


ಅತ್ಯುತ್ತಮ ಸೇವೆ ಸಲ್ಲಿಸಿದ ಶಿಕ್ಷಕರಿಗೆ ರಾಜ್ಯ ಮಟ್ಟದ ಪ್ರಶಸ್ತಿ :
ಬೆಂಗಳೂರು : ನಗರದ ಕೆಪಿಸಿಸಿ ಕಚೇರಿಯ ಸಭಾಂಗಣದಲ್ಲಿ ಕೆಪಿಸಿಸಿ ಶಿಕ್ಷಕರ ಘಟಕದ ವತಿಯಿಂದ ಆಯೋಜಿಸಿದ್ದ ಶಿಕ್ಷಕರ ದಿನಾಚರಣೆ ಕಾರ್ಯಕ್ರಮವನ್ನು ಕೆಪಿಸಿಸಿ ಅಧ್ಯಕ್ಷ, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಉದ್ಘಾಟಿಸಿದರು.
ಕೆಪಿಸಿಸಿ ಶಿಕ್ಷಕರ ಘಟಕದ ಅಧ್ಯಕ್ಷ ಗುರಿಕಾರ್ ರವರ ನೇತೃತ್ವದಲ್ಲಿ ಕೆಪಿಸಿಸಿ ಕಚೇರಿಯಲ್ಲಿ ಇದೇ ಪ್ರಥಮ ಬಾರಿಗೆ ಏರ್ಪಡಿಸಿದ್ದ ಈ ಶಿಕ್ಷಕರ ದಿನಾಚರಣೆ ಕಾರ್ಯಕ್ರಮದಲ್ಲಿ ಅತ್ಯುತ್ತಮ ಸೇವೆ ಸಲ್ಲಿಸಿದ ಶಿಕ್ಷಕರಿಗೆ ರಾಜೀವ್ ಗಾಂಧಿ ಶ್ರೇಷ್ಠ ಶಿಕ್ಷಕ ರಾಜ್ಯ ಮಟ್ಟದ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಕಾರ್ಯಕ್ರಮದಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷರಾದ ಚಂದ್ರಶೇಖರ್, ಪ್ರೊ. ಪಿ.ರಾಜೀವ್ ಗೌಡ, ಬಿ.ಪಿ.ನಿರಂಜನಾರಾಧ್ಯ. ಹರಿಪ್ರಸಾದ್ ಚೊಕ್ಕನಹಳ್ಳಿ ಸೇರಿದಂತೆ ಹಲವು ಕಾಂಗ್ರೆಸ್ ಮುಖಂಡರು, ಶಿಕ್ಷಕರ ಘಟಕದ ಎಲ್ಲಾ ಪದಾಧಿಕಾರಿಗಳು ಹಾಗೂ ರಾಜ್ಯದ ವಿವಿಧ ಜಿಲ್ಲೆಗಳಿಂದ ಆಗಮಿಸಿದ್ದ ಶಿಕ್ಷಕರಿದ್ದರು.