ಹುಬ್ಬಳ್ಳಿ :- ಇಂದು ದೇಶದ 44 ಕಡೆಗಳಲ್ಲಿ ರೋಜಗಾರ್ ಮೇಳ ನಡೆಯುತ್ತಿದೆ. ವಿವಿಧ ಇಲಾಖೆಗಳಲ್ಲಿ ಹೊಸದಾಗಿ ನೇಮಕಗೊಂಡ ಸುಮಾರು 70 ಸಾವಿರಕ್ಕೂ ಅಧಿಕ ಜನರಿಗೆ ಉದ್ಯೋಗ ಪತ್ರಗಳನ್ನು ವಿತರಿಸಲಾಗುತ್ತಿದೆ. ದೇಶಕ್ಕಾಗಿ ನಾವು ದುಡಿಯುತ್ತಿದ್ದೇವೆ ಎಂಬ ಭಾವನೆ ಕೆಲಸ ಮಾಡುವವರಲ್ಲಿ ಮೂಡಬೇಕು. ಎಂದು ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ಖಾತೆ ರಾಜ್ಯ ಸಚಿವರಾದ ಶೋಭಾ ಕರಂದ್ಲಾಜೆ ಹೇಳಿದರು.
ಹುಬ್ಬಳ್ಳಿ ವಿದ್ಯಾನಗರ ಬಿವಿಬಿ ಇಂಜಿನಿಯರಿಂಗ್ ಕಾಲೇಜಿನ ಬಯೋಟೆಕ್ನಾಲಜಿ ಸಭಾಂಗಣದಲ್ಲಿ ಆದಾಯ ತೆರಿಗೆ ಇಲಾಖೆ, ರೈಲ್ವೆ ಇಲಾಖೆ, ಅಂಚೆ ಇಲಾಖೆ ಸೇರಿದಂತೆ ವಿವಿಧ ಇಲಾಖೆಗಳ ಸಹಯೋಗದಲ್ಲಿ ಆಯೋಜಿಸಿದ್ದ ಸರ್ಕಾರಿ ಉದ್ಯೋಗಗಳಲ್ಲಿ ಹೊಸದಾಗಿ ನೇಮಕಗೊಂಡವರಿಗೆ ನೇಮಕಾತಿ ಪತ್ರಗಳ ವಿತರಣೆಯ 7 ನೇ ರೋಜಗಾರ್ ಮೇಳವನ್ನು ದೀಪ ಬೆಳಗಿಸುವುದರ ಮೂಲಕ ಉದ್ಘಾಟಿಸಿ ಮಾತನಾಡಿದ ಅವರು ದೇಶದ ವಿಕಾಸ, ಬದಲಾವಣೆಗೆ ಕೆಲಸ ಮಾಡುತ್ತಿದ್ದೇವೆ ಎನ್ನುವ ಹೆಮ್ಮೆ ಅವರಲ್ಲಿ ಮೂಡಬೇಕು. ದೇಶಕ್ಕಾಗಿ ನಿಸ್ವಾರ್ಥ, ಪ್ರಾಮಾಣಿಕವಾಗಿ ಸೇವೆ ಸಲ್ಲಿಸಬೇಕು.19 ವರ್ಷದವರು ಸಹ ಉದ್ಯೋಗ ಪಡೆದುಕೊಳ್ಳುತ್ತಿದ್ದಾರೆ. ಹೀಗಾಗಿ ಅವರು 40 ವರ್ಷಕ್ಕೂ ಅಧಿಕ ವರ್ಷಗಳ ಕಾಲ ಸರ್ಕಾರಿ ಸೇವೆ ಸಲ್ಲಿಸಲಿದ್ದಾರೆ. ಎಲ್ಲರೂ ಒಟ್ಟಿಗೆ ಕೆಲಸ ಮಾಡಬೇಕು. ಅಭಿವೃದ್ಧಿಯ ಕಾರ್ಯಗಳಿಗೆ ಕೈ ಜೋಡಿಸಬೇಕು. ಭಾರತ ಇಂದು ಆಹಾರದಲ್ಲಿ ಸ್ವಾವಲಂಬನೆ ಸಾಧಿಸಿದೆ. ದೇಶದ 147 ಕೋಟಿ ಜನರಿಗೆ ಆಹಾರ ಪೂರೈಕೆ ಮಾಡುತ್ತಿರುವ ರೈತರ ಬಗ್ಗೆ ಹೆಮ್ಮೆಯಿದೆ. ಹಣ್ಣು, ತರಕಾರಿ, ಆಹಾರ ಪದಾರ್ಥಗಳನ್ನು ಬೇರೆ ದೇಶಗಳಿಗೆ ರಫ್ತು ಮಾಡಲಾಗುತ್ತಿದೆ. ನಮ್ಮ ದೇಶದ ಭವಿಷ್ಯವನ್ನು ಉತ್ತಮವಾಗಿ ರೂಪಿಸಿಕೊಳ್ಳಬೇಕಿದೆ. ಮೊಬೈಲ್ ಉತ್ಪಾದನೆಯಲ್ಲಿ ಭಾರತ ಪ್ರಪಂಚದಲ್ಲಿ 2 ನೇ ಸ್ಥಾನದಲ್ಲಿದ್ದು, ಆಟೋ ಮೊಬೈಲ್ ಕ್ಷೇತ್ರದಲ್ಲಿ 3 ನೇ ಸ್ಥಾನವನ್ನು ಹೊಂದಿದೆ. ಮೇಕ್ ಇನ್ ಇಂಡಿಯಾ, ಮೇಡ ಇನ್ ಇಂಡಿಯಾ ಮೂಲಕ ಸ್ವದೇಶ ಉತ್ಪಾದನೆಗೆ ಹೆಚ್ಚಿನ ಪ್ರೋತ್ಸಾಹ ದೊರೆತಿದೆ. ಖಾದ್ಯ ತೈಲ, ಸೈನಿಕ ವಸ್ತುಗಳು, ರಸಗೊಬ್ಬರ, ಪೆಟ್ರೋಲಿಯಂ ಸೇರಿದಂತೆ ಹಲವು ಕ್ಷೇತ್ರಗಳಲ್ಲಿ ಸ್ವಾವಲಂಬನೆ ಸಾಧಿಸಬೇಕಿದೆ. ದೇಶದ ರೈಲು ನಿಲ್ದಾಣಗಳು ವಿಮಾನ ನಿಲ್ದಾಣಗಳಂತೆ ಅಭಿವೃದ್ಧಿ ಹೊಂದಿವೆ. ರೈಲ್ವೆ, ವಿಮಾನಯಾನ, ಅಂಚೆ ಇಲಾಖೆ ಸೇರಿದಂತೆ ವಿವಿಧ ಇಲಾಖೆಗಳು ಅಭಿವೃದ್ಧಿಯಾಗುತ್ತಿವೆ. ಮೋದಿ ಅವರ ಸಂಕಲ್ಪದಂತೆ ಮುಂದಿನ 25 ವರ್ಷಗಳಲ್ಲಿ ಭಾರತ ಪ್ರಪಂಚದಲ್ಲಿ ಮೊದಲ ಸ್ಥಾನಕ್ಕೆ ಬರಬೇಕು. ಯುವ ಜನಾಂಗದ ಮೇಲೆ ಬಹಳಷ್ಟು ನಂಬಿಕೆಯಿದೆ. ಅದನ್ನು ಉಳಿಸಿಕೊಳ್ಳುವಲ್ಲಿ ಅವರು ಗಮನಹರಿಸಬೇಕು. ನೀವು ಬೆಳೆಯಿರಿ, ನೀವು ಸೇವೆ ಸಲ್ಲಿಸುವ ಇಲಾಖೆಯನ್ನು ಬೆಳೆಸಿರಿ. ಸೇವೆಗೆ ಸೇರುವ ಇಲಾಖೆಗಳಲ್ಲಿ ಪ್ರಾಮಾಣಿಕವಾಗಿ ಕರ್ತವ್ಯ ನಿರ್ವಹಿಸಿ. ದೇಶದ ಸರ್ವಾಂಗೀಣ ಅಭಿವೃದ್ಧಿಗೆ ಜೊತೆಜೊತೆಯಾಗಿ ಕಾರ್ಯನಿರ್ವಹಿಸೋಣ. ನಿಮ್ಮ ಮುಂದಿನ ಭವಿಷ್ಯ ಉಜ್ವಲವಾಗಿರಲಿ ಎಂದು ಹಾರೈಸಿದರು.
ಈ ಸಂದರ್ಭದಲ್ಲಿ ಆದಾಯ ತೆರಿಗೆ ಇಲಾಖೆ, ರೈಲ್ವೆ ಇಲಾಖೆ, ಅಂಚೆ ಇಲಾಖೆ, ಭಾರತೀಯ ಜೀವವಿಮಾ ನಿಗಮ (ಎಲ್.ಐ.ಸಿ), ಕರ್ನಾಟಕ ವಿಕಾಸ ಗ್ರಾಮೀಣ ಬ್ಯಾಂಕ್, ಐಐಟಿ ಸೇರಿದಂತೆ ವಿವಿಧ ಇಲಾಖೆಗಳಲ್ಲಿ ಹೊಸದಾಗಿ ನೇಮಕಾತಿ ಹೊಂದಿದ 25 ಅಭ್ಯರ್ಥಿಗಳಿಗೆ ಸಾಂಕೇತಿಕವಾಗಿ ನೇಮಕಾತಿ ಪತ್ರಗಳನ್ನು ವಿತರಿಸಲಾಯಿತು.
ಆದಾಯ ತೆರಿಗೆ ಇಲಾಖೆ 1, ರೈಲ್ವೆ ಇಲಾಖೆ 52, ಎಲ್.ಐ.ಸಿ 50, ಐಐಟಿ 18, ಅಂಚೆ ಇಲಾಖೆ 17 , ಕರ್ನಾಟಕ ವಿಕಾಸ ಗ್ರಾಮೀಣ ಬ್ಯಾಂಕ್ 10 ಒಟ್ಟಾರೆ 148 ಜನರಿಗೆ ಕಾರ್ಯಕ್ರಮದಲ್ಲಿ ನೇಮಕಾತಿ ಪತ್ರಗಳನ್ನು ನೀಡಲಾಯಿತು.
ಮುಖ್ಯ ಆದಾಯ ತೆರಿಗೆ ಆಯುಕ್ತರಾದ ಮನೋಜ ಜೋಶಿ, ಪ್ರಧಾನ ಮುಖ್ಯ ಆಯುಕ್ತೆ ಶ್ಯಾಮಾ ಬನಸಿಯಾ, ಪ್ರಧಾನ ಆದಾಯ ತೆರಿಗೆ ಆಯುಕ್ತರಾದ ಅಸಿತ ಸಿಂಗ್, ಆದಾಯ ತೆರಿಗೆ ಆಯುಕ್ತರಾದ ಎಂ.ಕೆ.ಬಿಜು, ಕೇಶವ ದೀಕ್ಷಿತ್, ದೀಪಾಲಿ, ವಿಜಯಾ, ರಾಜಕುಮಾರ ಕರಣ, ಮನೋಜ ಬೆನಗಿ ಸೇರಿದಂತೆ ಇತರ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.

7ನೇ ರೋಜಗಾರ್ ಮೇಳಕ್ಕೆ ಸಚಿವೆ ಶೋಭಾ ಕರಂದ್ಲಾಜೆ ಚಾಲನೆ.


ಹುಬ್ಬಳ್ಳಿ :- ಇಂದು ದೇಶದ 44 ಕಡೆಗಳಲ್ಲಿ ರೋಜಗಾರ್ ಮೇಳ ನಡೆಯುತ್ತಿದೆ. ವಿವಿಧ ಇಲಾಖೆಗಳಲ್ಲಿ ಹೊಸದಾಗಿ ನೇಮಕಗೊಂಡ ಸುಮಾರು 70 ಸಾವಿರಕ್ಕೂ ಅಧಿಕ ಜನರಿಗೆ ಉದ್ಯೋಗ ಪತ್ರಗಳನ್ನು ವಿತರಿಸಲಾಗುತ್ತಿದೆ. ದೇಶಕ್ಕಾಗಿ ನಾವು ದುಡಿಯುತ್ತಿದ್ದೇವೆ ಎಂಬ ಭಾವನೆ ಕೆಲಸ ಮಾಡುವವರಲ್ಲಿ ಮೂಡಬೇಕು. ಎಂದು ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ಖಾತೆ ರಾಜ್ಯ ಸಚಿವರಾದ ಶೋಭಾ ಕರಂದ್ಲಾಜೆ ಹೇಳಿದರು.
ಹುಬ್ಬಳ್ಳಿ ವಿದ್ಯಾನಗರ ಬಿವಿಬಿ ಇಂಜಿನಿಯರಿಂಗ್ ಕಾಲೇಜಿನ ಬಯೋಟೆಕ್ನಾಲಜಿ ಸಭಾಂಗಣದಲ್ಲಿ ಆದಾಯ ತೆರಿಗೆ ಇಲಾಖೆ, ರೈಲ್ವೆ ಇಲಾಖೆ, ಅಂಚೆ ಇಲಾಖೆ ಸೇರಿದಂತೆ ವಿವಿಧ ಇಲಾಖೆಗಳ ಸಹಯೋಗದಲ್ಲಿ ಆಯೋಜಿಸಿದ್ದ ಸರ್ಕಾರಿ ಉದ್ಯೋಗಗಳಲ್ಲಿ ಹೊಸದಾಗಿ ನೇಮಕಗೊಂಡವರಿಗೆ ನೇಮಕಾತಿ ಪತ್ರಗಳ ವಿತರಣೆಯ 7 ನೇ ರೋಜಗಾರ್ ಮೇಳವನ್ನು ದೀಪ ಬೆಳಗಿಸುವುದರ ಮೂಲಕ ಉದ್ಘಾಟಿಸಿ ಮಾತನಾಡಿದ ಅವರು ದೇಶದ ವಿಕಾಸ, ಬದಲಾವಣೆಗೆ ಕೆಲಸ ಮಾಡುತ್ತಿದ್ದೇವೆ ಎನ್ನುವ ಹೆಮ್ಮೆ ಅವರಲ್ಲಿ ಮೂಡಬೇಕು. ದೇಶಕ್ಕಾಗಿ ನಿಸ್ವಾರ್ಥ, ಪ್ರಾಮಾಣಿಕವಾಗಿ ಸೇವೆ ಸಲ್ಲಿಸಬೇಕು.19 ವರ್ಷದವರು ಸಹ ಉದ್ಯೋಗ ಪಡೆದುಕೊಳ್ಳುತ್ತಿದ್ದಾರೆ. ಹೀಗಾಗಿ ಅವರು 40 ವರ್ಷಕ್ಕೂ ಅಧಿಕ ವರ್ಷಗಳ ಕಾಲ ಸರ್ಕಾರಿ ಸೇವೆ ಸಲ್ಲಿಸಲಿದ್ದಾರೆ. ಎಲ್ಲರೂ ಒಟ್ಟಿಗೆ ಕೆಲಸ ಮಾಡಬೇಕು. ಅಭಿವೃದ್ಧಿಯ ಕಾರ್ಯಗಳಿಗೆ ಕೈ ಜೋಡಿಸಬೇಕು. ಭಾರತ ಇಂದು ಆಹಾರದಲ್ಲಿ ಸ್ವಾವಲಂಬನೆ ಸಾಧಿಸಿದೆ. ದೇಶದ 147 ಕೋಟಿ ಜನರಿಗೆ ಆಹಾರ ಪೂರೈಕೆ ಮಾಡುತ್ತಿರುವ ರೈತರ ಬಗ್ಗೆ ಹೆಮ್ಮೆಯಿದೆ. ಹಣ್ಣು, ತರಕಾರಿ, ಆಹಾರ ಪದಾರ್ಥಗಳನ್ನು ಬೇರೆ ದೇಶಗಳಿಗೆ ರಫ್ತು ಮಾಡಲಾಗುತ್ತಿದೆ. ನಮ್ಮ ದೇಶದ ಭವಿಷ್ಯವನ್ನು ಉತ್ತಮವಾಗಿ ರೂಪಿಸಿಕೊಳ್ಳಬೇಕಿದೆ. ಮೊಬೈಲ್ ಉತ್ಪಾದನೆಯಲ್ಲಿ ಭಾರತ ಪ್ರಪಂಚದಲ್ಲಿ 2 ನೇ ಸ್ಥಾನದಲ್ಲಿದ್ದು, ಆಟೋ ಮೊಬೈಲ್ ಕ್ಷೇತ್ರದಲ್ಲಿ 3 ನೇ ಸ್ಥಾನವನ್ನು ಹೊಂದಿದೆ. ಮೇಕ್ ಇನ್ ಇಂಡಿಯಾ, ಮೇಡ ಇನ್ ಇಂಡಿಯಾ ಮೂಲಕ ಸ್ವದೇಶ ಉತ್ಪಾದನೆಗೆ ಹೆಚ್ಚಿನ ಪ್ರೋತ್ಸಾಹ ದೊರೆತಿದೆ. ಖಾದ್ಯ ತೈಲ, ಸೈನಿಕ ವಸ್ತುಗಳು, ರಸಗೊಬ್ಬರ, ಪೆಟ್ರೋಲಿಯಂ ಸೇರಿದಂತೆ ಹಲವು ಕ್ಷೇತ್ರಗಳಲ್ಲಿ ಸ್ವಾವಲಂಬನೆ ಸಾಧಿಸಬೇಕಿದೆ. ದೇಶದ ರೈಲು ನಿಲ್ದಾಣಗಳು ವಿಮಾನ ನಿಲ್ದಾಣಗಳಂತೆ ಅಭಿವೃದ್ಧಿ ಹೊಂದಿವೆ. ರೈಲ್ವೆ, ವಿಮಾನಯಾನ, ಅಂಚೆ ಇಲಾಖೆ ಸೇರಿದಂತೆ ವಿವಿಧ ಇಲಾಖೆಗಳು ಅಭಿವೃದ್ಧಿಯಾಗುತ್ತಿವೆ. ಮೋದಿ ಅವರ ಸಂಕಲ್ಪದಂತೆ ಮುಂದಿನ 25 ವರ್ಷಗಳಲ್ಲಿ ಭಾರತ ಪ್ರಪಂಚದಲ್ಲಿ ಮೊದಲ ಸ್ಥಾನಕ್ಕೆ ಬರಬೇಕು. ಯುವ ಜನಾಂಗದ ಮೇಲೆ ಬಹಳಷ್ಟು ನಂಬಿಕೆಯಿದೆ. ಅದನ್ನು ಉಳಿಸಿಕೊಳ್ಳುವಲ್ಲಿ ಅವರು ಗಮನಹರಿಸಬೇಕು. ನೀವು ಬೆಳೆಯಿರಿ, ನೀವು ಸೇವೆ ಸಲ್ಲಿಸುವ ಇಲಾಖೆಯನ್ನು ಬೆಳೆಸಿರಿ. ಸೇವೆಗೆ ಸೇರುವ ಇಲಾಖೆಗಳಲ್ಲಿ ಪ್ರಾಮಾಣಿಕವಾಗಿ ಕರ್ತವ್ಯ ನಿರ್ವಹಿಸಿ. ದೇಶದ ಸರ್ವಾಂಗೀಣ ಅಭಿವೃದ್ಧಿಗೆ ಜೊತೆಜೊತೆಯಾಗಿ ಕಾರ್ಯನಿರ್ವಹಿಸೋಣ. ನಿಮ್ಮ ಮುಂದಿನ ಭವಿಷ್ಯ ಉಜ್ವಲವಾಗಿರಲಿ ಎಂದು ಹಾರೈಸಿದರು.
ಈ ಸಂದರ್ಭದಲ್ಲಿ ಆದಾಯ ತೆರಿಗೆ ಇಲಾಖೆ, ರೈಲ್ವೆ ಇಲಾಖೆ, ಅಂಚೆ ಇಲಾಖೆ, ಭಾರತೀಯ ಜೀವವಿಮಾ ನಿಗಮ (ಎಲ್.ಐ.ಸಿ), ಕರ್ನಾಟಕ ವಿಕಾಸ ಗ್ರಾಮೀಣ ಬ್ಯಾಂಕ್, ಐಐಟಿ ಸೇರಿದಂತೆ ವಿವಿಧ ಇಲಾಖೆಗಳಲ್ಲಿ ಹೊಸದಾಗಿ ನೇಮಕಾತಿ ಹೊಂದಿದ 25 ಅಭ್ಯರ್ಥಿಗಳಿಗೆ ಸಾಂಕೇತಿಕವಾಗಿ ನೇಮಕಾತಿ ಪತ್ರಗಳನ್ನು ವಿತರಿಸಲಾಯಿತು.
ಆದಾಯ ತೆರಿಗೆ ಇಲಾಖೆ 1, ರೈಲ್ವೆ ಇಲಾಖೆ 52, ಎಲ್.ಐ.ಸಿ 50, ಐಐಟಿ 18, ಅಂಚೆ ಇಲಾಖೆ 17 , ಕರ್ನಾಟಕ ವಿಕಾಸ ಗ್ರಾಮೀಣ ಬ್ಯಾಂಕ್ 10 ಒಟ್ಟಾರೆ 148 ಜನರಿಗೆ ಕಾರ್ಯಕ್ರಮದಲ್ಲಿ ನೇಮಕಾತಿ ಪತ್ರಗಳನ್ನು ನೀಡಲಾಯಿತು.
ಮುಖ್ಯ ಆದಾಯ ತೆರಿಗೆ ಆಯುಕ್ತರಾದ ಮನೋಜ ಜೋಶಿ, ಪ್ರಧಾನ ಮುಖ್ಯ ಆಯುಕ್ತೆ ಶ್ಯಾಮಾ ಬನಸಿಯಾ, ಪ್ರಧಾನ ಆದಾಯ ತೆರಿಗೆ ಆಯುಕ್ತರಾದ ಅಸಿತ ಸಿಂಗ್, ಆದಾಯ ತೆರಿಗೆ ಆಯುಕ್ತರಾದ ಎಂ.ಕೆ.ಬಿಜು, ಕೇಶವ ದೀಕ್ಷಿತ್, ದೀಪಾಲಿ, ವಿಜಯಾ, ರಾಜಕುಮಾರ ಕರಣ, ಮನೋಜ ಬೆನಗಿ ಸೇರಿದಂತೆ ಇತರ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *