ಯಲಹಂಕ : ಕ್ಷೇತ್ರದ
ಕಡತನಮಲೆ ಗ್ರಾಮದಲ್ಲಿ 1 ಕೋಟಿ ರು. ವೆಚ್ಚದಲ್ಲಿ ವಾಲ್ಮೀಕಿ ಸಮುದಾಯ ಭವನ ನಿರ್ಮಾಣ ಕಾಮಗಾರಿ, ನೆಲ್ಲುಕುಂಟೆ-ಕಕ್ಕೇಹಳ್ಳಿ ರಸ್ತೆ ಡಾಂಬರೀಕರಣ, ಬೈರಾಪುರದ ಅಲ್ಪಸಂಖ್ಯಾತರ ಕಾಲೋನಿಯಲ್ಲಿ ಚರಂಡಿ ಅಭಿವೃದ್ಧಿ, ಕಾರ್ಲಾಪುರ ಪಾಳ್ಯದಲ್ಲಿ ನೂತನ ಅಂಗನವಾಡಿ ಕಟ್ಟಡ ಉದ್ಘಾಟನೆ, ಬ್ಯಾತ ಸೀರೆಸಂದ್ರ‌ ಗ್ರಾಮದಲ್ಲಿ ಶುಧ್ಧ ಕುಡಿಯುವ ನೀರಿನ ಘಟಕ ಉದ್ಘಾಟನೆ, ಕಾಕೋಳು‌ ಗ್ರಾಮದಲ್ಲಿ ನೂತನ ಆಸ್ಪತ್ರೆ ಕಟ್ಟಡ ಮತ್ತು ಕೆರೆ ಅಭಿವೃದ್ಧಿ ಕಾಮಗಾರಿ ಉದ್ಘಾಟನೆ ಶ್ಯಾನುಭೊಗನಹಳ್ಳಿ‌ ಕಾಲೋನಿಯಲ್ಲಿ ರಸ್ತೆ, ಚರಂಡಿ ಅಭಿವೃದ್ಧಿ ಕಾಮಗಾರಿ, ಮುತ್ತುಗದಹಳ್ಳಿ ಗ್ರಾಮದಲ್ಲಿ ಜಲಜೀವನ ಮಿಷನ್ ನ ಮನೆ ಮನೆಗೆ ಗಂಗೆ ಯೋಜನೆ ಉದ್ಘಾಟನೆ ಸೇರಿದಂತೆ ಸುಮಾರು 2.5 ಕೋಟಿ ರು. ಅಂದಾಜು ವೆಚ್ಚದ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ಎಸ್ ಆರ್ ವಿಶ್ವನಾಥ್ ಗುರುವಾರ ಭೂಮಿಪೂಜೆ ನೆರವೇರಿಸಿದರು.

ನಂತರ ಮಾತನಾಡಿದ ಅವರು ‘ಸರ್ಕಾರದ ಅನುದಾನದ ಕೊರತೆಯ ನಡುವೆಯೂ ಕ್ಷೇತ್ರದ ಗ್ರಾಮೀಣ ಭಾಗದಲ್ಲಿ ಅಭಿವೃದ್ಧಿ ಕುಂಟಿತವಾಗಬಾರದು ಎಂಬ ದೃಷ್ಟಿಯಿಂದ 2.5 ಕೋಟಿ ರು.ವೆಚ್ಚದ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಲಾಗಿದೆ. ಸುಮ್ಮನೆ ಕೂರುವ ಜಾಯಮಾನ ನನ್ನದಲ್ಲ, ಕ್ಷೇತ್ರದ ಅಭಿವೃದ್ಧಿಗಾಗಿ ಹೆಚ್ಚಿನ ಅನುದಾನ ನೀಡುವಂತೆ ಸರ್ಕಾರಕ್ಕೆ ಮ‌ನವಿ ಮಾಡಿ, ಕ್ಷೇತ್ರದ ಗ್ರಾಮೀಣ ಭಾಗದಲ್ಲಿ ಮುಂದಿನ ದಿನಗಳಲ್ಲಿ ಇನ್ನೂ ಹೆಚ್ಚಿನ ಅಭಿವೃದ್ಧಿ ಕಾಮಗಾರಿ ಕೈಗೊಳ್ಳಲಾಗುವುದು ಎಂದರು.

ಇದೇ ಸಂದರ್ಭದಲ್ಲಿ ಬಿಜೆಪಿ ಹಿರಿಯ ಮುಖಂಡರಾದ ದಿಬ್ಬೂರು ಜಯಣ್ಣ, ಎಚ್.ಬಿ.ಹನುಮಯ್ಯ, ಚೊಕ್ಕನಹಳ್ಳಿ ವೆಂಕಟೇಶ್, ರೈತ ಮೋರ್ಚಾ ರಾಜ್ಯ ಕಾರ್ಯದರ್ಶಿ ಸತೀಶ್ ಕಡತನಮಲೆ, ಅರಕೆರೆ ಗ್ರಾ.ಪಂ. ಅಧ್ಯಕ್ಷೆ ಆಂಜಿನಮ್ಮ ಚೌಡಪ್ಪ, ಉಪಾಧ್ಯಕ್ಷ ಕೆ.ಎಂ.ಅರಸೇಗೌಡ, ಶಿವಕೋಟೆ ಗ್ರಾ.ಪಂ‌.ಅಧ್ಯಕ್ಷ ಸಂಜೀವಯ್ಯ, ಗ್ರಾ.ಪಂ. ಮಾಜಿ ಅಧ್ಯಕ್ಷರಾದ ಕೆ.ಆರ್.ತಿಮ್ಮೇಗೌಡ, ಮಾವಳಿಪುರ ರಮೇಶ್, ಬಿ.ಸಿ. ಶಶಿಕುಮಾರ್, ಲಕ್ಷ್ಮೀ ನಾರಾಯಣ ಗೌಡ, ಮುನಿಲಕ್ಷ್ಮಮ್ಮ ಪರಶುರಾಮ್, ಆರ್ ಎಸ್ಎಸ್ ಎನ್ ಬ್ಯಾಂಕ್ ನಿರ್ದೇಶಕ ಮಂಜುನಾಥ್, ಬಿಜೆಪಿ ಮುಖಂಡರಾದ ಇಟಗಲ್ ಪುರ ಮೋಹನ್, ಸಿ.ಎಲ್.ಎನ್. ಗೌಡ, ಚೊಕ್ಕನಹಳ್ಳಿ ನಾಗೇಶ್, ಮುನಿದಾಸಪ್ಪ ಗ್ರಾ.ಪಂ. ಸದಸ್ಯರಾದ ಭಾಗ್ಯಮ್ಮ ಈಶ್ವರಾಚಾರ್, ಇ.ಪವನ್ ಕುಮಾರ್, ಮಂಜುಳಾ ಅರಸೇಗೌಡ, ಶಿಲ್ಪ ರಾಜಣ್ಣ, ಮಂಜುನಾಥ್, ಮಂಜುಳಾ ಸುರೇಶ್, ಮುನಿಲಕ್ಷ್ಮಮ್ಮ, ಪದ್ಮ ಮುನಿಕೃಷ್ಣಪ್ಪ, ರಾಮಯಲ್ಲಪ್ಪ, ಸೇರಿದಂತೆ ಇನ್ನಿತರರಿದ್ದರು.

Leave a Reply

Your email address will not be published. Required fields are marked *