಪ್ರತಿಭೆಯನ್ನು ಪ್ರೋತ್ಸಾಹಿಸುವ ನಿಟ್ಟಿನಲ್ಲಿ ‘ಸಂಗಮ’ ಕಾರ್ಯಕ್ರಮ ಏರ್ಪಡಿಸಲಾಗಿದ್ದು, ಇದರಲ್ಲಿ ಮಕ್ಕಳಿಂದ ನಿರ್ಮಾಣಗೊಂಡ ಪಾರಂಪರಿಕ ಮನೆಗಳ ಮಾದರಿಗಳ ಪ್ರದರ್ಶನ, ಸೌಂದರ್ಯ ಮತ್ತು ಸಾಂಸ್ಕೃತಿಕ ಕಲೆಗಳ ಪ್ರದರ್ಶನ, ರುಚಿಕರ ಪಾರಂಪರಿಕ ತಿಂಡಿಗಳ ತಯಾರಿಕೆ, ಕರಕುಶಲ ವಸ್ತುಗಳ ಪ್ರದರ್ಶನ, ಕಾರ್ಯಾಗಾರಗಳು, ಸಂಗೀತ ಮತ್ತು ನೃತ್ಯ ಪ್ರದರ್ಶನ ಸೇರಿದಂತೆ ಮಕ್ಕಳಲ್ಲಿ ಹುದುಗಿರುವ ಹಲವು ಸಾಂಸ್ಕೃತಿಕ ಪ್ರತಿಭೆ ಮತ್ತು ಕಲೆಗಳನ್ನು ಸ್ಪರ್ಧಾತ್ಮಕ ರೀತಿಯಲ್ಲಿ ಅನಾವರಣಗೊಳಿಸಿ ಪ್ರೋತ್ಸಾಹಿಸು ವುದು ಸಂಗಮ ಕಾರ್ಯಕ್ರಮದ ಉದ್ದೇಶವಾಗಿದೆ.
ಪ್ರತಿದಿನ ಅತ್ಯುತ್ತಮ 12 ಸ್ಪರ್ಧಿಗಳಿಗೆ ಮಾತ್ರ ತಮ್ಮ ಕಲಾ ಪ್ರದರ್ಶನಕ್ಕೆ ಅವಕಾಶ ನೀಡಲಾಗು ವುದು. ಖ್ಯಾತ ಚಿತ್ರನಟರು, ಕಲಾವಿಧರು ಈ ಸ್ಪರ್ಧೆಯ ತೀರ್ಪುಗಾರರಾಗಿ ಕಾರ್ಯನಿರ್ವ ಹಿಸಲಿದ್ದಾರೆ. ಅಂತಿಮ ದಿನ ನಡೆಯುವ ಸಮಾರೋಪ ಸಮಾರಂಭದಲ್ಲಿ ವಿಜೇತ ಮಕ್ಕಳಿಗೆ ಬಹುಮಾನ ವಿತರಿಸಲಾಗುವುದು.
ಪ್ರತಿದಿನ 2 ಸಾವಿರ ಅತಿಥಿ ಪ್ರೇಕ್ಷಕರಿಗೆ ಮಾತ್ರ ಭಾಗವಹಿಸುವ ಅವಕಾಶ ಕಲ್ಪಿಸಲಾಗಿದೆ.
ಈ ಕುರಿತು ಈಗಾಗಲೇ ಆನ್ ಲೈನ್ ಮೂಲಕ ರಿಜಿಸ್ಟ್ರೇಷನ್ ಪ್ರಕ್ರಿಯೆ ಆರಂಭಿಸಲಾಗಿದೆ ಎಂದು ಕಾರ್ಯಕ್ರಮ ಕುರಿತು ಮಾಹಿತಿ ನೀಡಿದರು.
ಹೆಚ್ಚಿನ ಮಾಹಿತಿ ಮತ್ತು ಮಳಿಗೆಗಳಿಗಾಗಿ 90366 65665 ಮೊಬೈಲ್ ಸಂಖ್ಯೆಯನ್ನು ಸಂಪರ್ಕಿಸಬಹುದು.
ಸುದ್ದಿ ಹಾಗೂ ಜಾಹೀರಾತುಗಾಗಿ ಸಂಪರ್ಕಿಸಿ
9845085793
7349337989
9035282296