ಧಾರವಾಡ:- ಜಿಲ್ಲೆ ಆದ್ಯಂತ ನಿರಂತರವಾಗಿ ಮಳೆ ಸುರಿಯುತ್ತಿರುವದರಿಂದ ನಾಳೆ ಜುಲೈ 24 ರಂದು ಜಿಲ್ಲೆಯ ಎಲ್ಲ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಿಗೆ ಒಂದು ದಿನದ ರಜೆ ಘೋಷಿಸಿ, ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಅವರು ಭಾನುವಾರ ಸಂಜೆ ಆದೇಶಿಸಿದ್ದಾರೆ.
ಈ ಕುರಿತು ಪ್ರಕಟಣೆ ನೀಡಿರುವ ಅವರು, ಜಿಲ್ಲೆಯ ಎಲ್ಲ ತಾಲೂಕುಗಳಲ್ಲಿ ಕಳೆದ ಎರಡಮೂರು ದಿನಗಳಿಂದ ನಿರಂತರವಾಗಿ ಮಳೆ ಸುರಿಯುತ್ತಿದೆ. ಮಕ್ಕಳ ರಕ್ಷಣೆ ಹಿತದೃಷ್ಟಿಯಿಂದ ನಾಳೆ ಒಂದು ದಿನ ಮಾತ್ರ ಜಿಲ್ಲೆಯ ಎಲ್ಲ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಿಗೆ ರಜೆ ನೀಡಲಾಗಿದೆ.
ಈ ರಜಾ ದಿನವನ್ನು ಮುಂದಿನ ಆಗಸ್ಟ್ 5ರ ಶನಿವಾರದಂದು ಪೂರ್ಣ ದಿನ ಶಾಲೆ ನಡೆಸುವ ಮೂಲಕ ಜುಲೈ 24 ರ ರಜೆ ಹೊಂದಾಣಿಕೆ ಮಾಡಿಕೋಳ್ಳಬೇಕು. ಈ ಕುರಿತು ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕರು ಜಿಲ್ಲೆಯ ಎಲ್ಲ ಶಾಲಾ ಮುಖ್ಯಸ್ಥರಿಗೆ ಮಾಹಿತಿ ನೀಡಿ, ಸೂಕ್ತ ಕ್ರಮವಹಿಸಬೇಕೆಂದು ಅವರು ಆದೇಶದಲ್ಲಿ ತಿಳಿಸಿದ್ದಾರೆ.

ಜು.24 ರಂದು ಜಿಲ್ಲೆಯ ಎಲ್ಲ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಿಗೆ ಒಂದು ದಿನ ರಜೆ ನೀಡಿ, ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಆದೇಶ.


ಧಾರವಾಡ:- ಜಿಲ್ಲೆ ಆದ್ಯಂತ ನಿರಂತರವಾಗಿ ಮಳೆ ಸುರಿಯುತ್ತಿರುವದರಿಂದ ನಾಳೆ ಜುಲೈ 24 ರಂದು ಜಿಲ್ಲೆಯ ಎಲ್ಲ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಿಗೆ ಒಂದು ದಿನದ ರಜೆ ಘೋಷಿಸಿ, ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಅವರು ಭಾನುವಾರ ಸಂಜೆ ಆದೇಶಿಸಿದ್ದಾರೆ.
ಈ ಕುರಿತು ಪ್ರಕಟಣೆ ನೀಡಿರುವ ಅವರು, ಜಿಲ್ಲೆಯ ಎಲ್ಲ ತಾಲೂಕುಗಳಲ್ಲಿ ಕಳೆದ ಎರಡಮೂರು ದಿನಗಳಿಂದ ನಿರಂತರವಾಗಿ ಮಳೆ ಸುರಿಯುತ್ತಿದೆ. ಮಕ್ಕಳ ರಕ್ಷಣೆ ಹಿತದೃಷ್ಟಿಯಿಂದ ನಾಳೆ ಒಂದು ದಿನ ಮಾತ್ರ ಜಿಲ್ಲೆಯ ಎಲ್ಲ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಿಗೆ ರಜೆ ನೀಡಲಾಗಿದೆ.
ಈ ರಜಾ ದಿನವನ್ನು ಮುಂದಿನ ಆಗಸ್ಟ್ 5ರ ಶನಿವಾರದಂದು ಪೂರ್ಣ ದಿನ ಶಾಲೆ ನಡೆಸುವ ಮೂಲಕ ಜುಲೈ 24 ರ ರಜೆ ಹೊಂದಾಣಿಕೆ ಮಾಡಿಕೋಳ್ಳಬೇಕು. ಈ ಕುರಿತು ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕರು ಜಿಲ್ಲೆಯ ಎಲ್ಲ ಶಾಲಾ ಮುಖ್ಯಸ್ಥರಿಗೆ ಮಾಹಿತಿ ನೀಡಿ, ಸೂಕ್ತ ಕ್ರಮವಹಿಸಬೇಕೆಂದು ಅವರು ಆದೇಶದಲ್ಲಿ ತಿಳಿಸಿದ್ದಾರೆ.

Leave a Reply

Your email address will not be published. Required fields are marked *