





ಯಲಹಂಕ : ಕ್ಷೇತ್ರದ ಸಿಂಗನಾಯಕನಹಳ್ಳಿ ಗ್ರಾಮದ ಸನಾತನನಗರ ಮತ್ತು ಅರುಣೋದಯ ಬಡಾವಣೆಯಲ್ಲಿ 2 ಕೋಟಿ ರು.ಅಂದಾಜು ವೆಚ್ಚದ ಕಾಂಕ್ರೀಟ್ ರಸ್ತೆ ಕಾಮಗಾರಿಗೆ ಶಾಸಕ ಎಸ್ ಆರ್ ವಿಶ್ವನಾಥ್ ಶುಕ್ರವಾರ ಚಾಲನೆ ನೀಡಿದರು.
ನಂತರ ಅವರು ಮಾತನಾಡಿ ರಾಜ್ಯ ಸರ್ಕಾರದಿಂದ ಬಿಡಿಗಾಸು ಅನುದಾನ ದೊರೆಯುತ್ತಿಲ್ಲ, ಇಂತಹ ಸಂದಿಗ್ಧ ಪರಿಸ್ಥಿತಿಯಲ್ಲಿ ಕ್ಷೇತ್ರಾಭಿವೃದ್ಧಿ ಕಾರ್ಯಗಳ ಬಗ್ಗೆ ಜನಸಾಮಾನ್ಯರ ಪ್ರಶ್ನೆಗಳಿಗೆ ಉತ್ತರಿಸುವುದು ಕಷ್ಟವಾಗಿದೆ. ಹಾಗಂತ ಅಭಿವೃದ್ಧಿ ಕಾರ್ಯಗಳನ್ನು ಮಾಡದೆ ಸುಮ್ಮನೆ ಕೂರುವ ಜಾಯಮಾನ ನನ್ನದಲ್ಲ ಎಂದು ಸರ್ಕಾರದ ನಡೆಯ ಬಗ್ಗೆ ಬೇಸರ ವ್ಯಕ್ತಪಡಿಸಿದ ಶಾಸಕರು ಸಿಂಗನಾಯಕನಹಳ್ಳಿ ಗ್ರಾಮದ ಸನಾತನನಗರ ಮತ್ತು ಅರುಣೋದಯ ಬಡಾವಣೆಯಲ್ಲಿ 2 ಕೋಟಿ ರು.ಅಂದಾಜು ವೆಚ್ಚದ ಕಾಂಕ್ರೀಟ್ ರಸ್ತೆ ಕಾಮಗಾರಿಗೆ ಚಾಲನೆ ನೀಡಿದ್ದು, ಶೀಘ್ರಗತಿಯಲ್ಲಿ ಕಾಮಗಾರಿ ಪೂರ್ಣಗೊಳಿಸಲು ಸೂಚಿಸಲಾಗಿದೆ ಎಂದರು.
ಇದೇ ಸಂದರ್ಭದಲ್ಲಿ ಗ್ರಾ.ಪಂ.ಅಧ್ಯಕ್ಷೆ ಅಮರಾವತಮ್ಮ, ಮಾಜಿ ಅಧ್ಯಕ್ಷ ಚಂದ್ರಶೇಖರ್, ಮಾಜಿ ಉಪಾಧ್ಯಕ್ಷ ಎಸ್.ಜಿ.ಪ್ರಶಾಂತ್ ರೆಡ್ಡಿ, ಮಾಜಿ ಜಿ.ಪಂ.ಅಧ್ಯಕ್ಷ ಚೊಕ್ಕನಹಳ್ಳಿ ವೆಂಕಟೇಶ್, ರಾಜಾನುಕುಂಟೆ ಗ್ರಾ.ಪಂ.ಮಾಜಿ ಅಧ್ಯಕ್ಷ ಎಸ್.ಜಿ.ನರಸಿಂಹಮೂರ್ತಿ(ಎಸ್ಟಿಡಿ ಮೂರ್ತಿ), ಆರ್.ಎಸ್.ಎಸ್.ಎನ್. ಬ್ಯಾಂಕ್ ನಿರ್ದೇಶಕ ಮಂಜುನಾಥ ರೆಡ್ಡಿ, ಗ್ರಾ.ಪಂ.ಸದಸ್ಯರಾದ ಪದ್ಮಶ್ರೀ ನಾಗರಾಜರೆಡ್ಡಿ, ಕೆ.ಬಾಬು, ಮಲ್ಲೇಶ್, ಜೀವಿತ ಮುನಿಕೃಷ್ಣ, ಹರೀಶ್, ನಂಜೇಗೌಡ, ಕೆಂಪೇಗೌಡ, ಬಿಜೆಪಿ ಮುಖಂಡ ಸತೀಶ್ ರೆಡ್ಡಿ ಸೇರಿದಂತೆ ಇನ್ನಿತರರಿದ್ದರು.
ಸುದ್ದಿ ಹಾಗೂ ಜಾಹಿರಾತು ಗಾಗಿ ಸಂಪರ್ಕಿಸಿ
ಆರ್ ಹನುಮಂತು
9845085793
7349337989