ಉಪ ಮುಖ್ಯಮಂತ್ರಿ ರವರಿಂದ ಪಾಲಿಕೆ ಕೇಂದ್ರ ಕಚೇರಿಯಲ್ಲಿರುವ ಕಂಟ್ರೋಲ್ ರೂಂಗೆ ದಿಢೀರ್ ಭೇಟಿ:
ನಗರದಲ್ಲಿ ಮಳೆಯಾಗುತ್ತಿರುವ ಹಿನ್ನೆಲೆ ಉಪ ಮುಖ್ಯಮಂತ್ರಿ ಹಾಗೂ ಬೆಂಗಳೂರು ನಗರಾಭಿವೃದ್ಧಿ ಸಚಿವರಾದ ಶ್ರೀ ಡಿ.ಕೆ ಶಿವಕುಮಾರ್ ರವರು ಪಾಲಿಕೆ ಕೇಂದ್ರ ಕಛೇರಿಯಲ್ಲಿರುವ ಕಂಟ್ರೋಲ್ ರೂಂಗೆ ದಿಢೀರ್ ಭೇಟಿ ಕಾರ್ಯನಿರ್ವಹಣೆಯನ್ನು ಪರಿವೀಕ್ಷಣೆ ನಡೆಸಿದರು.
ಪಾಲಿಕೆ ಕೇಂದ್ರ ಕಛೇರಿ ಅನೆಕ್ಸ್ ಕಟ್ಟಡ-3ರ 6ನೇ ಮಹಡಿಯಲ್ಲಿ ಕಂಟ್ರೋಲ್ ರೂಂ ಹಾಗೂ ಐ.ಸಿ.ಸಿ.ಸಿ(ಇಂಟಿಗ್ರೇಟೆಡ್ ಕಮಾಂಡ್ ಅಂಡ್ ಕಂಟ್ರೋಲ್ ಸೆಂಟರ್) ಗೆ ದಿಢೀರ್ ಭೇಟಿ ನೀಡಿ ಎಲ್ಲೆಲ್ಲಿ ಎಷ್ಟು ಮಳೆಯಾಗಿದೆ, ಮರಗಳು, ಮರದ ರೆಂಬೆ/ಕೊಂಬೆಗಳು ಬಿದ್ದಿರುವ ಸೇರಿದಂತೆ ಇನ್ನಿತರೆ ದೂರುಗಳ ಬಗ್ಗೆ ಮಾಹಿತಿ ಪಡೆದುಕೊಂಡರು.
ಪರಿಶೀಲನೆಯ ವೇಳೆ ಮುಖ್ಯ ಆಯುಕ್ತರಾದ ತುಷಾರ್ ಗಿರಿ ನಾಥ್ ಮಾತನಾಡಿ, ಐಸಿಸಿಸಿ ದಿನದ 24 ಗಂಟೆಯೂ ಕಾರ್ಯನಿರ್ವಹಿಸಲಿದ್ದು, 3 ಪಾಳಿಯಲ್ಲಿ ಸಿಬ್ಬಂದಿ ಕಾರ್ಯನಿರ್ವಹಿಸಲಿದ್ದಾರೆ. ಮಳೆಗಾಲದ ವೇಳೆ ನಾಗರಿಕರು ಕೇಂದ್ರ ನಿಯಂತ್ರಣ ಕೊಠಡಿಯ ಉಚಿತ ಸಂಪರ್ಕ ಸಂಖ್ಯೆ 1533ಗೆ ಕರೆ ಮಾಡಿ ದೂರು ನೀಡಿದಲ್ಲಿ ಸಂಬಂಧಪಟ್ಟ ಅಧಿಕಾರಿಗಳಿಗೆ ಸದರಿ ದೂರುಗಳ ಮಾಹಿತಿ ನೀಡಿ ಶೀಘ್ರ ಬಗೆಹರಿಸಲಿದ್ದಾರೆ.
ಪಾಲಿಕೆ ಕೇಂದ್ರ ಕಛೇರಿ ಹಾಗೂ 8 ವಲಯಗಳು ಸೇರಿದಂತೆ 9 ಶಾಶ್ವತ ನಿಯಂತ್ರಣ ಕೊಠಡಿಗಳಿದ್ದು, ಮಳೆಗಾಲದ ವೇಳೆ 63 ಉಪ ವಿಭಾಗಗಳಲ್ಲಿ ತಾತ್ಕಾಲಿಕ ನಿಯಂತ್ರಣ ಕೊಠಡಿಗಳನ್ನು ತೆರೆಯಲಾಗಿದೆ. ಪ್ರತಿ ನಿಯಂತ್ರಣ ಕೊಠಡಿಯಲ್ಲೂ ನುರಿತ ಸಿಬ್ಬಂದಿಗಳು, ವಾಹನಗಳು, ಮೋಟಾರು ಪಂಪ್ಗಳು, ಮೋಟಾರ್ ಚಾಲಿತ ಗರಗಸ, ರಿಫ್ಲೆಕ್ಟಿವ್ ಜ್ಯಾಕೆಟ್ಸ್ ಇತ್ಯಾದಿ ಯಂತ್ರೋಪಕರಣಗಳನ್ನು ಸನ್ನದ್ದ ಸ್ಥಿತಿಯಲ್ಲಿರಿಸಲಾಗಿದೆ. ಇದರ ಜೊತೆಗೆ ಅಗ್ನಿ ಶಾಮಕ ಇಲಾಕೆಯ ಸಿಬ್ಬಂದಿ ಹಾಗೂ ಎಸ್.ಡಿ.ಆರ್.ಎಫ್ ಸಿಬ್ಬಂದಿಯೂ ನಿಯಂತ್ರಣ ಕೊಠಡಿಗಳ ಸಂಪರ್ಕದಲ್ಲಿರಲಿದ್ದಾರೆ.
ಮಳೆಗಾಲದ ಸಂದರ್ಭದಲ್ಲಿ ಬಿದ್ದ ಮರಗಳು, ರೆಂಬೆ-ಕೊಂಬೆಗಳನ್ನು ತೆರವುಗೊಳಿಸುವ ಸಲುವಾಗಿ 28 ತಂಡಗಳು ಕಾರ್ಯನಿರ್ವಹಿಸಲಿವೆ.
ಬೃಹತ್ ನೀರುಗಾಲುವೆ ವಿಭಾಗದ ಮಾಹಿತಿ:
ನಗರದಲ್ಲಿ ಒಟ್ಟು 198 ಪ್ರವಾಹ ಪೀಡಿತ ಸೂಕ್ಷ್ಮ ಪ್ರದೇಶಗಳನ್ನು ಗುರುತಿಸಲಾಗಿದ್ದು, ತಹಲ್ವರೆಗೆ 118 ಸೂಕ್ಷ್ಮ ಪ್ರದೇಶಗಳಲ್ಲಿ ಶಾಶ್ವತ ಪರಿಹಾರವನ್ನು ಒದಗಿಸಲಾಗಿರುತ್ತದೆ. ಇನ್ನುಳಿದ 80 ಸೂಕ್ಷ್ಮ ಪ್ರದೇಶಗಳಲ್ಲಿ ತಾತ್ಕಾಲಿಕ ಕ್ರಮಗಳನ್ನು ಕೈಗೊಳ್ಳಲಾಗಿರುತ್ತದೆ.
ಪರಿಶೀಲನೆಯ ವೇಳೆ ಯೋಜನಾ ವಿಭಾಗದ ವಿಶೇಷ ಆಯುಕ್ತರಾದ ಡಾ. ತ್ರಿಲೋಕ್ ಚಂದ್ರ, ಪ್ರಧಾನ ಅಭಿಯಂತರರಾದ ಪ್ರಹ್ಲಾದ್, ಸೇರಿದಂತೆ ಇನ್ನಿತರೆ ಸಂಬಂಧಪಟ್ಟ ಅಧಿಕಾರಿಗಳು ಉಪಸ್ಥಿತರಿದ್ದರು.
ಮಾಧ್ಯಮ ಮಾಹಿತಿ:
ಉಪ ಮುಖ್ಯಮಂತ್ರಿ ರವರಿಂದ ಪಾಲಿಕೆ ಕೇಂದ್ರ ಕಚೇರಿಯಲ್ಲಿರುವ ಕಂಟ್ರೋಲ್ ರೂಂಗೆ ದಿಢೀರ್ ಭೇಟಿ:
ನಗರದಲ್ಲಿ ಮಳೆಯಾಗುತ್ತಿರುವ ಹಿನ್ನೆಲೆ ಉಪ ಮುಖ್ಯಮಂತ್ರಿ ಹಾಗೂ ಬೆಂಗಳೂರು ನಗರಾಭಿವೃದ್ಧಿ ಸಚಿವರಾದ ಶ್ರೀ ಡಿ.ಕೆ ಶಿವಕುಮಾರ್ ರವರು ಪಾಲಿಕೆ ಕೇಂದ್ರ ಕಛೇರಿಯಲ್ಲಿರುವ ಕಂಟ್ರೋಲ್ ರೂಂಗೆ ದಿಢೀರ್ ಭೇಟಿ ಕಾರ್ಯನಿರ್ವಹಣೆಯನ್ನು ಪರಿವೀಕ್ಷಣೆ ನಡೆಸಿದರು.
ಪಾಲಿಕೆ ಕೇಂದ್ರ ಕಛೇರಿ ಅನೆಕ್ಸ್ ಕಟ್ಟಡ-3ರ 6ನೇ ಮಹಡಿಯಲ್ಲಿ ಕಂಟ್ರೋಲ್ ರೂಂ ಹಾಗೂ ಐ.ಸಿ.ಸಿ.ಸಿ(ಇಂಟಿಗ್ರೇಟೆಡ್ ಕಮಾಂಡ್ ಅಂಡ್ ಕಂಟ್ರೋಲ್ ಸೆಂಟರ್) ಗೆ ದಿಢೀರ್ ಭೇಟಿ ನೀಡಿ ಎಲ್ಲೆಲ್ಲಿ ಎಷ್ಟು ಮಳೆಯಾಗಿದೆ, ಮರಗಳು, ಮರದ ರೆಂಬೆ/ಕೊಂಬೆಗಳು ಬಿದ್ದಿರುವ ಸೇರಿದಂತೆ ಇನ್ನಿತರೆ ದೂರುಗಳ ಬಗ್ಗೆ ಮಾಹಿತಿ ಪಡೆದುಕೊಂಡರು.
ಪರಿಶೀಲನೆಯ ವೇಳೆ ಮುಖ್ಯ ಆಯುಕ್ತರಾದ ತುಷಾರ್ ಗಿರಿ ನಾಥ್ ಮಾತನಾಡಿ, ಐಸಿಸಿಸಿ ದಿನದ 24 ಗಂಟೆಯೂ ಕಾರ್ಯನಿರ್ವಹಿಸಲಿದ್ದು, 3 ಪಾಳಿಯಲ್ಲಿ ಸಿಬ್ಬಂದಿ ಕಾರ್ಯನಿರ್ವಹಿಸಲಿದ್ದಾರೆ. ಮಳೆಗಾಲದ ವೇಳೆ ನಾಗರಿಕರು ಕೇಂದ್ರ ನಿಯಂತ್ರಣ ಕೊಠಡಿಯ ಉಚಿತ ಸಂಪರ್ಕ ಸಂಖ್ಯೆ 1533ಗೆ ಕರೆ ಮಾಡಿ ದೂರು ನೀಡಿದಲ್ಲಿ ಸಂಬಂಧಪಟ್ಟ ಅಧಿಕಾರಿಗಳಿಗೆ ಸದರಿ ದೂರುಗಳ ಮಾಹಿತಿ ನೀಡಿ ಶೀಘ್ರ ಬಗೆಹರಿಸಲಿದ್ದಾರೆ.
ಪಾಲಿಕೆ ಕೇಂದ್ರ ಕಛೇರಿ ಹಾಗೂ 8 ವಲಯಗಳು ಸೇರಿದಂತೆ 9 ಶಾಶ್ವತ ನಿಯಂತ್ರಣ ಕೊಠಡಿಗಳಿದ್ದು, ಮಳೆಗಾಲದ ವೇಳೆ 63 ಉಪ ವಿಭಾಗಗಳಲ್ಲಿ ತಾತ್ಕಾಲಿಕ ನಿಯಂತ್ರಣ ಕೊಠಡಿಗಳನ್ನು ತೆರೆಯಲಾಗಿದೆ. ಪ್ರತಿ ನಿಯಂತ್ರಣ ಕೊಠಡಿಯಲ್ಲೂ ನುರಿತ ಸಿಬ್ಬಂದಿಗಳು, ವಾಹನಗಳು, ಮೋಟಾರು ಪಂಪ್ಗಳು, ಮೋಟಾರ್ ಚಾಲಿತ ಗರಗಸ, ರಿಫ್ಲೆಕ್ಟಿವ್ ಜ್ಯಾಕೆಟ್ಸ್ ಇತ್ಯಾದಿ ಯಂತ್ರೋಪಕರಣಗಳನ್ನು ಸನ್ನದ್ದ ಸ್ಥಿತಿಯಲ್ಲಿರಿಸಲಾಗಿದೆ. ಇದರ ಜೊತೆಗೆ ಅಗ್ನಿ ಶಾಮಕ ಇಲಾಕೆಯ ಸಿಬ್ಬಂದಿ ಹಾಗೂ ಎಸ್.ಡಿ.ಆರ್.ಎಫ್ ಸಿಬ್ಬಂದಿಯೂ ನಿಯಂತ್ರಣ ಕೊಠಡಿಗಳ ಸಂಪರ್ಕದಲ್ಲಿರಲಿದ್ದಾರೆ.
ಮಳೆಗಾಲದ ಸಂದರ್ಭದಲ್ಲಿ ಬಿದ್ದ ಮರಗಳು, ರೆಂಬೆ-ಕೊಂಬೆಗಳನ್ನು ತೆರವುಗೊಳಿಸುವ ಸಲುವಾಗಿ 28 ತಂಡಗಳು ಕಾರ್ಯನಿರ್ವಹಿಸಲಿವೆ.
ಬೃಹತ್ ನೀರುಗಾಲುವೆ ವಿಭಾಗದ ಮಾಹಿತಿ:
ನಗರದಲ್ಲಿ ಒಟ್ಟು 198 ಪ್ರವಾಹ ಪೀಡಿತ ಸೂಕ್ಷ್ಮ ಪ್ರದೇಶಗಳನ್ನು ಗುರುತಿಸಲಾಗಿದ್ದು, ತಹಲ್ವರೆಗೆ 118 ಸೂಕ್ಷ್ಮ ಪ್ರದೇಶಗಳಲ್ಲಿ ಶಾಶ್ವತ ಪರಿಹಾರವನ್ನು ಒದಗಿಸಲಾಗಿರುತ್ತದೆ. ಇನ್ನುಳಿದ 80 ಸೂಕ್ಷ್ಮ ಪ್ರದೇಶಗಳಲ್ಲಿ ತಾತ್ಕಾಲಿಕ ಕ್ರಮಗಳನ್ನು ಕೈಗೊಳ್ಳಲಾಗಿರುತ್ತದೆ.
ಪರಿಶೀಲನೆಯ ವೇಳೆ ಯೋಜನಾ ವಿಭಾಗದ ವಿಶೇಷ ಆಯುಕ್ತರಾದ ಡಾ. ತ್ರಿಲೋಕ್ ಚಂದ್ರ, ಪ್ರಧಾನ ಅಭಿಯಂತರರಾದ ಪ್ರಹ್ಲಾದ್, ಸೇರಿದಂತೆ ಇನ್ನಿತರೆ ಸಂಬಂಧಪಟ್ಟ ಅಧಿಕಾರಿಗಳು ಉಪಸ್ಥಿತರಿದ್ದರು.